<p>ಮೈಸೂರು: ‘ಪ್ರತಿ ದೇಶವೂ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿದರೆ ಯುದ್ಧವೇ ನಡೆಯುವುದಿಲ್ಲ’ ಎಂದು ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಹೇಳಿದರು.</p>.<p>ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜವನ್ನು ಸರಿದಾರಿಗೆ ತರಲು ಮಾರ್ಗದರ್ಶಕರಾಗಿದ್ದಾರೆ. ಅಸಮತೋಲನ ಸರಿಪಡಿಸಲು ಅವರ ತತ್ವಾದರ್ಶಗಳು ದಾರಿದೀಪವಾಗಿವೆ. ಪ್ರತಿಯೊಬ್ಬರೂ ಸುಶಿಕ್ಷಿತರಾದಲ್ಲಿ ಸಮಾನತೆ ಬರುತ್ತದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಯೋಗದಿಂದಾಗಿ ಭಾರತ ವಿಶ್ವಪ್ರಸಿದ್ಧಿಯಾಗಿದೆ. ಅಂಬೇಡ್ಕರ್ ಕೇವಲ ಭಾರತವಲ್ಲ, ಇಡೀ ವಿಶ್ವದ ಸ್ವತ್ತು’ ಎಂದು ಹೇಳಿದರು.</p>.<p>ಮುಖಂಡ ಅಹಿಂದ ಜವರಪ್ಪ ಮಾತನಾಡಿ, ‘ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನ ಕೊಟ್ಟಿದ್ದರೂ, ಅವರ ವಿಚಾರಧಾರೆಗಳು ವ್ಯಾಪಕವಾಗಿ ಹರಡಿದ್ದರೂ ಇನ್ನೂ ದೌರ್ಜನ್ಯ, ದಬ್ಬಾಳಿಕೆ ನಿಂತಿಲ್ಲ. ಅನ್ಯಾಯವನ್ನು ಪ್ರಶ್ನಿಸದ ಸ್ಥಿತಿ ಇದೆ’ ಎಂದರು.</p>.<p>ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದರೂ ಇನ್ನೂ ಶ್ರೇಣಿಕೃತ ವ್ಯವಸ್ಥೆ, ಅಸಮಾನತೆ ಇರುವುದು ಪ್ರತಿಯೊಬ್ಬರೂ ತಲೆತಗ್ಗಿಸಬೇಕಾದ ಸಂಗತಿ’ ಎಂದು ತಿಳಿಸಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಜಿ. ದೀಪ್ತಿ, ಎಂ.ಆರ್. ಹೇಮಂತ್, ಚಂದನಾ ಹಾಗೂ ಎಂ. ಭುವನ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಯಾಲಕ್ಕಯ್ಯ ಸಂವಿಧಾನ ಪೀಠಿಕೆ ಬೋಧಿಸಿದರು. ಕಾರ್ಯದರ್ಶಿ ಎಂ. ಹೇಮಲತಾ ಸ್ವಾಗತಿಸಿದರು.</p>.<p>ಕಮಲಾ, ಶ್ವೇತಾ, ಸುಮತಿ, ಮಹದೇವಮ್ಮ, ಕೋಮಲಾ, ಶಕುಂತಲಾ ಶ್ರೀಧರ್, ಭಾಗ್ಯವತಿ ನಾಡಗೀತೆ ಹಾಡಿದರು. ಶ್ವೇತಾ ಅಂಬೇಡ್ಕರ್ ಕುರಿತು ಸ್ವರಚಿತ ಕವನ ಓದಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-473138706</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಪ್ರತಿ ದೇಶವೂ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವಗಳನ್ನು ಪಾಲಿಸಿದರೆ ಯುದ್ಧವೇ ನಡೆಯುವುದಿಲ್ಲ’ ಎಂದು ಬ್ರಾಹ್ಮಣ ಸಮಾಜದ ಮುಖಂಡ ಕೆ. ರಘುರಾಂ ವಾಜಪೇಯಿ ಹೇಳಿದರು.</p>.<p>ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜವನ್ನು ಸರಿದಾರಿಗೆ ತರಲು ಮಾರ್ಗದರ್ಶಕರಾಗಿದ್ದಾರೆ. ಅಸಮತೋಲನ ಸರಿಪಡಿಸಲು ಅವರ ತತ್ವಾದರ್ಶಗಳು ದಾರಿದೀಪವಾಗಿವೆ. ಪ್ರತಿಯೊಬ್ಬರೂ ಸುಶಿಕ್ಷಿತರಾದಲ್ಲಿ ಸಮಾನತೆ ಬರುತ್ತದೆ’ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಯೋಗದಿಂದಾಗಿ ಭಾರತ ವಿಶ್ವಪ್ರಸಿದ್ಧಿಯಾಗಿದೆ. ಅಂಬೇಡ್ಕರ್ ಕೇವಲ ಭಾರತವಲ್ಲ, ಇಡೀ ವಿಶ್ವದ ಸ್ವತ್ತು’ ಎಂದು ಹೇಳಿದರು.</p>.<p>ಮುಖಂಡ ಅಹಿಂದ ಜವರಪ್ಪ ಮಾತನಾಡಿ, ‘ಅಂಬೇಡ್ಕರ್ ಅವರು ಅತ್ಯುತ್ತಮ ಸಂವಿಧಾನ ಕೊಟ್ಟಿದ್ದರೂ, ಅವರ ವಿಚಾರಧಾರೆಗಳು ವ್ಯಾಪಕವಾಗಿ ಹರಡಿದ್ದರೂ ಇನ್ನೂ ದೌರ್ಜನ್ಯ, ದಬ್ಬಾಳಿಕೆ ನಿಂತಿಲ್ಲ. ಅನ್ಯಾಯವನ್ನು ಪ್ರಶ್ನಿಸದ ಸ್ಥಿತಿ ಇದೆ’ ಎಂದರು.</p>.<p>ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳೇ ಕಳೆದರೂ ಇನ್ನೂ ಶ್ರೇಣಿಕೃತ ವ್ಯವಸ್ಥೆ, ಅಸಮಾನತೆ ಇರುವುದು ಪ್ರತಿಯೊಬ್ಬರೂ ತಲೆತಗ್ಗಿಸಬೇಕಾದ ಸಂಗತಿ’ ಎಂದು ತಿಳಿಸಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿರುವ ಜಿ. ದೀಪ್ತಿ, ಎಂ.ಆರ್. ಹೇಮಂತ್, ಚಂದನಾ ಹಾಗೂ ಎಂ. ಭುವನ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ರಮಾಬಾಯಿ ಅಂಬೇಡ್ಕರ್ ಸರ್ವೋದಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಲೀಲಾವತಿ ಯಾಲಕ್ಕಯ್ಯ ಸಂವಿಧಾನ ಪೀಠಿಕೆ ಬೋಧಿಸಿದರು. ಕಾರ್ಯದರ್ಶಿ ಎಂ. ಹೇಮಲತಾ ಸ್ವಾಗತಿಸಿದರು.</p>.<p>ಕಮಲಾ, ಶ್ವೇತಾ, ಸುಮತಿ, ಮಹದೇವಮ್ಮ, ಕೋಮಲಾ, ಶಕುಂತಲಾ ಶ್ರೀಧರ್, ಭಾಗ್ಯವತಿ ನಾಡಗೀತೆ ಹಾಡಿದರು. ಶ್ವೇತಾ ಅಂಬೇಡ್ಕರ್ ಕುರಿತು ಸ್ವರಚಿತ ಕವನ ಓದಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-39-473138706</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>