<p>ಮೈಸೂರು: ‘ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದ ಕಾರಣದಿಂದ ಎದುರಾಗಿರುವ ಅನಿಲ ಅಭಾವದಿಂದ ರಾಜ್ಯದಲ್ಲಿ ಆಟೊರಿಕ್ಷಾ ಚಾಲಕರು ಸಂಕಷ್ಟಕ್ಕೆ ಒಳಳಗಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವರ ನೆರವಿಗೆ ಬರಬೇಕು’ ಎಂದು ಪ್ರಬುದ್ಧ ಭಾರತ ಭೀಮ್ ಸೇನೆ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗ್ಯಾಸ್ ಅಭಾವದಿಂದ ಆಟೊರಿಕ್ಷಾಗಳನ್ನು ರಸ್ತೆಗಿಳಿಸಲು ಸಾಧ್ಯವಾಗದೇ ಚಾಲಕರು ಕಂಗಾಲಾಗಿದ್ದಾರೆ. ಮಕ್ಕಳ ಶಾಲಾ, ಕಾಲೇಜು ಶುಲ್ಕ, ಫೈನಾನ್ಸ್ ಕಂಪನಿಗಳ ಸಾಲದ ಕಂತು, ದಿನನಿತ್ಯದ ಅಗತ್ಯ ವಸ್ತು ಖರೀದಿ ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಅವರ ಖಾತೆಗೆ ₹10 ಸಾವಿರ ಜಮಾ ಮಾಡಿ, ಪಡಿತರ ಕಿಟ್ ಒದಗಿಸಬೇಕು’ ಎಂದು ಕೋರಿದರು.</p>.<p>ಸಂಘಟನೆಯ ಪ್ರಮುಖರಾದ ಮಹದೇವಸ್ವಾಮಿ, ಜೈಪ್ರಕಾಶ್, ರಂಗಣ್ಣ ಹಾಗೂ ರಾಮು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-38-163472981</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದ ಕಾರಣದಿಂದ ಎದುರಾಗಿರುವ ಅನಿಲ ಅಭಾವದಿಂದ ರಾಜ್ಯದಲ್ಲಿ ಆಟೊರಿಕ್ಷಾ ಚಾಲಕರು ಸಂಕಷ್ಟಕ್ಕೆ ಒಳಳಗಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಇವರ ನೆರವಿಗೆ ಬರಬೇಕು’ ಎಂದು ಪ್ರಬುದ್ಧ ಭಾರತ ಭೀಮ್ ಸೇನೆ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದರು.</p>.<p>ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಗ್ಯಾಸ್ ಅಭಾವದಿಂದ ಆಟೊರಿಕ್ಷಾಗಳನ್ನು ರಸ್ತೆಗಿಳಿಸಲು ಸಾಧ್ಯವಾಗದೇ ಚಾಲಕರು ಕಂಗಾಲಾಗಿದ್ದಾರೆ. ಮಕ್ಕಳ ಶಾಲಾ, ಕಾಲೇಜು ಶುಲ್ಕ, ಫೈನಾನ್ಸ್ ಕಂಪನಿಗಳ ಸಾಲದ ಕಂತು, ದಿನನಿತ್ಯದ ಅಗತ್ಯ ವಸ್ತು ಖರೀದಿ ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಅವರ ಖಾತೆಗೆ ₹10 ಸಾವಿರ ಜಮಾ ಮಾಡಿ, ಪಡಿತರ ಕಿಟ್ ಒದಗಿಸಬೇಕು’ ಎಂದು ಕೋರಿದರು.</p>.<p>ಸಂಘಟನೆಯ ಪ್ರಮುಖರಾದ ಮಹದೇವಸ್ವಾಮಿ, ಜೈಪ್ರಕಾಶ್, ರಂಗಣ್ಣ ಹಾಗೂ ರಾಮು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-38-163472981</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>