<p>ಮೈಸೂರು: ‘ಡಾ.ಬಿ.ಆರ್. ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದವರೂ ಒಗ್ಗೂಡಿ ಜಯಂತಿ ಆಚರಿಸಿ ಅವರ ವಿಚಾರಧಾರೆ ಅಳವಡಿಸಿಕೊಳ್ಳಬೇಕು’ ಎಂದು ‘ಮೈಮುಲ್’ ಅಧ್ಯಕ್ಷ ಕೆ.ಈರೇಗೌಡ ಹೇಳಿದರು.</p>.<p>ಇಲ್ಲಿನ ಆಲನಹಳ್ಳಿಯ ‘ಮೈಮುಲ್’ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅವರು ಹೆಚ್ಚು ಕಾಲ ಬದುಕಿದ್ದರೆ ದೇಶ ಮತ್ತಷ್ಟು ಉನ್ನತ ಸ್ಥಿತಿ ತಲುಪುತ್ತಿತ್ತು. ಹಿಂದೆ ನಮ್ಮ ದೇಶವನ್ನು ಉಳ್ಳ ಸಮುದಾಯದವರು ಆಳುತ್ತಿದ್ದರು. ಅಂಬೇಡ್ಕರ್ ಸಂವಿಧಾನ ನೀಡಿದ ಬಳಿಕ ಸಮಾನತೆ, ಎಲ್ಲರಿಗೂ ಶಿಕ್ಷಣ ಹಾಗೂ ಅಧಿಕಾರ ಸಿಗುವಂತಾಯಿತು’ ಎಂದರು.</p>.<p>‘ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ಬದಲಾವಣೆ ಸಾಧ್ಯವಾಗಿದೆ. ಮಕ್ಕಳನ್ನು ಜಾತ್ಯತೀತರನ್ನಾಗಿ ಬೆಳೆಸೋಣ. ಅವರಿಗೆ ಸಂವಿಧಾನ ಹಾಗೂ ಶಿಕ್ಷಣದ ಬಗ್ಗೆ ತಿಳಿಸೋಣ’ ಎಂದು ಪ್ರಭಾರ ವ್ಯವಸ್ಥಾಪಕಿ (ಆಡಳಿತ ವಿಭಾಗ) ಸೌಮ್ಯಾ ಹೇಳಿದರು.</p>.<p>ಮೈಮುಲ್ ನಿರ್ದೇಶಕರಾದ ಓಂಪ್ರಕಾಶ್ ಹಾಗೂ ಬಿ.ಎನ್.ಸದಾನಂದ ಮಾತನಾಡಿದರು. 11 ವರ್ಷದ ಬಾಲಕ ದೇವನಶ್ ಇಂಗ್ಲಿಷ್ನಲ್ಲಿ ಭಾಷಣ ಮಾಡಿ ಗಮನಸೆಳೆದರು.</p>.<p>ವ್ಯವಸ್ಥಾಪಕ ನಿರ್ದೇಶಕ ಸುರೇಶ್ ನಾಯ್ಕ್, ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-227661716</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಡಾ.ಬಿ.ಆರ್. ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಾಗಿಲ್ಲ. ಎಲ್ಲಾ ಸಮುದಾಯದವರೂ ಒಗ್ಗೂಡಿ ಜಯಂತಿ ಆಚರಿಸಿ ಅವರ ವಿಚಾರಧಾರೆ ಅಳವಡಿಸಿಕೊಳ್ಳಬೇಕು’ ಎಂದು ‘ಮೈಮುಲ್’ ಅಧ್ಯಕ್ಷ ಕೆ.ಈರೇಗೌಡ ಹೇಳಿದರು.</p>.<p>ಇಲ್ಲಿನ ಆಲನಹಳ್ಳಿಯ ‘ಮೈಮುಲ್’ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂಬೇಡ್ಕರ್ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅವರು ಹೆಚ್ಚು ಕಾಲ ಬದುಕಿದ್ದರೆ ದೇಶ ಮತ್ತಷ್ಟು ಉನ್ನತ ಸ್ಥಿತಿ ತಲುಪುತ್ತಿತ್ತು. ಹಿಂದೆ ನಮ್ಮ ದೇಶವನ್ನು ಉಳ್ಳ ಸಮುದಾಯದವರು ಆಳುತ್ತಿದ್ದರು. ಅಂಬೇಡ್ಕರ್ ಸಂವಿಧಾನ ನೀಡಿದ ಬಳಿಕ ಸಮಾನತೆ, ಎಲ್ಲರಿಗೂ ಶಿಕ್ಷಣ ಹಾಗೂ ಅಧಿಕಾರ ಸಿಗುವಂತಾಯಿತು’ ಎಂದರು.</p>.<p>‘ಅಂಬೇಡ್ಕರ್ ಹೇಳಿದಂತೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದಿಂದ ಬದಲಾವಣೆ ಸಾಧ್ಯವಾಗಿದೆ. ಮಕ್ಕಳನ್ನು ಜಾತ್ಯತೀತರನ್ನಾಗಿ ಬೆಳೆಸೋಣ. ಅವರಿಗೆ ಸಂವಿಧಾನ ಹಾಗೂ ಶಿಕ್ಷಣದ ಬಗ್ಗೆ ತಿಳಿಸೋಣ’ ಎಂದು ಪ್ರಭಾರ ವ್ಯವಸ್ಥಾಪಕಿ (ಆಡಳಿತ ವಿಭಾಗ) ಸೌಮ್ಯಾ ಹೇಳಿದರು.</p>.<p>ಮೈಮುಲ್ ನಿರ್ದೇಶಕರಾದ ಓಂಪ್ರಕಾಶ್ ಹಾಗೂ ಬಿ.ಎನ್.ಸದಾನಂದ ಮಾತನಾಡಿದರು. 11 ವರ್ಷದ ಬಾಲಕ ದೇವನಶ್ ಇಂಗ್ಲಿಷ್ನಲ್ಲಿ ಭಾಷಣ ಮಾಡಿ ಗಮನಸೆಳೆದರು.</p>.<p>ವ್ಯವಸ್ಥಾಪಕ ನಿರ್ದೇಶಕ ಸುರೇಶ್ ನಾಯ್ಕ್, ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-39-227661716</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>