‘ಸಾರ್ವಜನಿಕ ಉದ್ದೇಶಗಳಿಗೆ ಪ್ರಾಧಿಕಾರ ವತಿಯಿಂದ ಸಿಎ ನಿವೇಶನ ನೀಡಲಾಗುತ್ತಿದೆ. ಕೆಲ ನಿವೇಶನಗಳನ್ನು ಹಂಚಿಕೆ ಮಾಡಿ ಸುಮಾರು 40-50 ವರ್ಷಗಳಾಗಿವೆ. ಕೆಲವರು ವಾಣಿಜ್ಯ ಹಾಗೂ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಅಂಥ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಂಡು, ಪ್ರಾಧಿಕಾರಕ್ಕೆ ಆದಾಯ ಬರುವ ರೀತಿಯಲ್ಲಿ ಕಟ್ಟಡವನ್ನು ಬಳಸಿಕೊಳ್ಳಲಾಗುವುದು. ನಿಯಮ ಮೀರಿದವರ ವಿರುದ್ಧ ಕಾನೂನು ಕ್ರಮವನ್ನೂ ಕೈಗೊಳ್ಳಲಾಗುವುದು’ ಎಂದು ಮುಡಾ ಆಯುಕ್ತ ಡಿ.ಬಿ.ನಟೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.