<p>ಮೈಸೂರು: ಇಲ್ಲಿನ ಗಾಂಧಿನಗರ ಡಾ.ಬಿ.ಆರ್.ಅಂಬೇಡ್ಕರ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಅಂಬೇಡ್ಕರ್ ಜಯಂತಿ ಅಂಗವಾಗಿ ಏ.14ರಂದು ‘ಭೀಮೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಶರತ್ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ರಾತ್ರಿ 7ಕ್ಕೆ ಅಂಬೇಡ್ಕರ್ ಜೀವನ ಚರಿತ್ರೆ ಸಾರುವ ಆಕರ್ಷಕ ಸ್ತಬ್ಧಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡ ಒಳಗೊಂಡ ಅದ್ದೂರಿ ಮೆರವಣಿಗೆ ನಡೆಯಲಿದೆ’ ಎಂದರು.</p>.<p>ಬಡಾವಣೆಯ ಅಂಬೇಡ್ಕರ್ ವೃತ್ತದಿಂದ ಈ ಮೆರವಣಿಗೆ ಹೊರಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಯದುವೀರ್ ಒಡೆಯರ್, ಶಾಸಕ ಹರೀಶ್ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಹಾಜರಿರುವರು ಎಂದು ತಿಳಿಸಿದರು.</p>.<p>ಅಂದು ಬೆಳಿಗ್ಗೆ 10ಕ್ಕೆ ಗಾಂಧಿನಗರದ ಮನೆಮಂಚಮ್ಮ ದೇವಾಲಯದಲ್ಲಿ ರಕ್ತದಾನ ಶಿಬಿರ ಇರಲಿದೆ. ಸಾನ್ನಿಧ್ಯವನ್ನು ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. ಸಂಜೆ 5ಕ್ಕೆ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು, ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸುವರು ಎಂದರು.</p>.<p>12ರಂದು ಆಕರ್ಷಕ ದೀಪಾಲಂಕಾರ, ಲೇಸರ್ ಶೋ, 13ರಂದು ಸಂಜೆ 6ಗಂಟೆಗೆ ಗಾಂಧಿನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ‘ಬಡಾವಣೆಗೆ ಸೀಮಿತವಾಗಿದ್ದ ಅಂಬೇಡ್ಕರ್ ಜಯಂತಿಯನ್ನು ಇಂದು ಎಲ್ಲೆಡೆ ಆಚರಿಸಲಾಗುತ್ತಿದೆ. ಅಂಬೇಡ್ಕರ್ ವಿಶ್ವವ್ಯಾಪಿ. ದಲಿತರ ಎದೆಗಳಲ್ಲಿ ಅಂಬೇಡ್ಕರ್ ವಿಚಾರಧಾರೆ ಬಿತ್ತಬೇಕಿದೆ’ ಎಂದರು.</p>.<p>ಆರ್.ಸಿದ್ದಪ್ಪ, ರಮೇಶ್, ಚರಣ್, ಶಿವಣ್ಣ, ಪುಟ್ಟರಂಗಸ್ವಾಮಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-39-1984628933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಗಾಂಧಿನಗರ ಡಾ.ಬಿ.ಆರ್.ಅಂಬೇಡ್ಕರ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಅಂಬೇಡ್ಕರ್ ಜಯಂತಿ ಅಂಗವಾಗಿ ಏ.14ರಂದು ‘ಭೀಮೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಶರತ್ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ರಾತ್ರಿ 7ಕ್ಕೆ ಅಂಬೇಡ್ಕರ್ ಜೀವನ ಚರಿತ್ರೆ ಸಾರುವ ಆಕರ್ಷಕ ಸ್ತಬ್ಧಚಿತ್ರ ಹಾಗೂ ವಿವಿಧ ಸಾಂಸ್ಕೃತಿಕ ಕಲಾತಂಡ ಒಳಗೊಂಡ ಅದ್ದೂರಿ ಮೆರವಣಿಗೆ ನಡೆಯಲಿದೆ’ ಎಂದರು.</p>.<p>ಬಡಾವಣೆಯ ಅಂಬೇಡ್ಕರ್ ವೃತ್ತದಿಂದ ಈ ಮೆರವಣಿಗೆ ಹೊರಡಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಯದುವೀರ್ ಒಡೆಯರ್, ಶಾಸಕ ಹರೀಶ್ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಹಾಜರಿರುವರು ಎಂದು ತಿಳಿಸಿದರು.</p>.<p>ಅಂದು ಬೆಳಿಗ್ಗೆ 10ಕ್ಕೆ ಗಾಂಧಿನಗರದ ಮನೆಮಂಚಮ್ಮ ದೇವಾಲಯದಲ್ಲಿ ರಕ್ತದಾನ ಶಿಬಿರ ಇರಲಿದೆ. ಸಾನ್ನಿಧ್ಯವನ್ನು ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. ಸಂಜೆ 5ಕ್ಕೆ ಬೈಕ್ ರ್ಯಾಲಿ ಆಯೋಜಿಸಲಾಗಿದ್ದು, ಶಾಸಕ ಟಿ.ಎಸ್.ಶ್ರೀವತ್ಸ ಉದ್ಘಾಟಿಸುವರು ಎಂದರು.</p>.<p>12ರಂದು ಆಕರ್ಷಕ ದೀಪಾಲಂಕಾರ, ಲೇಸರ್ ಶೋ, 13ರಂದು ಸಂಜೆ 6ಗಂಟೆಗೆ ಗಾಂಧಿನಗರದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದು ತಿಳಿಸಿದರು.</p>.<p>ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ‘ಬಡಾವಣೆಗೆ ಸೀಮಿತವಾಗಿದ್ದ ಅಂಬೇಡ್ಕರ್ ಜಯಂತಿಯನ್ನು ಇಂದು ಎಲ್ಲೆಡೆ ಆಚರಿಸಲಾಗುತ್ತಿದೆ. ಅಂಬೇಡ್ಕರ್ ವಿಶ್ವವ್ಯಾಪಿ. ದಲಿತರ ಎದೆಗಳಲ್ಲಿ ಅಂಬೇಡ್ಕರ್ ವಿಚಾರಧಾರೆ ಬಿತ್ತಬೇಕಿದೆ’ ಎಂದರು.</p>.<p>ಆರ್.ಸಿದ್ದಪ್ಪ, ರಮೇಶ್, ಚರಣ್, ಶಿವಣ್ಣ, ಪುಟ್ಟರಂಗಸ್ವಾಮಿ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-39-1984628933</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>