<p><strong>ಮೈಸೂರು</strong>: ‘ಮನುಷ್ಯನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ’ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು.</p>.<p>ಜಗನ್ಮೋಹನ ಅರಮನೆ ಆವರಣದಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್ ಆರ್ಟ್ ವತಿಯಿಂದ ಈಚೆಗೆ ಆಯೋಜಿಸಿದ್ದ ‘ಚೇತನೋತ್ಸವ -2026’ ಶಾಸ್ತ್ರೀಯ ನೃತ್ಯಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕತೆಯ ಜಗದೊಳಗೆ ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಲು ಶಾಸ್ತ್ರೀಯ ನೃತ್ಯ ಕಲೆಗಳು ಉತ್ತಮ ಆಯ್ಕೆಯಾಗಿದೆ. ಇದು ರೋಗಕ್ಕೆ ಮದ್ದಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.</p>.<p>ಗುರುದೇವ ಅಕಾಡೆಮಿ ಆಫ್ ಫೈನ್ಆರ್ಟ್ ವತಿಯಿಂದ ಸಮಾಜ ಸೇವಕ ಅಚ್ಯುತ ರಾಮಪ್ರಸಾದ ಕಾಮತ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಸ್ವಾಮಿ, ವಕೀಲ ವಿಶ್ವನಾಥ್ ದೇವಸ್ಯ, ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ರಾಧಾಕೃಷ್ಣ, ಕಲಾತ್ಮಕ ನಿರ್ದೇಶಕರಾದ ಚೇತನ ರಾಧಾಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮನುಷ್ಯನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ’ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು.</p>.<p>ಜಗನ್ಮೋಹನ ಅರಮನೆ ಆವರಣದಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್ ಆರ್ಟ್ ವತಿಯಿಂದ ಈಚೆಗೆ ಆಯೋಜಿಸಿದ್ದ ‘ಚೇತನೋತ್ಸವ -2026’ ಶಾಸ್ತ್ರೀಯ ನೃತ್ಯಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕತೆಯ ಜಗದೊಳಗೆ ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಲು ಶಾಸ್ತ್ರೀಯ ನೃತ್ಯ ಕಲೆಗಳು ಉತ್ತಮ ಆಯ್ಕೆಯಾಗಿದೆ. ಇದು ರೋಗಕ್ಕೆ ಮದ್ದಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದರು.</p>.<p>ಗುರುದೇವ ಅಕಾಡೆಮಿ ಆಫ್ ಫೈನ್ಆರ್ಟ್ ವತಿಯಿಂದ ಸಮಾಜ ಸೇವಕ ಅಚ್ಯುತ ರಾಮಪ್ರಸಾದ ಕಾಮತ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು.</p>.<p>ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಸ್ವಾಮಿ, ವಕೀಲ ವಿಶ್ವನಾಥ್ ದೇವಸ್ಯ, ವ್ಯವಸ್ಥಾಪಕ ನಿರ್ದೇಶಕ ಪಿ.ಎಂ.ರಾಧಾಕೃಷ್ಣ, ಕಲಾತ್ಮಕ ನಿರ್ದೇಶಕರಾದ ಚೇತನ ರಾಧಾಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>