ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮೈಸೂರು: ತಿದ್ದಿದ ಅಂಕ ಹೋರಾಟದ ಬಳಿಕ ವಾಪಸ್!

ಮೈಸೂರು ವಿ.ವಿ. ದೈಹಿಕ ಶಿಕ್ಷಣ ವಿಭಾಗ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
Published : 16 ಏಪ್ರಿಲ್ 2025, 6:48 IST
Last Updated : 16 ಏಪ್ರಿಲ್ 2025, 6:48 IST
ಫಾಲೋ ಮಾಡಿ
Comments
ವಿಭಾಗದ ಮುಖ್ಯಸ್ಥರ ವಿರುದ್ಧ ದೂರು
ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಸಿ. ವೆಂಕಟೇಶ್‌ ವಿರುದ್ಧ ಕೆಲವು ವಿದ್ಯಾರ್ಥಿಗಳು ಉಪನ್ಯಾಸಕರಿಂದಲೇ ದೂರು ಕೇಳಿಬಂದಿದೆ. ‘ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಅಂಕಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಕ್ರೀಡಾಂಗಣ ನೀಡದೇ ಖಾಸಗಿಯವರಿಗೆ ನೀಡಲಾಗುತ್ತಿದೆ. ₹3–4 ಸಾವಿರ ಮೌಲ್ಯದ ಸಮವಸ್ತ್ರಕ್ಕೆ ₹10–12ಸಾವಿರದವರೆಗೆ ಶುಲ್ಕ ಪಡೆಯುತ್ತಿದ್ದು ರಸೀದಿ ನೀಡುತ್ತಿಲ್ಲ. ಮುಖ್ಯಸ್ಥರ ನೇಮಕದ ಕುರಿತೇ ದೂರುಗಳು ಇದ್ದು ಕುಲಪತಿ ಹಂತದಲ್ಲಿ ತನಿಖೆ ನಡೆಸಬೇಕು’ ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಾರೆ.
ವೆಂಕಟೇಶ್‌

ವೆಂಕಟೇಶ್‌

ಉಪನ್ಯಾಸಕರಿಂದ ಲೋಪ; ವೆಂಕಟೇಶ್‌
‘ವಾಲಿಬಾಲ್‌ ಕ್ರೀಡೆಯ ಆಂತರಿಕ ಮೌಲ್ಯಮಾಪನದ ಸಿ–1 ಸಿ–2 ಅಂಕಗಳನ್ನು ತಿದ್ದಿರುವ ಕುರಿತು ವಿದ್ಯಾರ್ಥಿಗಳು ದೂರು ನೀಡಿದ್ದರು. ವೈಟ್ನರ್ ಬಳಸಿ ಅಂಕ ತಿದ್ದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಿಸಿದ ಉಪನ್ಯಾಸಕರಿಗೆ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರು ಈಗಾಗಲೇ ನೋಟಿಸ್ ನೀಡಿ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಇದರಲ್ಲಿ ನನ್ನ ಪಾತ್ರವೇನು ಇಲ್ಲ’ ಎಂದು ಮೈಸೂರು ವಿ.ವಿ. ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ವೆಂಕಟೇಶ್‌ ‘ಪ್ರಜಾವಾಣಿ’ಗೆ ತಿಳಿಸಿದರು. ‘ದಲಿತ ವಿದ್ಯಾರ್ಥಿಗಳೂ ಸೇರಿದಂತೆ ಯಾರನ್ನೂ ಟಾರ್ಗೆಟ್‌ ಮಾಡಿಲ್ಲ. ಇಲಾಖೆಯಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಕೆಲವರು ಉದ್ದೇಶಪೂರ್ವಕವಾಗಿಯೇ ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಮಾಧ್ಯಮದ ಮೂಲಕವೇ ಉತ್ತರ ನೀಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT