<p><strong>ಮೈಸೂರು</strong>: ಇಲ್ಲಿನ ಮಾನಸಗಂಗೋತ್ರಿಯಲ್ಲಿರುವ ಜಯಲಕ್ಷ್ಮೀವಿಲಾಸ ಅರಮನೆ ಮತ್ತು ಜಾನಪದ ವಸ್ತುಸಂಗ್ರಹಾಲಯದ ಸಂರಕ್ಷಣೆ ಕೈಗೊಂಡಿರುವ ‘ಡೆಕ್ಕನ್ ಹೆರಿಟೇಜ್ ಫೌಂಡೇಷನ್ ಆಫ್ ಇಂಡಿಯಾ’ ಮತ್ತು ಅಮೆರಿಕ ರಾಯಭಾರಿ ಕಚೇರಿ ಪ್ರತಿನಿಧಿಗಳು ಗುರುವಾರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.</p>.<p>ಡೆಕ್ಕನ್ ಹೆರಿಟೇಜ್ ಸಂಸ್ಥೆಯು ₹33 ಕೋಟಿ ವೆಚ್ಚದಲ್ಲಿ ಸಂರಕ್ಷಣಾ ಕಾರ್ಯ ಕೈಗೊಂಡಿದೆ. ಕಟ್ಟಡದ ಪಶ್ಚಿಮ ಭಾಗಕ್ಕೆ ಯುಎಸ್ ಕಾನ್ಸುಲೇಟ್ ₹2.4 ಕೋಟಿ ನೀಡಿದೆ. 2025ರ ಡಿಸೆಂಬರ್ಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಯುಎಸ್ ಕಾನ್ಸುಲೇಟ್ನ ಪಬ್ಲಿಕ್ ಡಿಪ್ಲಮಸಿ ಅಫೇರ್ಸ್ ರಾಯಭಾರಿ ಜಿಯಾನ್ ಬ್ರಿಗಾಂಟಿ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜ್ ಮಾತನಾಡಿ, ‘ನಮಗೆ ಸಂರಕ್ಷಣಾ ಕಾರ್ಯದ ಸಮಯದಲ್ಲಿ ಕೆಲಸಗಾರರ ಸಮಸ್ಯೆ ಎದುರಾಗಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ಮೈಸೂರು ವಿವಿಯು ಪೂರ್ಣ ಪ್ರಮಾಣದ ಸಹಕಾರ ನೀಡಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಹೆಚ್ಚು ನೆರವಾಗಲಿದೆ’ ಎಂದರು.</p>.<p>ಜಯಲಕ್ಷ್ಮೀವಿಲಾಸದ ಮೇಲುಸ್ತುವಾರಿ ಗುರುಸಿದ್ದಯ್ಯ, ಎಂಜಿನಿಯರ್ ಅಖಿಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಮಾನಸಗಂಗೋತ್ರಿಯಲ್ಲಿರುವ ಜಯಲಕ್ಷ್ಮೀವಿಲಾಸ ಅರಮನೆ ಮತ್ತು ಜಾನಪದ ವಸ್ತುಸಂಗ್ರಹಾಲಯದ ಸಂರಕ್ಷಣೆ ಕೈಗೊಂಡಿರುವ ‘ಡೆಕ್ಕನ್ ಹೆರಿಟೇಜ್ ಫೌಂಡೇಷನ್ ಆಫ್ ಇಂಡಿಯಾ’ ಮತ್ತು ಅಮೆರಿಕ ರಾಯಭಾರಿ ಕಚೇರಿ ಪ್ರತಿನಿಧಿಗಳು ಗುರುವಾರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು.</p>.<p>ಡೆಕ್ಕನ್ ಹೆರಿಟೇಜ್ ಸಂಸ್ಥೆಯು ₹33 ಕೋಟಿ ವೆಚ್ಚದಲ್ಲಿ ಸಂರಕ್ಷಣಾ ಕಾರ್ಯ ಕೈಗೊಂಡಿದೆ. ಕಟ್ಟಡದ ಪಶ್ಚಿಮ ಭಾಗಕ್ಕೆ ಯುಎಸ್ ಕಾನ್ಸುಲೇಟ್ ₹2.4 ಕೋಟಿ ನೀಡಿದೆ. 2025ರ ಡಿಸೆಂಬರ್ಗೆ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಯುಎಸ್ ಕಾನ್ಸುಲೇಟ್ನ ಪಬ್ಲಿಕ್ ಡಿಪ್ಲಮಸಿ ಅಫೇರ್ಸ್ ರಾಯಭಾರಿ ಜಿಯಾನ್ ಬ್ರಿಗಾಂಟಿ ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜ್ ಮಾತನಾಡಿ, ‘ನಮಗೆ ಸಂರಕ್ಷಣಾ ಕಾರ್ಯದ ಸಮಯದಲ್ಲಿ ಕೆಲಸಗಾರರ ಸಮಸ್ಯೆ ಎದುರಾಗಿದ್ದು ಹೊರತುಪಡಿಸಿದರೆ ಬೇರೆ ಯಾವುದೇ ಸಮಸ್ಯೆ ಕಂಡುಬರಲಿಲ್ಲ. ಮೈಸೂರು ವಿವಿಯು ಪೂರ್ಣ ಪ್ರಮಾಣದ ಸಹಕಾರ ನೀಡಿದೆ. ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಹೆಚ್ಚು ನೆರವಾಗಲಿದೆ’ ಎಂದರು.</p>.<p>ಜಯಲಕ್ಷ್ಮೀವಿಲಾಸದ ಮೇಲುಸ್ತುವಾರಿ ಗುರುಸಿದ್ದಯ್ಯ, ಎಂಜಿನಿಯರ್ ಅಖಿಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>