<p>ಮೈಸೂರು: ‘ಶಾಲಾ, ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ದಾಖಲಾತಿಗೆ ತೊಂದರೆಯಾಗದಂತೆ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಆದ್ಯತೆ ನೀಡಿ ವಿತರಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ ತಹಶೀಲ್ದಾರ್ಗಳಿಗೆ ಸೂಚನೆ ನೀಡಿದರು.</p>.<p>ಬಾಬು ಜಗಜೀವನ್ರಾಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸಬೇಕಿರುವ ದಾಖಲಾತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ’ ಎಂದರು.</p>.<p>ಸಮಿತಿ ಸದಸ್ಯ ಚಿಕ್ಕ ಜವರಯ್ಯ, ‘ಪೊಲೀಸ್ ಇಲಾಖೆ ವತಿಯಿಂದ ನಡೆಸಲಾಗುವ ಕುಂದುಕೊರತೆ ಸಭೆಗಳಿಗೆ ಆಯಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪಂಗಡದ ಮುಂಖಡರನ್ನು ಆಹ್ವಾನಿಸಿದರೆ, ಬಹಳಷ್ಟು ತೊಂದರೆಗಳ ಬಗ್ಗೆ ಚರ್ಚಿಸಬಹುದು’ ಎಂದರು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಮಿತಿ ಸಭೆಗಳನ್ನು ನಡೆಸುವಂತೆ ಸೂಚಿಸಿದರು.</p>.<p>ನಗರದ ಕೆಲವು ಬಡಾವಣೆ, ವೃತ್ತಗಳಿಗೆ, ದ್ವಾರಗಳಿಗೆ ಡಾ. ಬಿ.ಅರ್ ಅಂಬೇಡ್ಕರ್ ಅವರ ಹೆಸರು ನಾಮಕರಣ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಮೈಸೂರು ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಸರ್ವೆನಂ. 28 ರಲ್ಲಿ ಜಮೀನು ಒತ್ತುವರಿಯಾಗಿರುವ ಬಗ್ಗೆ ಸದಸ್ಯರು ದೂರಿದ್ದು, ಸ್ಥಳ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಐಶ್ವರ್ಯಾ ನಿರ್ದೇಶನ ನೀಡಿದರು.</p>.<p>ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಎಸ್.ಟಿ. ರವಿಕುಮಾರ್, ಪಾರ್ವತಮ್ಮ, ವೇಣು ಗೋಪಾಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸವಿತಾ, ಪಾಲಿಕೆ ಉಪ ಆಯುಕ್ತೆ ವೀಣಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-885204067</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಶಾಲಾ, ಕಾಲೇಜು ದಾಖಲಾತಿ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ದಾಖಲಾತಿಗೆ ತೊಂದರೆಯಾಗದಂತೆ ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಆದ್ಯತೆ ನೀಡಿ ವಿತರಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯಾ ತಹಶೀಲ್ದಾರ್ಗಳಿಗೆ ಸೂಚನೆ ನೀಡಿದರು.</p>.<p>ಬಾಬು ಜಗಜೀವನ್ರಾಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಲ್ಲಿಸಬೇಕಿರುವ ದಾಖಲಾತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ’ ಎಂದರು.</p>.<p>ಸಮಿತಿ ಸದಸ್ಯ ಚಿಕ್ಕ ಜವರಯ್ಯ, ‘ಪೊಲೀಸ್ ಇಲಾಖೆ ವತಿಯಿಂದ ನಡೆಸಲಾಗುವ ಕುಂದುಕೊರತೆ ಸಭೆಗಳಿಗೆ ಆಯಾ ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪಂಗಡದ ಮುಂಖಡರನ್ನು ಆಹ್ವಾನಿಸಿದರೆ, ಬಹಳಷ್ಟು ತೊಂದರೆಗಳ ಬಗ್ಗೆ ಚರ್ಚಿಸಬಹುದು’ ಎಂದರು. ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಸಮಿತಿ ಸಭೆಗಳನ್ನು ನಡೆಸುವಂತೆ ಸೂಚಿಸಿದರು.</p>.<p>ನಗರದ ಕೆಲವು ಬಡಾವಣೆ, ವೃತ್ತಗಳಿಗೆ, ದ್ವಾರಗಳಿಗೆ ಡಾ. ಬಿ.ಅರ್ ಅಂಬೇಡ್ಕರ್ ಅವರ ಹೆಸರು ನಾಮಕರಣ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.</p>.<p>ಮೈಸೂರು ತಾಲ್ಲೂಕಿನ ಆಲನಹಳ್ಳಿ ಗ್ರಾಮದ ಸರ್ವೆನಂ. 28 ರಲ್ಲಿ ಜಮೀನು ಒತ್ತುವರಿಯಾಗಿರುವ ಬಗ್ಗೆ ಸದಸ್ಯರು ದೂರಿದ್ದು, ಸ್ಥಳ ಪರಿಶೀಲನೆ ನಡೆಸಿ ಒತ್ತುವರಿಯಾಗಿದ್ದಲ್ಲಿ ಕ್ರಮ ಕೈಗೊಳ್ಳುವಂತೆ ಐಶ್ವರ್ಯಾ ನಿರ್ದೇಶನ ನೀಡಿದರು.</p>.<p>ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ಎಸ್.ಟಿ. ರವಿಕುಮಾರ್, ಪಾರ್ವತಮ್ಮ, ವೇಣು ಗೋಪಾಲ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸವಿತಾ, ಪಾಲಿಕೆ ಉಪ ಆಯುಕ್ತೆ ವೀಣಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-39-885204067</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>