<p><strong>ಮೈಸೂರು: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರ ಕಾರಣ ಮಂಗಳವಾರ ನಗರ ಬಸ್ ಸಂಚಾರ ಸ್ತಬ್ಧವಾಗಿದ್ದರೆ, ಗ್ರಾಮಾಂತರ ಭಾಗದಲ್ಲಿ ಅರ್ಧದಷ್ಟು ಬಸ್ಗಳು ಕಾರ್ಯಾಚರಿಸಿದವು.</p><p>ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಜಿಲ್ಲೆಯ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲೆಯಲ್ಲಿ ಬಸ್ ಸಂಚಾರ ಭಾಗಶಃ ಸ್ತಬ್ಧವಾಗಿತ್ತು. </p><p>ನಗರದಲ್ಲಿ ಜನರು ಖಾಸಗಿ ಬಸ್ ಹಾಗೂ ಆಟೊಗಳನ್ನು ಅವಲಂಬಿಸಿದ್ದರು. ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಗಳನ್ನು ಕರೆಯಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗಿತ್ತು. </p><p>'ಗ್ರಾಮೀಣ ಭಾಗದಲ್ಲಿ ಶೇ 45ರಷ್ಟು ಬಸ್ಗಳು ಕಾರ್ಯಾಚರಿಸಿವೆ. ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರದಲ್ಲಿ ಹೆಚ್ಚೇನೂ ತೊಂದರೆ ಆಗಿಲ್ಲ' ಎಂದು ಕೆಎಸ್ಆರ್ಟಿಸಿ ಗ್ರಾಮೀಣ ವಿಭಾಗದ ಡಿ.ಸಿ ಶ್ರೀನಿವಾಸ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೆಎಸ್ಆರ್ಟಿಸಿ ನೌಕರರ ಮುಷ್ಕರ ಕಾರಣ ಮಂಗಳವಾರ ನಗರ ಬಸ್ ಸಂಚಾರ ಸ್ತಬ್ಧವಾಗಿದ್ದರೆ, ಗ್ರಾಮಾಂತರ ಭಾಗದಲ್ಲಿ ಅರ್ಧದಷ್ಟು ಬಸ್ಗಳು ಕಾರ್ಯಾಚರಿಸಿದವು.</p><p>ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಜಿಲ್ಲೆಯ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿದ್ದು, ಜಿಲ್ಲೆಯಲ್ಲಿ ಬಸ್ ಸಂಚಾರ ಭಾಗಶಃ ಸ್ತಬ್ಧವಾಗಿತ್ತು. </p><p>ನಗರದಲ್ಲಿ ಜನರು ಖಾಸಗಿ ಬಸ್ ಹಾಗೂ ಆಟೊಗಳನ್ನು ಅವಲಂಬಿಸಿದ್ದರು. ನಗರ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಗಳನ್ನು ಕರೆಯಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಲಾಗಿತ್ತು. </p><p>'ಗ್ರಾಮೀಣ ಭಾಗದಲ್ಲಿ ಶೇ 45ರಷ್ಟು ಬಸ್ಗಳು ಕಾರ್ಯಾಚರಿಸಿವೆ. ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ಹುಣಸೂರು, ಕೆ.ಆರ್.ನಗರದಲ್ಲಿ ಹೆಚ್ಚೇನೂ ತೊಂದರೆ ಆಗಿಲ್ಲ' ಎಂದು ಕೆಎಸ್ಆರ್ಟಿಸಿ ಗ್ರಾಮೀಣ ವಿಭಾಗದ ಡಿ.ಸಿ ಶ್ರೀನಿವಾಸ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>