<p><strong>ಮೈಸೂರು: </strong>ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ನ ಪರಿಮಳಾ ಶ್ಯಾಂ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ನ ಗೌರಮ್ಮ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಾಗಿ ಇವರಿಬ್ಬರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಗುರುಸ್ವಾಮಿ ನಾಮಪತ್ರ ಸಲ್ಲಿಸಿದ್ದರೂ, ಬಳಿಕ ವಾಪಸ್ ತೆಗೆದುಕೊಂಡರು.</p>.<p>ಬಿಜೆಪಿಗೆ ದ್ರೋಹ ಬಗೆದ ಜೆಡಿಎಸ್ ಗೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಹೊರನಡೆದರು.</p>.<p>ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಜತೆಗಿನ ಮೂರು ವರ್ಷಗಳ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಜತೆ ಅಧಿಕಾರ ಹಂಚಿಕೊಳ್ಳಲು ಜೆಡಿಎಸ್ ತೀರ್ಮಾನಿಸಿತ್ತು.</p>.<p>49 ಸದಸ್ಯ ಬಲದ ಜಿ.ಪಂ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟು 40 ಸದಸ್ಯರನ್ನು ಹೊಂದಿವೆ. ಬಿಜೆಪಿ 8 ಸ್ಥಾನ ಹೊಂದಿದ್ದು, ಒಬ್ಬರು ಪಕ್ಷೇತರ ಸದಸ್ಯ ಇದ್ದಾರೆ.</p>.<p>ಸಚಿವರಾದ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೇಗೌಡ ಒಳಗೊಂಡಂತೆ ಜೆಡಿಎಸ್ ನ ಸ್ಥಳೀಯ ಮುಖಂಡರಿಗೆ ಕಾಂಗ್ರೆಸ್ ಜತೆ ಕೈಜೋಡಿಸಲು ಇಷ್ಟವಿರಲಿಲ್ಲ. ಬಿಜೆಪಿ ಜತೆ ಐದು ವರ್ಷ ಮೈತ್ರಿ ಮುಂದುವರಿಯಲಿದೆ ಎಂದು ಹೇಳುತ್ತಲೇ ಇದ್ದರು.</p>.<p>ಆದರೆ ಶುಕ್ರವಾರ ರಾತ್ರಿ ದಿಢೀರ್ ಬೆಳವಣಿಗೆ ನಡೆದು, ಬಿಜೆಪಿ ಜತೆಗಿನ ಮೈತ್ರಿ ಮುರಿದು ಕಾಂಗ್ರೆಸ್ ಜತೆ ಕೈಜೋಡಿಸಲು ಜೆಡಿಎಸ್ ತೀರ್ಮಾನಿಸಿತ್ತು.</p>.<p>ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಥಳೀಯ ಮುಖಂಡರಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಜೆಡಿಎಸ್ ನ ಪರಿಮಳಾ ಶ್ಯಾಂ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ನ ಗೌರಮ್ಮ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.</p>.<p>ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಾಗಿ ಇವರಿಬ್ಬರು ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಗುರುಸ್ವಾಮಿ ನಾಮಪತ್ರ ಸಲ್ಲಿಸಿದ್ದರೂ, ಬಳಿಕ ವಾಪಸ್ ತೆಗೆದುಕೊಂಡರು.</p>.<p>ಬಿಜೆಪಿಗೆ ದ್ರೋಹ ಬಗೆದ ಜೆಡಿಎಸ್ ಗೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಹೊರನಡೆದರು.</p>.<p>ಮೈಸೂರು ಜಿಲ್ಲಾ ಪಂಚಾಯಿತಿಯಲ್ಲಿ ಬಿಜೆಪಿ ಜತೆಗಿನ ಮೂರು ವರ್ಷಗಳ ಮೈತ್ರಿ ಮುರಿದುಕೊಂಡು ಕಾಂಗ್ರೆಸ್ ಜತೆ ಅಧಿಕಾರ ಹಂಚಿಕೊಳ್ಳಲು ಜೆಡಿಎಸ್ ತೀರ್ಮಾನಿಸಿತ್ತು.</p>.<p>49 ಸದಸ್ಯ ಬಲದ ಜಿ.ಪಂ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟು 40 ಸದಸ್ಯರನ್ನು ಹೊಂದಿವೆ. ಬಿಜೆಪಿ 8 ಸ್ಥಾನ ಹೊಂದಿದ್ದು, ಒಬ್ಬರು ಪಕ್ಷೇತರ ಸದಸ್ಯ ಇದ್ದಾರೆ.</p>.<p>ಸಚಿವರಾದ ಸಾ.ರಾ.ಮಹೇಶ್ ಮತ್ತು ಜಿ.ಟಿ.ದೇವೇಗೌಡ ಒಳಗೊಂಡಂತೆ ಜೆಡಿಎಸ್ ನ ಸ್ಥಳೀಯ ಮುಖಂಡರಿಗೆ ಕಾಂಗ್ರೆಸ್ ಜತೆ ಕೈಜೋಡಿಸಲು ಇಷ್ಟವಿರಲಿಲ್ಲ. ಬಿಜೆಪಿ ಜತೆ ಐದು ವರ್ಷ ಮೈತ್ರಿ ಮುಂದುವರಿಯಲಿದೆ ಎಂದು ಹೇಳುತ್ತಲೇ ಇದ್ದರು.</p>.<p>ಆದರೆ ಶುಕ್ರವಾರ ರಾತ್ರಿ ದಿಢೀರ್ ಬೆಳವಣಿಗೆ ನಡೆದು, ಬಿಜೆಪಿ ಜತೆಗಿನ ಮೈತ್ರಿ ಮುರಿದು ಕಾಂಗ್ರೆಸ್ ಜತೆ ಕೈಜೋಡಿಸಲು ಜೆಡಿಎಸ್ ತೀರ್ಮಾನಿಸಿತ್ತು.</p>.<p>ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸ್ಥಳೀಯ ಮುಖಂಡರಿಗೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>