<p><strong>ಮೈಸೂರು</strong>: ‘ಸಂಸ್ಕೃತಿಯ ಆಚರಣೆಯು ಸಂತೋಷ ನೀಡುತ್ತದೆ. ಆದ್ದರಿಂದ ಎಲ್ಲರೂ ಪ್ರತಿ ಸಂಸ್ಕೃತಿಯನ್ನೂ ಗೌರವಿಸಬೇಕು, ವಿವಿಧತೆಯಲ್ಲಿ ಏಕತೆಯನ್ನು ಆಚರಿಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯ ಮಾನಸಗಂಗೋತ್ರಿಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಬಿ. ಪ್ರವೀಣ್ ಹೇಳಿದರು.</p>.<p>ಇಲ್ಲಿನ ಖಿಲ್ಲೆ ಮೊಹಲ್ಲಾದ ನಟರಾಜ ಪ್ರತಿಷ್ಠಾನದ ವಾತ್ಸಲ್ಯ ಶಿಕ್ಷಣ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ಸಮಿತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.</p>.<p>‘ಭಾರತದ ಪರಂಪರೆ ಅನನ್ಯವಾದುದು. ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಮರೆಯಬಾರದು’ ಎಂದರು.</p>.<p>ಗಾಯಕ ಅಮ್ಮ ರಾಮಚಂದ್ರ ಮಾತನಾಡಿ, ‘ಸಂಸ್ಕೃತಿ ಮತ್ತು ಶಿಕ್ಷಣ ಇರುವ ವ್ಯಕ್ತಿಗೆ ಸೋಲಿಲ್ಲ. ಸಂಸ್ಕೃತಿ–ಸಂಸ್ಕಾರವನ್ನು ಹೊಂದಿರುವ ವ್ಯಕ್ತಿಯ ಜೀವನ ಬಂಗಾರವಾಗುತ್ತದೆ. ಗೆದ್ದರೆ ಬೀಗಬಾರದು, ಸೋತರೆ ಕುಗ್ಗಬಾರದು’ ಎಂದು ಹೇಳಿದರು.</p>.<p>ವಾತ್ಸಲ್ಯ ಶಿಕ್ಷಣ ಕಾಲೇಜಿನ ಶೈಕ್ಷಣಿಕ ಸಂಯೋಜಕ ಪ್ರೊ.ಜಯಪ್ರಕಾಶ್ ಎಂ.ಆರ್., ‘ಇಂದಿನ ವಿದ್ಯಾವಂತ ಸಮಾಜ ಸಂಸ್ಕೃತಿಯನ್ನು ಮರೆತಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ನೈತಿಕ ಮೌಲ್ಯವನ್ನು ಕಲಿಸಬೇಕಾಗಿದೆ’ ಎಂದರು.</p>.<p>ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ಹಾಗೂ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜಿನ ಪ್ರಾಂಶುಪಾಲ ಮಹೇಶ್ ದಳಪತಿ ಸ್ವಾಗತಿಸಿದರು, ಮೇಘನಾ ಎಂ. ನಿರೂಪಿಸಿದರು. ಅಂಬಿಕಾ ಎನ್. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಂಸ್ಕೃತಿಯ ಆಚರಣೆಯು ಸಂತೋಷ ನೀಡುತ್ತದೆ. ಆದ್ದರಿಂದ ಎಲ್ಲರೂ ಪ್ರತಿ ಸಂಸ್ಕೃತಿಯನ್ನೂ ಗೌರವಿಸಬೇಕು, ವಿವಿಧತೆಯಲ್ಲಿ ಏಕತೆಯನ್ನು ಆಚರಿಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯ ಮಾನಸಗಂಗೋತ್ರಿಯ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಕೆ.ಬಿ. ಪ್ರವೀಣ್ ಹೇಳಿದರು.</p>.<p>ಇಲ್ಲಿನ ಖಿಲ್ಲೆ ಮೊಹಲ್ಲಾದ ನಟರಾಜ ಪ್ರತಿಷ್ಠಾನದ ವಾತ್ಸಲ್ಯ ಶಿಕ್ಷಣ ಕಾಲೇಜಿನಲ್ಲಿ ಶನಿವಾರ ನಡೆದ ಸಾಂಸ್ಕೃತಿಕ ಸಮಿತಿ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.</p>.<p>‘ಭಾರತದ ಪರಂಪರೆ ಅನನ್ಯವಾದುದು. ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಮರೆಯಬಾರದು’ ಎಂದರು.</p>.<p>ಗಾಯಕ ಅಮ್ಮ ರಾಮಚಂದ್ರ ಮಾತನಾಡಿ, ‘ಸಂಸ್ಕೃತಿ ಮತ್ತು ಶಿಕ್ಷಣ ಇರುವ ವ್ಯಕ್ತಿಗೆ ಸೋಲಿಲ್ಲ. ಸಂಸ್ಕೃತಿ–ಸಂಸ್ಕಾರವನ್ನು ಹೊಂದಿರುವ ವ್ಯಕ್ತಿಯ ಜೀವನ ಬಂಗಾರವಾಗುತ್ತದೆ. ಗೆದ್ದರೆ ಬೀಗಬಾರದು, ಸೋತರೆ ಕುಗ್ಗಬಾರದು’ ಎಂದು ಹೇಳಿದರು.</p>.<p>ವಾತ್ಸಲ್ಯ ಶಿಕ್ಷಣ ಕಾಲೇಜಿನ ಶೈಕ್ಷಣಿಕ ಸಂಯೋಜಕ ಪ್ರೊ.ಜಯಪ್ರಕಾಶ್ ಎಂ.ಆರ್., ‘ಇಂದಿನ ವಿದ್ಯಾವಂತ ಸಮಾಜ ಸಂಸ್ಕೃತಿಯನ್ನು ಮರೆತಿದೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ನೈತಿಕ ಮೌಲ್ಯವನ್ನು ಕಲಿಸಬೇಕಾಗಿದೆ’ ಎಂದರು.</p>.<p>ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ಹಾಗೂ ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.</p>.<p>ಕಾಲೇಜಿನ ಪ್ರಾಂಶುಪಾಲ ಮಹೇಶ್ ದಳಪತಿ ಸ್ವಾಗತಿಸಿದರು, ಮೇಘನಾ ಎಂ. ನಿರೂಪಿಸಿದರು. ಅಂಬಿಕಾ ಎನ್. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>