<p><strong>ಮೈಸೂರು: </strong>ಮೈಸೂರು ಭಾಗಕ್ಕೆ ಸ್ವಾತಂತ್ರ್ಯ ದೊರೆಯಲು ಕಾರಣವಾದ ಮೈಸೂರು ಚಲೋ ಚಳವಳಿಯ ಸ್ಮರಣಾರ್ಥ ಕಾರ್ಯಕ್ರಮ, ನಗರದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನದಲ್ಲಿ ಗುರುವಾರ ನಡೆಯಿತು.</p>.<p>ಮೈಸೂರು ನಗರ ಮತ್ತು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಡೆದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಹೋರಾಟದ ಹಾದಿಯನ್ನು ನೆನೆದರು.</p>.<p>ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ (ಸುಬ್ಬರಾಯನ ಕೆರೆ)ದಲ್ಲಿ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಮಾತನಾಡಿ, ‘1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಬಂದರೂ ಮೈಸೂರಿನಲ್ಲಿ ರಾಜಮನೆತನದ ಆಡಳಿತವಿತ್ತು. ಆ ಬಳಿಕ ಹಳೇ ಮೈಸೂರು ರಾಜ್ಯದಲ್ಲಿಯೂ ಪ್ರಜಾಪ್ರಭುತ್ವ ಆಡಳಿತ ಜಾರಿಗೆ ತರಬೇಕೆಂದು ತೀವ್ರ ಹೋರಾಟ ಆರಂಭಗೊಂಡ ಹಿನ್ನೆಲೆಯಲ್ಲಿ, ಆ.24ರಂದು ಹಳೆ ಮೈಸೂರು ಪ್ರಾಂತ್ಯದಲ್ಲಿ ರಾಜರ ಆಳ್ವಿಕೆ ಕೊನೆಗೊಳಿಸಿ ತ್ರಿವರ್ಣ ಧ್ವಜ ಹಾರಿಸಿ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು.’</p>.<p>‘ಇದಕ್ಕಾಗಿ ಸೆ.1ರಿಂದ ಅ.14ರವರೆಗೆ ಮೈಸೂರು ಚಲೋ ಚಳವಳಿ ನಡೆದದ್ದು ಈಗ ಇತಿಹಾಸ. ರಾಜಾಳ್ವಿಕೆ ಕೊನೆಯಾಗಿ ಜನಪರ ಸರ್ಕಾರ ರಚನೆಯಾದದ್ದು 1947ರ ಅ.24ರಂದು. ಹಾಗಾಗಿ, ಆ ದಿನವನ್ನು ಮೈಸೂರು ಚಲೋ ದಿನವೆಂದು ಆಚರಿಸಲಾಗುತ್ತದೆ’ ಎಂದು ಹೇಳಿದರು.</p>.<p>ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಡಿ.ಎಚ್.ಜಗದೀಶ್, ಸಿ.ಆರ್.ರಂಗಶೆಟ್ಟಿ, ಪುಟ್ಟಣ್ಣ, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಮತ್ತಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೈಸೂರು ಭಾಗಕ್ಕೆ ಸ್ವಾತಂತ್ರ್ಯ ದೊರೆಯಲು ಕಾರಣವಾದ ಮೈಸೂರು ಚಲೋ ಚಳವಳಿಯ ಸ್ಮರಣಾರ್ಥ ಕಾರ್ಯಕ್ರಮ, ನಗರದ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಉದ್ಯಾನದಲ್ಲಿ ಗುರುವಾರ ನಡೆಯಿತು.</p>.<p>ಮೈಸೂರು ನಗರ ಮತ್ತು ಜಿಲ್ಲಾ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಡೆದ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಹೋರಾಟದ ಹಾದಿಯನ್ನು ನೆನೆದರು.</p>.<p>ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನ (ಸುಬ್ಬರಾಯನ ಕೆರೆ)ದಲ್ಲಿ ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯ ಹೋರಾಟಗಾರರೆಲ್ಲರೂ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.</p>.<p>ಸಂಘದ ಅಧ್ಯಕ್ಷ ಡಾ.ಎಂ.ಜಿ.ಕೃಷ್ಣಮೂರ್ತಿ ಮಾತನಾಡಿ, ‘1947ರ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ಬಂದರೂ ಮೈಸೂರಿನಲ್ಲಿ ರಾಜಮನೆತನದ ಆಡಳಿತವಿತ್ತು. ಆ ಬಳಿಕ ಹಳೇ ಮೈಸೂರು ರಾಜ್ಯದಲ್ಲಿಯೂ ಪ್ರಜಾಪ್ರಭುತ್ವ ಆಡಳಿತ ಜಾರಿಗೆ ತರಬೇಕೆಂದು ತೀವ್ರ ಹೋರಾಟ ಆರಂಭಗೊಂಡ ಹಿನ್ನೆಲೆಯಲ್ಲಿ, ಆ.24ರಂದು ಹಳೆ ಮೈಸೂರು ಪ್ರಾಂತ್ಯದಲ್ಲಿ ರಾಜರ ಆಳ್ವಿಕೆ ಕೊನೆಗೊಳಿಸಿ ತ್ರಿವರ್ಣ ಧ್ವಜ ಹಾರಿಸಿ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಯಿತು.’</p>.<p>‘ಇದಕ್ಕಾಗಿ ಸೆ.1ರಿಂದ ಅ.14ರವರೆಗೆ ಮೈಸೂರು ಚಲೋ ಚಳವಳಿ ನಡೆದದ್ದು ಈಗ ಇತಿಹಾಸ. ರಾಜಾಳ್ವಿಕೆ ಕೊನೆಯಾಗಿ ಜನಪರ ಸರ್ಕಾರ ರಚನೆಯಾದದ್ದು 1947ರ ಅ.24ರಂದು. ಹಾಗಾಗಿ, ಆ ದಿನವನ್ನು ಮೈಸೂರು ಚಲೋ ದಿನವೆಂದು ಆಚರಿಸಲಾಗುತ್ತದೆ’ ಎಂದು ಹೇಳಿದರು.</p>.<p>ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಡಿ.ಎಚ್.ಜಗದೀಶ್, ಸಿ.ಆರ್.ರಂಗಶೆಟ್ಟಿ, ಪುಟ್ಟಣ್ಣ, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್ ಮತ್ತಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>