<p>ಮೈಸೂರು: ‘ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕುರಿತು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಟೀಕಿಸುವ ನೈತಿಕತೆ ಕಾಂಗ್ರೆಸ್ ಮುಖಂಡರಿಗೆ ಇಲ್ಲ’ ಎಂದು ಬಿಜೆಪಿ ಮುಖಂಡ ವಿ.ಶೈಲೇಂದ್ರ ಟೀಕಿಸಿದರು.</p>.<p>‘ಛಲವಾದಿ ನಾರಾಯಣಸ್ವಾಮಿ ದಲಿತರು. ಛಲವಾದಿ ಮಹಾಸಭಾ ಒಳ ಮೀಸಲಾತಿ ಹೋರಾಟದಲ್ಲಿ ಸಮಾಜದ ಹಿತದೃಷ್ಟಿಯಿಂದ ಅವರು ಪಾಲ್ಗೊಂಡಿದ್ದರು. ಆದರೆ, ಇದು ಕಾಂಗ್ರೆಸ್ ಸರ್ಕಾರದ ಪರ ಮಾಡಿದ ಪ್ರತಿಭಟನೆ ಎಂಬುದು ತಿಳಿದ ಬಳಿಕ ಅಲ್ಲಿಂದ ನಿರ್ಗಮಿಸಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಬಿಜೆಪಿ ನಾಯಕರ ವಿನಾಕಾರಣ ಟೀಕೆ, ಜಾತಿ ನಿಂದನೆ ಮುಂದುವರಿಸಿದರೆ ಅಂಥವರ ಮನೆ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.</p>.<p>ಮುಖಂಡರಾದ ರಾಕೇಶ್, ಪ್ರತಾಪ್, ಮಹೇಶ್, ಕೆ.ಮಹದೇವ, ಗೌತಮ್ ವಿಶ್ವಕರ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-39-1823509656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ವಿಧಾನಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕುರಿತು ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ನೀಡಿರುವ ಹೇಳಿಕೆ ಖಂಡನೀಯ. ಅವರನ್ನು ಟೀಕಿಸುವ ನೈತಿಕತೆ ಕಾಂಗ್ರೆಸ್ ಮುಖಂಡರಿಗೆ ಇಲ್ಲ’ ಎಂದು ಬಿಜೆಪಿ ಮುಖಂಡ ವಿ.ಶೈಲೇಂದ್ರ ಟೀಕಿಸಿದರು.</p>.<p>‘ಛಲವಾದಿ ನಾರಾಯಣಸ್ವಾಮಿ ದಲಿತರು. ಛಲವಾದಿ ಮಹಾಸಭಾ ಒಳ ಮೀಸಲಾತಿ ಹೋರಾಟದಲ್ಲಿ ಸಮಾಜದ ಹಿತದೃಷ್ಟಿಯಿಂದ ಅವರು ಪಾಲ್ಗೊಂಡಿದ್ದರು. ಆದರೆ, ಇದು ಕಾಂಗ್ರೆಸ್ ಸರ್ಕಾರದ ಪರ ಮಾಡಿದ ಪ್ರತಿಭಟನೆ ಎಂಬುದು ತಿಳಿದ ಬಳಿಕ ಅಲ್ಲಿಂದ ನಿರ್ಗಮಿಸಿದ್ದಾರೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಬಿಜೆಪಿ ನಾಯಕರ ವಿನಾಕಾರಣ ಟೀಕೆ, ಜಾತಿ ನಿಂದನೆ ಮುಂದುವರಿಸಿದರೆ ಅಂಥವರ ಮನೆ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.</p>.<p>ಮುಖಂಡರಾದ ರಾಕೇಶ್, ಪ್ರತಾಪ್, ಮಹೇಶ್, ಕೆ.ಮಹದೇವ, ಗೌತಮ್ ವಿಶ್ವಕರ್ಮ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-39-1823509656</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>