<p>ಮೈಸೂರು: ‘ಬಾಬಾಸಾಹೇಬ್ ಅಂಬೇಡ್ಕರ್ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಅವರು ದೇಶದ ಬಹುದೊಡ್ಡ ಆಸ್ತಿ ಮತ್ತು ಶಕ್ತಿ’ ಎಂದು ಮುಖಂಡ ಎಂ.ಕೆ. ಸೋಮಶೇಖರ್ ಅಭಿಪ್ರಾಯಪಟ್ಟರು.</p>.<p>ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ನಿವೃತ್ತ ನೌಕರರ ಬಳಗದಿಂದ ಇಲ್ಲಿನ ಕುವೆಂಪುನಗರದ ಕಾಂಪ್ಲೆಕ್ಸ್ ಆವರಣದಲ್ಲಿ ಈಚೆಗೆ ನಡೆದ ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ನ್ಯಾಯಾಧೀಶರಾಗಿ ನೇಮಕವಾಗಿರುವ ತಿ.ನರಸೀಪುರ ತಾಲ್ಲೂಕಿನ ಚಿಕ್ಕಬಾಗಿಲು ಗ್ರಾಮದ ನಿತ್ಯ ಎನ್. ಗುಜ್ಜಾರ್ ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಎಂಜಿನಿಯರ್ ಬೋರಯ್ಯ, ನಿವೃತ್ತ ಪತ್ರಾಂಕಿತ ಖಜಾನೆ ಅಧಿಕಾರಿ ವೆಂಕಟರಾಮು ಅವರನ್ನು ಸನ್ಮಾನಿಸಲಾಯಿತು.</p>.<p>ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು. ಪ್ರೊ.ಡಿ.ಆನಂದ್, ಬಳಗದ ಉಪಾಧ್ಯಕ್ಷ ಪಿ.ಮರಿಸ್ವಾಮಿ, ದೊಡ್ಡಸ್ವಾಮಿ, ವೆಂಕಟರಮಣ, ಶಾಂತರಾಜು, ಕೃಷ್ಣಮೂರ್ತಿ, ಶಂಕರ್, ಶಿವಣ್ಣ, ಚಿಕ್ಕ ಸಿದ್ದಯ್ಯ, ಯಲಕವಯ್ಯ, ಶ್ರೀನಿವಾಸ್, ಯುವ ಮುಖಂಡರಾದ ರಾಮನ್ ಕೆ. (ರಾಮು), ಲಿಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-39-1716826281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಬಾಬಾಸಾಹೇಬ್ ಅಂಬೇಡ್ಕರ್ ಇಲ್ಲದ ಭಾರತವನ್ನು ಊಹಿಸಲು ಸಾಧ್ಯವಿಲ್ಲ. ಅವರು ದೇಶದ ಬಹುದೊಡ್ಡ ಆಸ್ತಿ ಮತ್ತು ಶಕ್ತಿ’ ಎಂದು ಮುಖಂಡ ಎಂ.ಕೆ. ಸೋಮಶೇಖರ್ ಅಭಿಪ್ರಾಯಪಟ್ಟರು.</p>.<p>ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳ ನಿವೃತ್ತ ನೌಕರರ ಬಳಗದಿಂದ ಇಲ್ಲಿನ ಕುವೆಂಪುನಗರದ ಕಾಂಪ್ಲೆಕ್ಸ್ ಆವರಣದಲ್ಲಿ ಈಚೆಗೆ ನಡೆದ ಬಿ.ಆರ್ ಅಂಬೇಡ್ಕರ್ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ನ್ಯಾಯಾಧೀಶರಾಗಿ ನೇಮಕವಾಗಿರುವ ತಿ.ನರಸೀಪುರ ತಾಲ್ಲೂಕಿನ ಚಿಕ್ಕಬಾಗಿಲು ಗ್ರಾಮದ ನಿತ್ಯ ಎನ್. ಗುಜ್ಜಾರ್ ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಎಂಜಿನಿಯರ್ ಬೋರಯ್ಯ, ನಿವೃತ್ತ ಪತ್ರಾಂಕಿತ ಖಜಾನೆ ಅಧಿಕಾರಿ ವೆಂಕಟರಾಮು ಅವರನ್ನು ಸನ್ಮಾನಿಸಲಾಯಿತು.</p>.<p>ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲಾಯಿತು. ಪ್ರೊ.ಡಿ.ಆನಂದ್, ಬಳಗದ ಉಪಾಧ್ಯಕ್ಷ ಪಿ.ಮರಿಸ್ವಾಮಿ, ದೊಡ್ಡಸ್ವಾಮಿ, ವೆಂಕಟರಮಣ, ಶಾಂತರಾಜು, ಕೃಷ್ಣಮೂರ್ತಿ, ಶಂಕರ್, ಶಿವಣ್ಣ, ಚಿಕ್ಕ ಸಿದ್ದಯ್ಯ, ಯಲಕವಯ್ಯ, ಶ್ರೀನಿವಾಸ್, ಯುವ ಮುಖಂಡರಾದ ರಾಮನ್ ಕೆ. (ರಾಮು), ಲಿಂಗರಾಜು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-39-1716826281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>