<p>ಮೈಸೂರು: ಆಟಿಸಂ (ಸ್ವಲೀನತೆ) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ನಗರದಲ್ಲಿ ಭಾನುವಾರ ಜಾಗೃತಿ ವಾಕಥಾನ್ ನಡೆಯಿತು.</p>.<p>ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ವಾಕಥಾನ್ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಓವಲ್ ಮೈದಾನದಲ್ಲಿ ಸಮಾರೋಪಗೊಂಡಿತು. ವಿವಿಧ ವಯೋಮಾನದ ನಾಗರಿಕರು, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡು ‘ಒಳಗೊಳ್ಳುವಿಕೆಯ ಸಮಾಜ’ ಎಂಬ ಸಂದೇಶವನ್ನು ಸಾರಿದರು.</p>.<p>‘ಆಟಿಸಂ ಒಂದು ರೋಗವಲ್ಲ, ಅದು ಪ್ರಪಂಚವನ್ನು ನೋಡುವ ವಿಭಿನ್ನ ದೃಷ್ಟಿಕೋನ. ಇಂತಹ ವ್ಯಕ್ತಿಗಳನ್ನು ಅರ್ಥೈಸಿಕೊಳ್ಳುವುದು ಮತ್ತು ಅವರಿಗೆ ಪ್ರೀತಿ ಹಾಗೂ ಸಹಕಾರ ನೀಡುವುದು ಸಮಾಜದ ಜವಾಬ್ದಾರಿ’ ಎಂಬ ಸಂದೇಶವು ಬಿತ್ತರಗೊಂಡಿತು.</p>.<p>ಶುಭಾ ಅರಸ್, ಕಿಶೋರ್ ಬಿದ್ದಪ್ಪ, ಬೋಪಣ್ಣ, ಸಂಗೀತಾ, ಬಲ್ಲಚಂಡ ಧನ್ಯ ಉತ್ತಪ್ಪ, ಕೋಟೇರ ದಿಲೀಪ್ ದೇವಯ್ಯ ಮತ್ತಿತರರು ಪಾಲ್ಗೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-39-555399776</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಆಟಿಸಂ (ಸ್ವಲೀನತೆ) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ನಗರದಲ್ಲಿ ಭಾನುವಾರ ಜಾಗೃತಿ ವಾಕಥಾನ್ ನಡೆಯಿತು.</p>.<p>ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಈ ವಾಕಥಾನ್ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಓವಲ್ ಮೈದಾನದಲ್ಲಿ ಸಮಾರೋಪಗೊಂಡಿತು. ವಿವಿಧ ವಯೋಮಾನದ ನಾಗರಿಕರು, ವಿದ್ಯಾರ್ಥಿಗಳು ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಪಾಲ್ಗೊಂಡು ‘ಒಳಗೊಳ್ಳುವಿಕೆಯ ಸಮಾಜ’ ಎಂಬ ಸಂದೇಶವನ್ನು ಸಾರಿದರು.</p>.<p>‘ಆಟಿಸಂ ಒಂದು ರೋಗವಲ್ಲ, ಅದು ಪ್ರಪಂಚವನ್ನು ನೋಡುವ ವಿಭಿನ್ನ ದೃಷ್ಟಿಕೋನ. ಇಂತಹ ವ್ಯಕ್ತಿಗಳನ್ನು ಅರ್ಥೈಸಿಕೊಳ್ಳುವುದು ಮತ್ತು ಅವರಿಗೆ ಪ್ರೀತಿ ಹಾಗೂ ಸಹಕಾರ ನೀಡುವುದು ಸಮಾಜದ ಜವಾಬ್ದಾರಿ’ ಎಂಬ ಸಂದೇಶವು ಬಿತ್ತರಗೊಂಡಿತು.</p>.<p>ಶುಭಾ ಅರಸ್, ಕಿಶೋರ್ ಬಿದ್ದಪ್ಪ, ಬೋಪಣ್ಣ, ಸಂಗೀತಾ, ಬಲ್ಲಚಂಡ ಧನ್ಯ ಉತ್ತಪ್ಪ, ಕೋಟೇರ ದಿಲೀಪ್ ದೇವಯ್ಯ ಮತ್ತಿತರರು ಪಾಲ್ಗೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-39-555399776</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>