ಕಟ್ಟಡದ ಕುಸಿದ ಭಾಗವು ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿಯಾಗಿದ್ದು, ವಿದ್ಯಾರ್ಥಿಗಳು 10.30ರ ವೇಳೆಗೆ ಬರುವರಿದ್ದರು. ಈ ವೇಳೆ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದರು.
ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚಿಸಿದರು.
ಕಟ್ಟಡದ ಮೆಟ್ಟಿಳಿಯುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕುಸಿದಿದೆ. ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರಿಂದ ಭಾರಿ ಅನಾಹುತ ತಪ್ಪಿದೆ.
'ಪಾರಂಪರಿಕ ಕಟ್ಟಡದ ದುರಸ್ತಿ ಕಾಮಗಾರಿಯ ಭೂಮಿಪೂಜೆ ಅ.22ರ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಿರುಕುಗಳು ಹೆಚ್ಚಾಗಿದ್ದವು' ಎಂದು ಪ್ರಾಂಶುಪಾಲ ಡಾ.ರವಿ ಅವರು 'ಪ್ರಜಾವಾಣಿ'ಗೆ ತಿಳಿಸಿದರು.