<p>ಮೈಸೂರು: ‘ಮಕ್ಕಳ ಮೇಲೆ ಪೋಷಕರು ನಿಗಾ ವಹಿಸಬೇಕು’ ಎಂದು ವಿಜಯನಗರ ಎಸಿಪಿ ರವಿಪ್ರಸಾದ್ ಸಲಹೆ ನೀಡಿದರು.</p>.<p>ಇಲ್ಲಿನ ಕಿರುರಂಗಮಂದಿರದಲ್ಲಿ ನೇಪಥ್ಯ ರಂಗ ತಂಡವು ಶನಿವಾರ ಆಯೋಜಿಸಿದ್ದ ‘ಹಾಡು ಆಟ ಆಡು’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘14 ವರ್ಷದ ಮಕ್ಕಳು ಕೂಡ ಕೊಕೇನ್, ಸಲ್ಯೂಷನ್ ಮೊದಲಾದ ಮಾದಕವಸ್ತುಗಳನ್ನು ಸೇವಿಸುವುದು ಕಂಡು ಬರುತ್ತಿದೆ. ಆದ್ದರಿಂದ ಮಕ್ಕಳಿಗೆ ಸ್ವಲ್ಪ ಸಮಯ ನೀಡಬೇಕು. ಏನು ಮಾಡುತ್ತಾರೆ, ಎಲ್ಲಿಗೆ ಹೋಗುತ್ತಾರೆ. ಯಾರೊಂದಿಗೆ ಇರುತ್ತಾರೆ ಎಂಬುದನ್ನು ಗಮನಿಸಿ, ಆ ಮೂಲಕ ದಾರಿತಪ್ಪದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ‘ಮೊದಲೆಲ್ಲಾ ಬೇಸಿಗೆ ರಜೆ ಬಂದರೆ ಮಕ್ಕಳು ಅಜ್ಜ- ಅಜ್ಜಿಯ ಮನೆಗೆ ಹೋಗುತ್ತಿದ್ದರು. ಈ ಸಂಪರ್ಕ ಯುಗದಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಹೇಳಿದರು.</p>.<p>ರೋಟರಿ ಜಿಲ್ಲಾ ಗೌರ್ನರ್ ಯಶಸ್ವಿ ಸೋಮಶೇಖರ್, ನಿರಂತರ ರಂಗತಂಡದ ಸಂಸ್ಥಾಪಕ ಎ.ಎಂ.ಸುಗುಣ, ರೋಟರ್ಯಾಕ್ಟ್ ಕ್ಲಬ್ ಡಿಆರ್ಸಿಸಿ ಶಕುಂತಲಾ ಎಲಿಜಬೆತ್, ರಂಗಕರ್ಮಿ ದೀಪಕ್ ಮೈಸೂರು ಮಾತನಾಡಿದರು.</p>.<p>ನೇಪಥ್ಯ ರಂಗ ತಂಡದ ಗೌತಮ್, ಸಂತೋಷ್, ಸಾಗರ್ ಪಾಲ್ಗೊಂಡಿದ್ದರು. ನಂತರ ಎರಡು ನಾಟಕ, ನೃತ್ಯ, ಜನಪದ ಗೀತೆಗಳನ್ನು ಮಕ್ಕಳು ಪ್ರಸ್ತುತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-647668794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಮಕ್ಕಳ ಮೇಲೆ ಪೋಷಕರು ನಿಗಾ ವಹಿಸಬೇಕು’ ಎಂದು ವಿಜಯನಗರ ಎಸಿಪಿ ರವಿಪ್ರಸಾದ್ ಸಲಹೆ ನೀಡಿದರು.</p>.<p>ಇಲ್ಲಿನ ಕಿರುರಂಗಮಂದಿರದಲ್ಲಿ ನೇಪಥ್ಯ ರಂಗ ತಂಡವು ಶನಿವಾರ ಆಯೋಜಿಸಿದ್ದ ‘ಹಾಡು ಆಟ ಆಡು’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘14 ವರ್ಷದ ಮಕ್ಕಳು ಕೂಡ ಕೊಕೇನ್, ಸಲ್ಯೂಷನ್ ಮೊದಲಾದ ಮಾದಕವಸ್ತುಗಳನ್ನು ಸೇವಿಸುವುದು ಕಂಡು ಬರುತ್ತಿದೆ. ಆದ್ದರಿಂದ ಮಕ್ಕಳಿಗೆ ಸ್ವಲ್ಪ ಸಮಯ ನೀಡಬೇಕು. ಏನು ಮಾಡುತ್ತಾರೆ, ಎಲ್ಲಿಗೆ ಹೋಗುತ್ತಾರೆ. ಯಾರೊಂದಿಗೆ ಇರುತ್ತಾರೆ ಎಂಬುದನ್ನು ಗಮನಿಸಿ, ಆ ಮೂಲಕ ದಾರಿತಪ್ಪದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ‘ಮೊದಲೆಲ್ಲಾ ಬೇಸಿಗೆ ರಜೆ ಬಂದರೆ ಮಕ್ಕಳು ಅಜ್ಜ- ಅಜ್ಜಿಯ ಮನೆಗೆ ಹೋಗುತ್ತಿದ್ದರು. ಈ ಸಂಪರ್ಕ ಯುಗದಲ್ಲಿ ಸಂಬಂಧಗಳಿಗೆ ಬೆಲೆ ಇಲ್ಲದಂತಾಗಿದೆ’ ಎಂದು ಹೇಳಿದರು.</p>.<p>ರೋಟರಿ ಜಿಲ್ಲಾ ಗೌರ್ನರ್ ಯಶಸ್ವಿ ಸೋಮಶೇಖರ್, ನಿರಂತರ ರಂಗತಂಡದ ಸಂಸ್ಥಾಪಕ ಎ.ಎಂ.ಸುಗುಣ, ರೋಟರ್ಯಾಕ್ಟ್ ಕ್ಲಬ್ ಡಿಆರ್ಸಿಸಿ ಶಕುಂತಲಾ ಎಲಿಜಬೆತ್, ರಂಗಕರ್ಮಿ ದೀಪಕ್ ಮೈಸೂರು ಮಾತನಾಡಿದರು.</p>.<p>ನೇಪಥ್ಯ ರಂಗ ತಂಡದ ಗೌತಮ್, ಸಂತೋಷ್, ಸಾಗರ್ ಪಾಲ್ಗೊಂಡಿದ್ದರು. ನಂತರ ಎರಡು ನಾಟಕ, ನೃತ್ಯ, ಜನಪದ ಗೀತೆಗಳನ್ನು ಮಕ್ಕಳು ಪ್ರಸ್ತುತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-647668794</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>