<p><strong>ಮೈಸೂರು</strong>: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘ ಅಸ್ತಿತ್ವಕ್ಕೆ ಬಂದಿದೆ.</p>.<p>ಸಂಘದ ಉದ್ಘಾಟನೆ ಹಾಗೂ ನೌಕರರ ಸಮಾವೇಶ ಇಲ್ಲಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ನೌಕರರು ಪಾಲ್ಗೊಂಡಿದ್ದರು.</p>.<p>ಸಂಘದ ಉದ್ಘಾಟನೆ ನೆರವೇರಿಸಿದ ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಗೆ ಬಡ್ತಿ ಮೀಸಲಾತಿ ಕೊಡಿಸಲಾಗುವುದು. ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಗ್ರಾಮ ಸಭೆಗಳಲ್ಲಿ ನಮ್ಮಜಾತಿ–ಪಕ್ಷದವನು ಎನ್ನುವ ರೀತಿಯಲ್ಲಿ ಚರ್ಚೆ, ಜಂಗೀಕುಸ್ತಿ ನಡೆಯುತ್ತದೆಯೇ ಹೊರತು ರಚನಾತ್ಮಕ ಚರ್ಚೆ ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು. ‘ಗ್ರಾಮ ಪಂಚಾಯಿತಿಗಳಲ್ಲಿನ ಆಡಳಿತ ಪಾರದರ್ಶಕವಾಗಿ ನಡೆಯಬೇಕು. ತುಳಿತಕ್ಕೆ ಒಳಗಾದವರನ್ನು ಮೇಲೆತ್ತುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎ.ಎರ್. ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ತ ಸಿದ್ದರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್ಕುಮಾರ್ ಹಾಗೂ ಜಿಲ್ಲಾ ಅಧ್ಯಕ್ಷ ಪ್ರಕಾಶ ಸಿ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘ ಅಸ್ತಿತ್ವಕ್ಕೆ ಬಂದಿದೆ.</p>.<p>ಸಂಘದ ಉದ್ಘಾಟನೆ ಹಾಗೂ ನೌಕರರ ಸಮಾವೇಶ ಇಲ್ಲಿನ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ನೌಕರರು ಪಾಲ್ಗೊಂಡಿದ್ದರು.</p>.<p>ಸಂಘದ ಉದ್ಘಾಟನೆ ನೆರವೇರಿಸಿದ ಸಮಾಜಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರಿಗೆ ಬಡ್ತಿ ಮೀಸಲಾತಿ ಕೊಡಿಸಲಾಗುವುದು. ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಗ್ರಾಮ ಸಭೆಗಳಲ್ಲಿ ನಮ್ಮಜಾತಿ–ಪಕ್ಷದವನು ಎನ್ನುವ ರೀತಿಯಲ್ಲಿ ಚರ್ಚೆ, ಜಂಗೀಕುಸ್ತಿ ನಡೆಯುತ್ತದೆಯೇ ಹೊರತು ರಚನಾತ್ಮಕ ಚರ್ಚೆ ಆಗುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು. ‘ಗ್ರಾಮ ಪಂಚಾಯಿತಿಗಳಲ್ಲಿನ ಆಡಳಿತ ಪಾರದರ್ಶಕವಾಗಿ ನಡೆಯಬೇಕು. ತುಳಿತಕ್ಕೆ ಒಳಗಾದವರನ್ನು ಮೇಲೆತ್ತುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಎ.ಎರ್. ಕೃಷ್ಣಮೂರ್ತಿ, ವಿಧಾನಪರಿಷತ್ ಸದಸ್ಯ ಡಾ.ಯತೀಂದ್ತ ಸಿದ್ದರಾಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಸಂಘದ ರಾಜ್ಯಾಧ್ಯಕ್ಷ ಎಂ.ಸುರೇಶ್ಕುಮಾರ್ ಹಾಗೂ ಜಿಲ್ಲಾ ಅಧ್ಯಕ್ಷ ಪ್ರಕಾಶ ಸಿ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>