<p><strong>ಮೈಸೂರು:</strong> ಹೋದ ವರ್ಷ ವಿಜೃಂಭಣೆಯಿಂದ ನಡೆಸಲಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರೋಬ್ಬರಿ ₹ 41.69 ಕೋಟಿ ಖರ್ಚು ಮಾಡಲಾಗಿದೆ.</p><p>ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ಬಹಳ ವಿಳಂಬವಾಗಿ ಅಂದರೆ, ಎಂಟು ತಿಂಗಳ ನಂತರ ಖರ್ಚು–ವೆಚ್ಚದ ಮಾಹಿತಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಲಾಗಿದೆ.</p><p>ರಾಜ್ಯ ಸರ್ಕಾರದಿಂದ ₹ 25 ಕೋಟಿ ಅನುದಾನ ನೀಡಲಾಗಿತ್ತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ₹ 10 ಕೋಟಿ ಬಂದಿತ್ತು. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಂದ ಪ್ರಾಯೋಜಕತ್ವದ ಮೂಲಕ ₹ 2.15 ಕೋಟಿ ಸಂಗ್ರಹವಾಗಿತ್ತು. ಯುವದಸರಾ, ಮೆರವಣಿಗೆ, ಪಂಜಿನ ಕವಾಯತು ಟಿಕೆಟ್ಗಳು ಮತ್ತು ‘ಗೋಲ್ಡ್ ಕಾರ್ಡ್’ಗಳ ಮಾರಾಟದಿಂದ ₹ 4.76 ಕೋಟಿ ಸೇರಿದಂತೆ ಒಟ್ಟು ₹ 41.91 ಕೋಟಿ ಸಂಗ್ರಹವಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.</p><p>18 ಉಪ ಸಮಿತಿಗಳಿಗೆ ₹ 31.27 ಕೋಟಿ ಬಿಡುಗಡೆ ಮಾಡಲಾಗಿತ್ತು. ಉತ್ಸವಕ್ಕೆ ಅಗತ್ಯವಾದ ಸಿವಿಲ್ ಹಾಗೂ ವಿದ್ಯುತ್ ಕಾಮಗಾರಿಗಳಿಗೆ ₹ 5.91 ಕೋಟಿ ಕೊಡಲಾಗಿತ್ತು. ಚಾಮರಾಜನಗರಕ್ಕೆ ₹ 1.75 ಕೋಟಿ, ಮಂಡ್ಯಕ್ಕೆ ₹2 ಕೋಟಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರಕ್ಕೆ ₹ 75 ಲಕ್ಷ ಹಾಗೂ ‘ ‘ಪ್ರಭುತ್ವ ಮತ್ತು ಸಂವಿಧಾನದ ಆಶಯ’ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಆಯೋಜನೆಗೆ ಹುಣಸೂರು ಉಪವಿಭಾಗಾಧಿಕಾರಿಗೆ ₹ 1 ಲಕ್ಷ ನೀಡಲಾಗಿತ್ತು ಎಂದು ತಿಳಿಸಿದೆ.</p><p>ಈ ಬಾರಿಯ ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯನ್ನು ಜೂನ್ 26ರಂದು ವಿಧಾನಸೌಧದಲ್ಲಿ ನಿಗದಿಪಡಿಸಲಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹೋದ ವರ್ಷ ವಿಜೃಂಭಣೆಯಿಂದ ನಡೆಸಲಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಬರೋಬ್ಬರಿ ₹ 41.69 ಕೋಟಿ ಖರ್ಚು ಮಾಡಲಾಗಿದೆ.</p><p>ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ಬಹಳ ವಿಳಂಬವಾಗಿ ಅಂದರೆ, ಎಂಟು ತಿಂಗಳ ನಂತರ ಖರ್ಚು–ವೆಚ್ಚದ ಮಾಹಿತಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಲಾಗಿದೆ.</p><p>ರಾಜ್ಯ ಸರ್ಕಾರದಿಂದ ₹ 25 ಕೋಟಿ ಅನುದಾನ ನೀಡಲಾಗಿತ್ತು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ₹ 10 ಕೋಟಿ ಬಂದಿತ್ತು. ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಿಂದ ಪ್ರಾಯೋಜಕತ್ವದ ಮೂಲಕ ₹ 2.15 ಕೋಟಿ ಸಂಗ್ರಹವಾಗಿತ್ತು. ಯುವದಸರಾ, ಮೆರವಣಿಗೆ, ಪಂಜಿನ ಕವಾಯತು ಟಿಕೆಟ್ಗಳು ಮತ್ತು ‘ಗೋಲ್ಡ್ ಕಾರ್ಡ್’ಗಳ ಮಾರಾಟದಿಂದ ₹ 4.76 ಕೋಟಿ ಸೇರಿದಂತೆ ಒಟ್ಟು ₹ 41.91 ಕೋಟಿ ಸಂಗ್ರಹವಾಗಿತ್ತು ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.</p><p>18 ಉಪ ಸಮಿತಿಗಳಿಗೆ ₹ 31.27 ಕೋಟಿ ಬಿಡುಗಡೆ ಮಾಡಲಾಗಿತ್ತು. ಉತ್ಸವಕ್ಕೆ ಅಗತ್ಯವಾದ ಸಿವಿಲ್ ಹಾಗೂ ವಿದ್ಯುತ್ ಕಾಮಗಾರಿಗಳಿಗೆ ₹ 5.91 ಕೋಟಿ ಕೊಡಲಾಗಿತ್ತು. ಚಾಮರಾಜನಗರಕ್ಕೆ ₹ 1.75 ಕೋಟಿ, ಮಂಡ್ಯಕ್ಕೆ ₹2 ಕೋಟಿ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರಕ್ಕೆ ₹ 75 ಲಕ್ಷ ಹಾಗೂ ‘ ‘ಪ್ರಭುತ್ವ ಮತ್ತು ಸಂವಿಧಾನದ ಆಶಯ’ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಆಯೋಜನೆಗೆ ಹುಣಸೂರು ಉಪವಿಭಾಗಾಧಿಕಾರಿಗೆ ₹ 1 ಲಕ್ಷ ನೀಡಲಾಗಿತ್ತು ಎಂದು ತಿಳಿಸಿದೆ.</p><p>ಈ ಬಾರಿಯ ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯನ್ನು ಜೂನ್ 26ರಂದು ವಿಧಾನಸೌಧದಲ್ಲಿ ನಿಗದಿಪಡಿಸಲಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>