<p>ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಕೌಶಲ ತರಬೇತಿ ಕೇಂದ್ರದಲ್ಲಿ ಈಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲಾಯಿತು.</p>.<p>ಭಾರತ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ವಜ್ರಮುನಿ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಕೇವಲ ಸಂವಿಧಾನ ಶಿಲ್ಪಿಯಲ್ಲ, ಸಮಾನತೆ ಪ್ರತಿಪಾದಿಸಿದ ಮಹಾನ್ ನಾಯಕ’ ಎಂದರು.</p>.<p>‘ಕೈಗಾರೀಕರಣ, ಕೃಷಿ ಸುಧಾರಣೆ, ಬಂಡವಾಳಶಾಹಿಯ ನಿಯಂತ್ರಣ ಹಾಗೂ ಕಾರ್ಮಿಕರ ಹಕ್ಕುಗಳನ್ನು ಬಲಪಡಿಸುವ ಮೂಲಕ ಭಾರತೀಯ ಆರ್ಥಿಕತೆಯನ್ನು ಪುನರ್ರಚಿಸಲು ಅಂಬೇಡ್ಕರ್ ಬಯಸಿದ್ದರು’ ಎಂದು ಹೇಳಿದರು.</p>.<p>ಸಮರ್ಥನಂ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು ಮಾತನಾಡಿ, ‘ಅಂಬೇಡ್ಕರ್ ಮಹಿಳಾ ವಿಮೋಚನೆಯ ದಾರಿದೀಪವಾಗಿದ್ದು, ಮಹಿಳೆಯರ ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ಹಕ್ಕುಗಳಿಗಾಗಿ ಕ್ರಾಂತಿಕಾರಿ ಹೋರಾಟ ನಡೆಸಿದರು’ ಎಂದು ಸ್ಮರಿಸಿದರು.</p>.<p>‘ಅಸ್ಪೃಶ್ಯತೆ ಜಾತಿ ವ್ಯವಸ್ಥೆಯ ನೇರ ಫಲಿತಾಂಶವಾಗಿದ್ದು, ಜಾತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡದೆ ಅಸ್ಪೃಶ್ಯತೆ ಹೋಗಲಾಡಿಸಲು ಸಾಧ್ಯವಿಲ್ಲ ಎಂಬುದು ಅಂಬೇಡ್ಕರ್ ಅವರ ದೃಢ ನಂಬಿಕೆಯಾಗಿತ್ತು’ ಎಂದು ಸಂಸ್ಥೆಯ ಉದ್ಯೋಗಾಧಿಕಾರಿ ಆರ್.ಸುಬ್ರಮಣಿ ಹೇಳಿದರು.</p>.<p>ಮುಖ್ಯಶಿಕ್ಷಕಿ ಭ್ರಮಾರಂಭ, ಎನ್.ಮಾಂತೇಶ, ಪಿ.ಪದ್ಮ, ಬೃಂದಾಬಾಯಿ, ಚೈತ್ರಕುಮಾರಿ, ಸ್ಪರ್ಶ, ಲತಾ, ಎಸ್. ಪವನ್, ಎಚ್.ವಿದ್ಯಾವತಿ, ಮನು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-39-768306069</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆಯ ಕೌಶಲ ತರಬೇತಿ ಕೇಂದ್ರದಲ್ಲಿ ಈಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ ಆಚರಿಸಲಾಯಿತು.</p>.<p>ಭಾರತ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ವಜ್ರಮುನಿ ಮಾತನಾಡಿ, ‘ಡಾ.ಬಿ.ಆರ್.ಅಂಬೇಡ್ಕರ್ ಕೇವಲ ಸಂವಿಧಾನ ಶಿಲ್ಪಿಯಲ್ಲ, ಸಮಾನತೆ ಪ್ರತಿಪಾದಿಸಿದ ಮಹಾನ್ ನಾಯಕ’ ಎಂದರು.</p>.<p>‘ಕೈಗಾರೀಕರಣ, ಕೃಷಿ ಸುಧಾರಣೆ, ಬಂಡವಾಳಶಾಹಿಯ ನಿಯಂತ್ರಣ ಹಾಗೂ ಕಾರ್ಮಿಕರ ಹಕ್ಕುಗಳನ್ನು ಬಲಪಡಿಸುವ ಮೂಲಕ ಭಾರತೀಯ ಆರ್ಥಿಕತೆಯನ್ನು ಪುನರ್ರಚಿಸಲು ಅಂಬೇಡ್ಕರ್ ಬಯಸಿದ್ದರು’ ಎಂದು ಹೇಳಿದರು.</p>.<p>ಸಮರ್ಥನಂ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು ಮಾತನಾಡಿ, ‘ಅಂಬೇಡ್ಕರ್ ಮಹಿಳಾ ವಿಮೋಚನೆಯ ದಾರಿದೀಪವಾಗಿದ್ದು, ಮಹಿಳೆಯರ ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ಹಕ್ಕುಗಳಿಗಾಗಿ ಕ್ರಾಂತಿಕಾರಿ ಹೋರಾಟ ನಡೆಸಿದರು’ ಎಂದು ಸ್ಮರಿಸಿದರು.</p>.<p>‘ಅಸ್ಪೃಶ್ಯತೆ ಜಾತಿ ವ್ಯವಸ್ಥೆಯ ನೇರ ಫಲಿತಾಂಶವಾಗಿದ್ದು, ಜಾತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡದೆ ಅಸ್ಪೃಶ್ಯತೆ ಹೋಗಲಾಡಿಸಲು ಸಾಧ್ಯವಿಲ್ಲ ಎಂಬುದು ಅಂಬೇಡ್ಕರ್ ಅವರ ದೃಢ ನಂಬಿಕೆಯಾಗಿತ್ತು’ ಎಂದು ಸಂಸ್ಥೆಯ ಉದ್ಯೋಗಾಧಿಕಾರಿ ಆರ್.ಸುಬ್ರಮಣಿ ಹೇಳಿದರು.</p>.<p>ಮುಖ್ಯಶಿಕ್ಷಕಿ ಭ್ರಮಾರಂಭ, ಎನ್.ಮಾಂತೇಶ, ಪಿ.ಪದ್ಮ, ಬೃಂದಾಬಾಯಿ, ಚೈತ್ರಕುಮಾರಿ, ಸ್ಪರ್ಶ, ಲತಾ, ಎಸ್. ಪವನ್, ಎಚ್.ವಿದ್ಯಾವತಿ, ಮನು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-39-768306069</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>