ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲ ಹಂತದಲ್ಲಿ ₹ 150 ಕೋಟಿ ಬಿಡುಗಡೆಯಾಗಿದೆ. ರನ್ ವೇ ವಿಸ್ತರಣೆಗೆ 160 ಎಕರೆ ಜಮೀನು ಬೇಕು. ಈವರೆಗೆ 47 ಎಕರೆಗೆ ಅಧಿಸೂಚನೆ ಹೊರಡಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಮೈಸೂರು- ನಂಜನಗೂಡು ಹೆದ್ದಾರಿಯನ್ನು ಡೈವರ್ಟ್ ಮಾಡಲಾಗುವುದು’ ಎಂದು ಹೇಳಿದರು.