<p><strong>ಮೈಸೂರು</strong>: ರಂಗಾಂತರಂಗ ಮೈಸೂರು ಮಕ್ಕಳ ಅಭಿನಯ ರಂಗಶಾಲೆಯಿಂದ ಜೂನ್ನಿಂದ ಫೆಬ್ರುವರಿವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಮಕ್ಕಳಿಗಾಗಿ ರಂಗ ತರಬೇತಿ ನೀಡಲಾಗುವುದು ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ಕೆ.ಎಂ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳಾ ಸದನ ನಾರಾಯಣಶಾಸ್ತ್ರಿ ರಸ್ತೆ, ದೇವರಾಜ ಮೊಹಲ್ಲಾದಲ್ಲಿ ತರಬೇತಿ ನಡೆಯಲಿದೆ. ಶನಿವಾರ ಮಧ್ಯಾಹ್ನ 3.30ರಿಂದ ಸಂಜೆ 6.30ರವರೆಗೆ ಹಾಗೂ ಭಾನುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ತರಬೇತಿ ನಡೆಯಲಿದೆ ಎಂದರು.</p>.<p>ರಂಗಾಂತರಂಗ ಮಕ್ಕಳಿಗಾಗಿ ಶಿಬಿರ, ನಾಟಕೋತ್ಸವ ಆಯೋಜಿಸುತ್ತಿದೆ. ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾಭ್ಯಾಸಕ್ಕೆ ಪೂರಕವಾಗಿ ತರಬೇತಿ ನೀಡಲಾಗುತ್ತದೆ. ನೋಂದಣಿಗೆ ಮೊ.ಸಂ. 97399 19004 ಸಂಪರ್ಕಿಸಬಹುದು ಎಂದರು.</p>.<p>ರಂಗಕರ್ಮಿ ಮೈಮ್ ರಮೇಶ್ ಮಾತನಾಡಿ, ‘ಧಾರಾವಾಹಿಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಸಮಾಜದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ರಂಗಭೂಮಿ ಸಹಕಾರಿ’ ಎಂದು ಹೇಳಿದರು.</p>.<p>ಸಾಹಿತಿ ನಾ. ದಿವಾಕರ ಮಾತನಾಡಿದರು. ರಂಗಾಂತ ರಂಗದ ಸಹ ನಿರ್ದೇಶಕ ಗೌರಿಶಂಕರ್, ಸಿಂಧು ನಟರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-39-504031625</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ರಂಗಾಂತರಂಗ ಮೈಸೂರು ಮಕ್ಕಳ ಅಭಿನಯ ರಂಗಶಾಲೆಯಿಂದ ಜೂನ್ನಿಂದ ಫೆಬ್ರುವರಿವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಮಕ್ಕಳಿಗಾಗಿ ರಂಗ ತರಬೇತಿ ನೀಡಲಾಗುವುದು ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ಕೆ.ಎಂ ತಿಳಿಸಿದರು.</p>.<p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಿಳಾ ಸದನ ನಾರಾಯಣಶಾಸ್ತ್ರಿ ರಸ್ತೆ, ದೇವರಾಜ ಮೊಹಲ್ಲಾದಲ್ಲಿ ತರಬೇತಿ ನಡೆಯಲಿದೆ. ಶನಿವಾರ ಮಧ್ಯಾಹ್ನ 3.30ರಿಂದ ಸಂಜೆ 6.30ರವರೆಗೆ ಹಾಗೂ ಭಾನುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ತರಬೇತಿ ನಡೆಯಲಿದೆ ಎಂದರು.</p>.<p>ರಂಗಾಂತರಂಗ ಮಕ್ಕಳಿಗಾಗಿ ಶಿಬಿರ, ನಾಟಕೋತ್ಸವ ಆಯೋಜಿಸುತ್ತಿದೆ. ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ವಿದ್ಯಾಭ್ಯಾಸಕ್ಕೆ ಪೂರಕವಾಗಿ ತರಬೇತಿ ನೀಡಲಾಗುತ್ತದೆ. ನೋಂದಣಿಗೆ ಮೊ.ಸಂ. 97399 19004 ಸಂಪರ್ಕಿಸಬಹುದು ಎಂದರು.</p>.<p>ರಂಗಕರ್ಮಿ ಮೈಮ್ ರಮೇಶ್ ಮಾತನಾಡಿ, ‘ಧಾರಾವಾಹಿಗಳು ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಸಮಾಜದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ರಂಗಭೂಮಿ ಸಹಕಾರಿ’ ಎಂದು ಹೇಳಿದರು.</p>.<p>ಸಾಹಿತಿ ನಾ. ದಿವಾಕರ ಮಾತನಾಡಿದರು. ರಂಗಾಂತ ರಂಗದ ಸಹ ನಿರ್ದೇಶಕ ಗೌರಿಶಂಕರ್, ಸಿಂಧು ನಟರಾಜ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-39-504031625</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>