<p><strong>ಮೈಸೂರು</strong>: ‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೈಸೂರು ಮತ್ತು ಕರ್ನಾಟಕದ ಬಹಳ ದೊಡ್ಡ ಪಾತ್ರ ನಿರ್ವಹಿಸಿದೆ’ ಎಂದು ಶಾಸಕ ಎಸ್.ಎ. ರಾಮದಾಸ್ ಹೇಳಿದರು.</p>.<p>ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಪ್ರಯುಕ್ತ ನಗರದ ರಾಮಸ್ವಾಮಿ ವೃತ್ತದಲ್ಲಿ ಶಿಲಾಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಮಸ್ವಾಮಿ ಕೇವಲ 18 ವರ್ಷದವರಿದ್ದಾಗ, ಪದವಿಯ ಮೊದಲನೇ ವರ್ಷದಲ್ಲಿದ್ದಾಗಲೇ ಬ್ರಿಟಿಷರ ವಿರುದ್ಧ ತೊಡೆ ತಟ್ಟಿದ್ದರು. ಬ್ರಿಟಿಷರ ವಿರುದ್ಧದ ಆ ಹೋರಾಟದಲ್ಲಿ ಹುತಾತ್ಮರಾದರು. ಇಂತಹ ಹೋರಾಟಗಾರರನ್ನು ಸ್ಮರಿಸಬೇಕು’ ಎಂದರು.</p>.<p>ಮೇಯರ್ ಸುನಂದಾ ಪಾಲನೇತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥ್ ಸ್ವಾಮಿ, ಮಹಾನಗರಪಾಲಿಕೆ ಹೆಚ್ಚುವರಿ ಆಯುಕ್ತೆ ರೂಪಾ ಎಂ.ಜೆ. ಪಾಲ್ಗೊಂಡಿದ್ದರು.</p>.<p>‘ತಾಯಿ ಭಾರತಿಯ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿ ಪ್ರಾಣಾರ್ಪಣೆಗೈದ ಅಸಂಖ್ಯಾತ ಅನಾಮಧೇಯ ವೀರರ ತ್ಯಾಗ– ಬಲಿದಾನವನ್ನು ಕೃತಜ್ಞತಾಪೂರ್ವಕವಾಗಿ ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದ ಶ್ರದ್ಧೆಯ ಸ್ಥಳವಾದ ರಾಮಸ್ವಾಮಿ ವೃತ್ತದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸ್ಮರಣ ಫಲಕ ಪ್ರತಿಷ್ಠಾಪಿಸಲಾಯಿತು’ ಎಂದು ಫಲಕದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮೈಸೂರು ಮತ್ತು ಕರ್ನಾಟಕದ ಬಹಳ ದೊಡ್ಡ ಪಾತ್ರ ನಿರ್ವಹಿಸಿದೆ’ ಎಂದು ಶಾಸಕ ಎಸ್.ಎ. ರಾಮದಾಸ್ ಹೇಳಿದರು.</p>.<p>ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ಪ್ರಯುಕ್ತ ನಗರದ ರಾಮಸ್ವಾಮಿ ವೃತ್ತದಲ್ಲಿ ಶಿಲಾಫಲಕ ಅನಾವರಣಗೊಳಿಸಿ ಅವರು ಮಾತನಾಡಿದರು.</p>.<p>‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಮಸ್ವಾಮಿ ಕೇವಲ 18 ವರ್ಷದವರಿದ್ದಾಗ, ಪದವಿಯ ಮೊದಲನೇ ವರ್ಷದಲ್ಲಿದ್ದಾಗಲೇ ಬ್ರಿಟಿಷರ ವಿರುದ್ಧ ತೊಡೆ ತಟ್ಟಿದ್ದರು. ಬ್ರಿಟಿಷರ ವಿರುದ್ಧದ ಆ ಹೋರಾಟದಲ್ಲಿ ಹುತಾತ್ಮರಾದರು. ಇಂತಹ ಹೋರಾಟಗಾರರನ್ನು ಸ್ಮರಿಸಬೇಕು’ ಎಂದರು.</p>.<p>ಮೇಯರ್ ಸುನಂದಾ ಪಾಲನೇತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥ್ ಸ್ವಾಮಿ, ಮಹಾನಗರಪಾಲಿಕೆ ಹೆಚ್ಚುವರಿ ಆಯುಕ್ತೆ ರೂಪಾ ಎಂ.ಜೆ. ಪಾಲ್ಗೊಂಡಿದ್ದರು.</p>.<p>‘ತಾಯಿ ಭಾರತಿಯ ಸ್ವಾತಂತ್ರ್ಯಕ್ಕಾಗಿ ಹಗಲಿರುಳು ಹೋರಾಡಿ ಪ್ರಾಣಾರ್ಪಣೆಗೈದ ಅಸಂಖ್ಯಾತ ಅನಾಮಧೇಯ ವೀರರ ತ್ಯಾಗ– ಬಲಿದಾನವನ್ನು ಕೃತಜ್ಞತಾಪೂರ್ವಕವಾಗಿ ಸ್ಮರಿಸುತ್ತಾ ಸ್ವಾತಂತ್ರ್ಯ ಹೋರಾಟದ ಶ್ರದ್ಧೆಯ ಸ್ಥಳವಾದ ರಾಮಸ್ವಾಮಿ ವೃತ್ತದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸ್ಮರಣ ಫಲಕ ಪ್ರತಿಷ್ಠಾಪಿಸಲಾಯಿತು’ ಎಂದು ಫಲಕದಲ್ಲಿ ಬರೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>