<p>ಮೈಸೂರು: ‘ಗೌತಮ ಬುದ್ಧ ಶಾಂತಿ ಸಾರುವ ಪ್ರಪಂಚದ ಬೆಳಕು’ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.</p>.<p>ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ತಿ.ನರಸೀಪುರದ ಯಾಚೇನಹಳ್ಳಿಯ ‘ನನ್ನವ್ವ ಸಾಂಸ್ಕೃತಿಕ ಕಲಾತಂಡ’ದಿಂದ ಶುಕ್ರವಾರ ಬುದ್ಧ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಯುದ್ಧಕ್ಕೆ ಪರಿಹಾರ ಬುದ್ಧ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬುದ್ಧ ಇಡೀ ಜಗತ್ತಿಗೆ ಜ್ಞಾನದ ಮಹಿಮೆಯನ್ನು ತುಂಬಲು ಜನಿಸಿದ ದಾರ್ಶನಿಕ. ಅವರು ಪಾಳಿ ಭಾಷೆಯಲ್ಲಿ ಧಮ್ಮವನ್ನು ಬೋಧಿಸಿದರು. ನಾನು ಬೋಧಿಸುವುದರಲ್ಲಿ ಹೊಸದೇನೂ ಇಲ್ಲ, ಸತ್ಯವನ್ನು ಕಂಡುಕೊಳ್ಳುವುದರಲ್ಲಿ ನಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲ ಎಂದು ಜಗತ್ತಿಗೆ ಸಾರಿದರು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಅಂಬೇಡ್ಕರ್ ಅವರು ಬುದ್ಧನ ಅನುಯಾಯಿ ಆಗದಿದ್ದರೆ ಬುದ್ಧನ ವಿಚಾರಗಳಿಗೆ ಇಷ್ಟು ಪ್ರಾಮುಖ್ಯತೆ ಬರುತ್ತಿರಲಿಲ್ಲ. ಎಲ್ಲರೂ ಮರೆತುಬಿಡುವ ಸಾಧ್ಯತೆ ಇತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಾಹಿತಿ ಪ್ರಭಾಶಾಸ್ತ್ರಿ ಜೋಶ್ಯುಲ, ಉಪನ್ಯಾಸಕಿ ಟಿ.ಪದ್ಮಶ್ರೀ, ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಸತೀಶ್ ಹೆಗ್ಗೂರು, ಸುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೀಮಾರಹಳ್ಳಿ ರಂಗಸ್ವಾಮಿ, ಕಲಾತಂಡದ ಅಧ್ಯಕ್ಷ ಯಾಚೇನಹಳ್ಳಿ ಮಹದೇವ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-37-1314093084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಗೌತಮ ಬುದ್ಧ ಶಾಂತಿ ಸಾರುವ ಪ್ರಪಂಚದ ಬೆಳಕು’ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.</p>.<p>ಇಲ್ಲಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ತಿ.ನರಸೀಪುರದ ಯಾಚೇನಹಳ್ಳಿಯ ‘ನನ್ನವ್ವ ಸಾಂಸ್ಕೃತಿಕ ಕಲಾತಂಡ’ದಿಂದ ಶುಕ್ರವಾರ ಬುದ್ಧ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಯುದ್ಧಕ್ಕೆ ಪರಿಹಾರ ಬುದ್ಧ’ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಬುದ್ಧ ಇಡೀ ಜಗತ್ತಿಗೆ ಜ್ಞಾನದ ಮಹಿಮೆಯನ್ನು ತುಂಬಲು ಜನಿಸಿದ ದಾರ್ಶನಿಕ. ಅವರು ಪಾಳಿ ಭಾಷೆಯಲ್ಲಿ ಧಮ್ಮವನ್ನು ಬೋಧಿಸಿದರು. ನಾನು ಬೋಧಿಸುವುದರಲ್ಲಿ ಹೊಸದೇನೂ ಇಲ್ಲ, ಸತ್ಯವನ್ನು ಕಂಡುಕೊಳ್ಳುವುದರಲ್ಲಿ ನಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲ ಎಂದು ಜಗತ್ತಿಗೆ ಸಾರಿದರು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ‘ಅಂಬೇಡ್ಕರ್ ಅವರು ಬುದ್ಧನ ಅನುಯಾಯಿ ಆಗದಿದ್ದರೆ ಬುದ್ಧನ ವಿಚಾರಗಳಿಗೆ ಇಷ್ಟು ಪ್ರಾಮುಖ್ಯತೆ ಬರುತ್ತಿರಲಿಲ್ಲ. ಎಲ್ಲರೂ ಮರೆತುಬಿಡುವ ಸಾಧ್ಯತೆ ಇತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಸಾಹಿತಿ ಪ್ರಭಾಶಾಸ್ತ್ರಿ ಜೋಶ್ಯುಲ, ಉಪನ್ಯಾಸಕಿ ಟಿ.ಪದ್ಮಶ್ರೀ, ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಸತೀಶ್ ಹೆಗ್ಗೂರು, ಸುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜೀಮಾರಹಳ್ಳಿ ರಂಗಸ್ವಾಮಿ, ಕಲಾತಂಡದ ಅಧ್ಯಕ್ಷ ಯಾಚೇನಹಳ್ಳಿ ಮಹದೇವ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-37-1314093084</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>