<p><strong>ಮೈಸೂರು:</strong> ಇಲ್ಲಿನ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ ಅಂಚೆ ಚೀಟಿಯನ್ನು ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ಮಾಸ್ಟರ್ ಜನರಲ್ ಕೆ.ಪ್ರಕಾಶ್ ಬಿಡುಗಡೆ ಮಾಡಿದರು.</p>.<p>ನಂತರ ಮಾತನಾಡಿ, ‘ದೇಶ– ವಿದೇಶಗಳಿಗೆ ಉತ್ತಮ ವೈದ್ಯರನ್ನು ನೀಡುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ<br>ಕೊಡುಗೆಯನ್ನು ಈ ಕಾಲೇಜು ನೀಡಿದೆ. ಇಂತಹ ಅಪೂರ್ವ ಸಂಸ್ಥೆಯ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಲು ಇಲಾಖೆಗೆ ಹೆಮ್ಮೆ ಎನಿಸುತ್ತದೆ’ ಎಂದರು.</p>.<p>‘ಕಾಲೇಜಿನ ಶತಮಾನೋತ್ಸವ ಅಂಗವಾಗಿ ಸರ್ಕಾರವು ₹ 65 ಕೋಟಿ ವೆಚ್ಚದಲ್ಲಿ ಹೊರರೋಗಿಗಳ ಘಟಕ ನಿರ್ಮಾಣಕ್ಕೆ ಅನುಮತಿ ನೀಡಿದೆ’ ಎಂದು ಎಂಎಂಸಿಆರ್ಐ ನಿರ್ದೇಶಕಿ ದಾಕ್ಷಾಯಿಣಿ ತಿಳಿಸಿದರು.</p>.<p>ಎಂಎಂಸಿಆರ್ಐ ನೋಡಲ್ ಅಧಿಕಾರಿ ಡಾ.ಕೆ. ಪುರುಷೋತ್ತಮ್, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಕೃಷ್ಣೇಗೌಡ ಮಾತನಾಡಿದರು.</p>.<p>ಕರ್ನಾಟಕ ಅಂಚೆ ವೃತ್ತದ ಫಿಲಾಟೆಲಿ ವಿಭಾಗದ ಸಹಾಯಕ ನಿರ್ದೇಶಕಿ ಶಾಂತಲಾ ಭಟ್, ಮೈಸೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಜಿ. ಹರೀಶ್, ಉಪ ಅಧೀಕ್ಷಕ ವಿ.ಎಲ್. ನವೀನ್, ನಗರದ ಪ್ರಧಾನ ಅಂಚೆ ಕಚೇರಿಯ ಹಿರಿಯ ಅಂಚೆಪಾಲಕ ಸೋಮಯ್ಯ, ಡಾ.ಶಶಿಧರ್, ಡಾ.ಪುರುಷೋತ್ತಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ವೈದ್ಯಕೀಯ ಕಾಲೇಜು ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ ಅಂಚೆ ಚೀಟಿಯನ್ನು ಅಂಚೆ ಇಲಾಖೆಯ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ಮಾಸ್ಟರ್ ಜನರಲ್ ಕೆ.ಪ್ರಕಾಶ್ ಬಿಡುಗಡೆ ಮಾಡಿದರು.</p>.<p>ನಂತರ ಮಾತನಾಡಿ, ‘ದೇಶ– ವಿದೇಶಗಳಿಗೆ ಉತ್ತಮ ವೈದ್ಯರನ್ನು ನೀಡುವ ಮೂಲಕ ಆರೋಗ್ಯ ಕ್ಷೇತ್ರಕ್ಕೆ ತನ್ನದೇ ಆದ ವಿಶಿಷ್ಟ<br>ಕೊಡುಗೆಯನ್ನು ಈ ಕಾಲೇಜು ನೀಡಿದೆ. ಇಂತಹ ಅಪೂರ್ವ ಸಂಸ್ಥೆಯ ಕುರಿತ ಅಂಚೆ ಚೀಟಿ ಬಿಡುಗಡೆ ಮಾಡಲು ಇಲಾಖೆಗೆ ಹೆಮ್ಮೆ ಎನಿಸುತ್ತದೆ’ ಎಂದರು.</p>.<p>‘ಕಾಲೇಜಿನ ಶತಮಾನೋತ್ಸವ ಅಂಗವಾಗಿ ಸರ್ಕಾರವು ₹ 65 ಕೋಟಿ ವೆಚ್ಚದಲ್ಲಿ ಹೊರರೋಗಿಗಳ ಘಟಕ ನಿರ್ಮಾಣಕ್ಕೆ ಅನುಮತಿ ನೀಡಿದೆ’ ಎಂದು ಎಂಎಂಸಿಆರ್ಐ ನಿರ್ದೇಶಕಿ ದಾಕ್ಷಾಯಿಣಿ ತಿಳಿಸಿದರು.</p>.<p>ಎಂಎಂಸಿಆರ್ಐ ನೋಡಲ್ ಅಧಿಕಾರಿ ಡಾ.ಕೆ. ಪುರುಷೋತ್ತಮ್, ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಡಾ.ಕೃಷ್ಣೇಗೌಡ ಮಾತನಾಡಿದರು.</p>.<p>ಕರ್ನಾಟಕ ಅಂಚೆ ವೃತ್ತದ ಫಿಲಾಟೆಲಿ ವಿಭಾಗದ ಸಹಾಯಕ ನಿರ್ದೇಶಕಿ ಶಾಂತಲಾ ಭಟ್, ಮೈಸೂರು ಅಂಚೆ ವಿಭಾಗದ ಹಿರಿಯ ಅಧೀಕ್ಷಕ ಜಿ. ಹರೀಶ್, ಉಪ ಅಧೀಕ್ಷಕ ವಿ.ಎಲ್. ನವೀನ್, ನಗರದ ಪ್ರಧಾನ ಅಂಚೆ ಕಚೇರಿಯ ಹಿರಿಯ ಅಂಚೆಪಾಲಕ ಸೋಮಯ್ಯ, ಡಾ.ಶಶಿಧರ್, ಡಾ.ಪುರುಷೋತ್ತಮ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>