<p><strong>ಮೈಸೂರು:</strong> ವಿಶ್ವ ವಿಖ್ಯಾತ ದಸರಾ ಉದ್ಘಾಟನೆ ದಿನದಿಂದಲೇ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಜನಸಂದಣಿ ಉಂಟಾಗಿದೆ. ಇದರಿಂದಾಗಿ ವಾಹನ ದಟ್ಟಣೆ ಬಿಸಿ ನಗರ ಸೇರಿದಂತೆ ಹೊರವಲಯಕ್ಕೂ ತಟ್ಟಿದೆ.</p>.<p>ಸಂಜೆಯಿಂದ ತಡರಾತ್ರಿವರೆಗೆ ನಗರದ ಪ್ರಮುಖ ಹಾಗೂ ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನಗಳ ಸಾಲಿನಿಂದ ಸಿಗ್ನಲ್ ದಾಟಲು ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸಾಂಸ್ಕೃತಿಕ ಕಾರ್ಯಕ್ರಮ, ಯುವ ದಸರಾ, ಆಹಾರ ಮೇಳ, ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ ಮೊದಲಾದವುಗಳಲ್ಲಿ ಪಾಲ್ಗೊಳ್ಳಲು ರಾತ್ರಿ ವೇಳೆ ಬಹಳಷ್ಟು ಮಂದಿ ಬರುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪಾದಚಾರಿಗಳ ಸುಗಮ ಸಂಚಾರಕ್ಕೂ ತೊಂದರೆಯಾಗಿದೆ.</p>.<p>ಅರಮನೆ ಸುತ್ತಮುತ್ತಲಿನ ರಸ್ತೆ, ಅರಸು ರಸ್ತೆ, ಹಾರ್ಡಿಂಜ್ ವೃತ್ತ, ಕೆ.ಆರ್.ವೃತ್ತ, ಚಾಮರಾಜ ಒಡೆಯರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಾಡಹಬ್ಬದ ಆಕರ್ಷಕ ದೀಪಾಲಂಕಾರ ವೀಕ್ಷಣೆಗೆ ಮುಗಿಬಿದ್ದಿದ್ದು, ಯುವಜನರು ತಡರಾತ್ರಿವರೆಗೆ ಸಿಟಿ ರೌಂಡ್ನಲ್ಲಿ ತೊಡಗಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.</p>.<p>ನಗರದ ಕೆಲ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ, ವಾಹನಗಳ ನಿಲುಗಡೆ ನಿಷೇಧ ಹಾಗೂ ಬಸ್ ಸಂಚಾರ ಮಾರ್ಗದಲ್ಲಿ ಕೆಲವು ಬದಲಾವಣೆ ಮಾಡಿರುವುದು ಸಂಚಾರ ದಟ್ಟಣೆಗೆ ಕಾರಣವಾಗಿದೆ. ಇದರಿಂದಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಶ್ರಮಪಡಬೇಕಾಗಿದೆ.</p>.<p>‘ದೀಪಾಲಂಕಾರ ವೀಕ್ಷಣೆಗೆಂದು ಕುಟುಂಬದವರು, ಸಂಬಂಧಿಕರೊಂದಿಗೆ ಹೊರಟಿದ್ದೆವು. ವಾಹನಗಳ ಸಾಲು, ಜನದಟ್ಟಣೆ ನೋಡಿ ದಸರಾ ಬಳಿಕ ಹೋಗಲು ನಿರ್ಧರಿಸಿದ್ದೇವೆ’ ಎಂದು ಸರಸ್ವತಿಪುರಂ ನಿವಾಸಿ ಶಿವಾನಂದ್ ಹೇಳಿದರು.</p>.<p>ಕ್ಯೂ ಸಿಸ್ಟಂ: ‘ದಸರಾದಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಹೆಚ್ಚಿದೆ. ವಾಹನಗಳು ಒಮ್ಮೆಲೆ ನುಗ್ಗುವುದರಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಇದನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದ್ದು, ಕ್ಯೂ ಸಿಸ್ಟಂನಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ’ ಎಂದು ಟ್ರಾಫಿಕ್ ಪೊಲೀಸ್ ತಿಳಿಸಿದರು.</p>.<blockquote>ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾತ್ರಿ ವೇಳೆ ಬಹಳ ಮಂದಿ ಭಾಗಿ ನಗರದ ಕೆಲ ರಸ್ತೆಗಳಲ್ಲಿ ಏಕಮುಖ ಸಂಚಾರ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರ ಶ್ರಮ</blockquote>.<div><blockquote>ವಾಹನಗಳ ಸದ್ದಿನಿಂದ ಕಿರಿಕಿರಿ ಉಂಟಾಗಿದೆ. ದೀಪಾಲಂಕಾರ ವೀಕ್ಷಣೆಗೆಂದು ಬಂದು ವಾಹನ ದಟ್ಟಣೆಯಲ್ಲೇ ಕಾಲ ಕಳೆಯಬೇಕಾಯಿತು</blockquote><span class="attribution">ಸಂಜಯ್ ಗೋಪಾಲ್ ಸಂಶೋಧನಾ ವಿದ್ಯಾರ್ಥಿ ಮಾನಸ ಗಂಗೋತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ವಿಶ್ವ ವಿಖ್ಯಾತ ದಸರಾ ಉದ್ಘಾಟನೆ ದಿನದಿಂದಲೇ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಜನಸಂದಣಿ ಉಂಟಾಗಿದೆ. ಇದರಿಂದಾಗಿ ವಾಹನ ದಟ್ಟಣೆ ಬಿಸಿ ನಗರ ಸೇರಿದಂತೆ ಹೊರವಲಯಕ್ಕೂ ತಟ್ಟಿದೆ.</p>.<p>ಸಂಜೆಯಿಂದ ತಡರಾತ್ರಿವರೆಗೆ ನಗರದ ಪ್ರಮುಖ ಹಾಗೂ ಅರಮನೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನಗಳ ಸಾಲಿನಿಂದ ಸಿಗ್ನಲ್ ದಾಟಲು ತಾಸುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.</p>.<p>ಸಾಂಸ್ಕೃತಿಕ ಕಾರ್ಯಕ್ರಮ, ಯುವ ದಸರಾ, ಆಹಾರ ಮೇಳ, ದಸರಾ ವಸ್ತುಪ್ರದರ್ಶನ, ಫಲಪುಷ್ಪ ಪ್ರದರ್ಶನ ಮೊದಲಾದವುಗಳಲ್ಲಿ ಪಾಲ್ಗೊಳ್ಳಲು ರಾತ್ರಿ ವೇಳೆ ಬಹಳಷ್ಟು ಮಂದಿ ಬರುತ್ತಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪಾದಚಾರಿಗಳ ಸುಗಮ ಸಂಚಾರಕ್ಕೂ ತೊಂದರೆಯಾಗಿದೆ.</p>.<p>ಅರಮನೆ ಸುತ್ತಮುತ್ತಲಿನ ರಸ್ತೆ, ಅರಸು ರಸ್ತೆ, ಹಾರ್ಡಿಂಜ್ ವೃತ್ತ, ಕೆ.ಆರ್.ವೃತ್ತ, ಚಾಮರಾಜ ಒಡೆಯರ್ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ನಾಡಹಬ್ಬದ ಆಕರ್ಷಕ ದೀಪಾಲಂಕಾರ ವೀಕ್ಷಣೆಗೆ ಮುಗಿಬಿದ್ದಿದ್ದು, ಯುವಜನರು ತಡರಾತ್ರಿವರೆಗೆ ಸಿಟಿ ರೌಂಡ್ನಲ್ಲಿ ತೊಡಗಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.</p>.<p>ನಗರದ ಕೆಲ ರಸ್ತೆಗಳಲ್ಲಿ ಏಕಮುಖ ಸಂಚಾರ ವ್ಯವಸ್ಥೆ, ವಾಹನಗಳ ನಿಲುಗಡೆ ನಿಷೇಧ ಹಾಗೂ ಬಸ್ ಸಂಚಾರ ಮಾರ್ಗದಲ್ಲಿ ಕೆಲವು ಬದಲಾವಣೆ ಮಾಡಿರುವುದು ಸಂಚಾರ ದಟ್ಟಣೆಗೆ ಕಾರಣವಾಗಿದೆ. ಇದರಿಂದಾಗಿ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸರು ಶ್ರಮಪಡಬೇಕಾಗಿದೆ.</p>.<p>‘ದೀಪಾಲಂಕಾರ ವೀಕ್ಷಣೆಗೆಂದು ಕುಟುಂಬದವರು, ಸಂಬಂಧಿಕರೊಂದಿಗೆ ಹೊರಟಿದ್ದೆವು. ವಾಹನಗಳ ಸಾಲು, ಜನದಟ್ಟಣೆ ನೋಡಿ ದಸರಾ ಬಳಿಕ ಹೋಗಲು ನಿರ್ಧರಿಸಿದ್ದೇವೆ’ ಎಂದು ಸರಸ್ವತಿಪುರಂ ನಿವಾಸಿ ಶಿವಾನಂದ್ ಹೇಳಿದರು.</p>.<p>ಕ್ಯೂ ಸಿಸ್ಟಂ: ‘ದಸರಾದಿಂದಾಗಿ ರಸ್ತೆಗಳಲ್ಲಿ ವಾಹನಗಳ ಓಡಾಟ ಹೆಚ್ಚಿದೆ. ವಾಹನಗಳು ಒಮ್ಮೆಲೆ ನುಗ್ಗುವುದರಿಂದ ಸಂಚಾರ ದಟ್ಟಣೆ ಉಂಟಾಗಲಿದೆ. ಇದನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದ್ದು, ಕ್ಯೂ ಸಿಸ್ಟಂನಲ್ಲಿ ವಾಹನಗಳನ್ನು ಬಿಡಲಾಗುತ್ತಿದೆ’ ಎಂದು ಟ್ರಾಫಿಕ್ ಪೊಲೀಸ್ ತಿಳಿಸಿದರು.</p>.<blockquote>ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾತ್ರಿ ವೇಳೆ ಬಹಳ ಮಂದಿ ಭಾಗಿ ನಗರದ ಕೆಲ ರಸ್ತೆಗಳಲ್ಲಿ ಏಕಮುಖ ಸಂಚಾರ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರ ಶ್ರಮ</blockquote>.<div><blockquote>ವಾಹನಗಳ ಸದ್ದಿನಿಂದ ಕಿರಿಕಿರಿ ಉಂಟಾಗಿದೆ. ದೀಪಾಲಂಕಾರ ವೀಕ್ಷಣೆಗೆಂದು ಬಂದು ವಾಹನ ದಟ್ಟಣೆಯಲ್ಲೇ ಕಾಲ ಕಳೆಯಬೇಕಾಯಿತು</blockquote><span class="attribution">ಸಂಜಯ್ ಗೋಪಾಲ್ ಸಂಶೋಧನಾ ವಿದ್ಯಾರ್ಥಿ ಮಾನಸ ಗಂಗೋತ್ರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>