<p><strong>ಮೈಸೂರು</strong>: ‘ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ ಪ್ರತಿಯೊಂದು ಸಂದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಜೀವನವನ್ನು ಮುನ್ನಡೆಸಬೇಕು’ ಎಂದು ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.</p>.<p>ಅವಧೂತ ದತ್ತ ಪೀಠದಲ್ಲಿ ಗೀತಾ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಪೂರ್ಣ ಭಗವದ್ಗೀತೆ ಪಾರಾಯಣ ಮತ್ತು ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ನಮ್ಮ ಪೂರ್ವಜರು ಭಗವದ್ಗೀತೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದರು. ಹಿಂದೆ ಮಹಾತ್ಮರು ಮತ್ತು ಶ್ರೀಮಂತರು ಲಕ್ಷಾಂತರ ಚಿಕ್ಕ ಭಗವದ್ಗೀತೆ ಪುಸ್ತಕಗಳನ್ನು ಮುದ್ರಿಸಿ ಜನರಿಗೆ ಉಚಿತವಾಗಿ ಹಂಚುತ್ತಿದ್ದರು. ಆ ಸಂಪ್ರದಾಯ ಮತ್ತೆ ಮರುಕಳಿಸಬೇಕು. ದತ್ತ ಪೀಠದಲ್ಲಿ ಮುದ್ರಿತವಾದ ಪುಸ್ತಕಗಳನ್ನು ಭಕ್ತರು ಖರೀದಿಸಿ, ಅದನ್ನು ಕೊಂಡುಕೊಳ್ಳಲು ಶಕ್ತಿಯಿಲ್ಲದವರಿಗೆ ಉಚಿತವಾಗಿ ಹಂಚುವ ಸಂಕಲ್ಪ ಮಾಡಬೇಕು’ ಎಂದರು.</p>.<p>‘2026ರ ಮಾರ್ಚ್ 22ರಂದು ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಸಂಪೂರ್ಣ ಭಗವದ್ಗೀತೆ ಪಾರಾಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಭಾರತ ಮಂಟಪದಲ್ಲಿಯೂ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶ ವಿದೇಶಗಳಲ್ಲಿ ಗೀತಾ ಪಾರಾಯಣದ ಅರಿವು ಮೂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p><strong>ಚಿನ್ನದ ಪದಕ ಪ್ರದಾನ:</strong></p>.<p>ಭಗವದ್ಗೀತೆಯನ್ನು ಸಂಪೂರ್ಣವಾಗಿ ಕಂಠಪಾಠ ಮಾಡಿ ಒಪ್ಪಿಸಿದ ಸುಮಾರು 948ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಶ್ರೀಗಳು ಚಿನ್ನದ ಪದಕ ಹಾಗೂ ಬಹುಮಾನಗಳನ್ನು ವಿತರಿಸಿದರು. ಮೈಸೂರಿನ 'ಗೀತಾ ಪರಿವಾರ'ದ ಸದಸ್ಯರು ಮತ್ತು ರಾಜ್ಯದ ವಿವಿಧ ಮೂಲೆಗಳಿಂದ ಬಂದಿದ್ದ ಭಕ್ತರನ್ನು ಶ್ರೀಗಳು ಅಭಿನಂದಿಸಿದರು.</p>.<p>ಗೀತಾ ಜಯಂತಿ ಅಂಗವಾಗಿ ಸಂಪೂರ್ಣ ಭಗವದ್ಗೀತಾ ಪಾರಾಯಣ ನಡೆಯಿತು. 5 ಸಾವಿರಕ್ಕೂ ಹೆಚ್ಚು ಜನರು ಗೀತೆಯ ಸಂಪೂರ್ಣ 700 ಶ್ಲೋಕಗಳನ್ನು ಪಠಣ ಮಾಡಿದರು. 6 ವರ್ಷದಿಂದ ಮಕ್ಕಳಿಂದ 75 ವರ್ಷದವರೆಗಿನ ಭಕ್ತರು ಈ ಪಾರಾಯಣದಲ್ಲಿ ಪಾಲ್ಗೊಂಡಿದ್ದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿರುವ ಪ್ರತಿಯೊಂದು ಸಂದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಜೀವನವನ್ನು ಮುನ್ನಡೆಸಬೇಕು’ ಎಂದು ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.</p>.<p>ಅವಧೂತ ದತ್ತ ಪೀಠದಲ್ಲಿ ಗೀತಾ ಜಯಂತಿ ಅಂಗವಾಗಿ ಆಯೋಜಿಸಿದ್ದ ಸಂಪೂರ್ಣ ಭಗವದ್ಗೀತೆ ಪಾರಾಯಣ ಮತ್ತು ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ನಮ್ಮ ಪೂರ್ವಜರು ಭಗವದ್ಗೀತೆಯನ್ನು ತಮ್ಮ ಜೀವನದ ಭಾಗವಾಗಿಸಿಕೊಂಡಿದ್ದರು. ಹಿಂದೆ ಮಹಾತ್ಮರು ಮತ್ತು ಶ್ರೀಮಂತರು ಲಕ್ಷಾಂತರ ಚಿಕ್ಕ ಭಗವದ್ಗೀತೆ ಪುಸ್ತಕಗಳನ್ನು ಮುದ್ರಿಸಿ ಜನರಿಗೆ ಉಚಿತವಾಗಿ ಹಂಚುತ್ತಿದ್ದರು. ಆ ಸಂಪ್ರದಾಯ ಮತ್ತೆ ಮರುಕಳಿಸಬೇಕು. ದತ್ತ ಪೀಠದಲ್ಲಿ ಮುದ್ರಿತವಾದ ಪುಸ್ತಕಗಳನ್ನು ಭಕ್ತರು ಖರೀದಿಸಿ, ಅದನ್ನು ಕೊಂಡುಕೊಳ್ಳಲು ಶಕ್ತಿಯಿಲ್ಲದವರಿಗೆ ಉಚಿತವಾಗಿ ಹಂಚುವ ಸಂಕಲ್ಪ ಮಾಡಬೇಕು’ ಎಂದರು.</p>.<p>‘2026ರ ಮಾರ್ಚ್ 22ರಂದು ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಸಂಪೂರ್ಣ ಭಗವದ್ಗೀತೆ ಪಾರಾಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಭಾರತ ಮಂಟಪದಲ್ಲಿಯೂ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.</p>.<p>ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶ ವಿದೇಶಗಳಲ್ಲಿ ಗೀತಾ ಪಾರಾಯಣದ ಅರಿವು ಮೂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.</p>.<p><strong>ಚಿನ್ನದ ಪದಕ ಪ್ರದಾನ:</strong></p>.<p>ಭಗವದ್ಗೀತೆಯನ್ನು ಸಂಪೂರ್ಣವಾಗಿ ಕಂಠಪಾಠ ಮಾಡಿ ಒಪ್ಪಿಸಿದ ಸುಮಾರು 948ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಮತ್ತು ಸಾಧಕರಿಗೆ ಶ್ರೀಗಳು ಚಿನ್ನದ ಪದಕ ಹಾಗೂ ಬಹುಮಾನಗಳನ್ನು ವಿತರಿಸಿದರು. ಮೈಸೂರಿನ 'ಗೀತಾ ಪರಿವಾರ'ದ ಸದಸ್ಯರು ಮತ್ತು ರಾಜ್ಯದ ವಿವಿಧ ಮೂಲೆಗಳಿಂದ ಬಂದಿದ್ದ ಭಕ್ತರನ್ನು ಶ್ರೀಗಳು ಅಭಿನಂದಿಸಿದರು.</p>.<p>ಗೀತಾ ಜಯಂತಿ ಅಂಗವಾಗಿ ಸಂಪೂರ್ಣ ಭಗವದ್ಗೀತಾ ಪಾರಾಯಣ ನಡೆಯಿತು. 5 ಸಾವಿರಕ್ಕೂ ಹೆಚ್ಚು ಜನರು ಗೀತೆಯ ಸಂಪೂರ್ಣ 700 ಶ್ಲೋಕಗಳನ್ನು ಪಠಣ ಮಾಡಿದರು. 6 ವರ್ಷದಿಂದ ಮಕ್ಕಳಿಂದ 75 ವರ್ಷದವರೆಗಿನ ಭಕ್ತರು ಈ ಪಾರಾಯಣದಲ್ಲಿ ಪಾಲ್ಗೊಂಡಿದ್ದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>