<p><strong>ಮೈಸೂರು:</strong> ದಸರಾ ಪೂರ್ವಭಾವಿಯಾಗಿ ಇಲ್ಲಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ.24ರಿಂದ 30ರವರೆಗೆ ನಿತ್ಯ ಸಂಜೆ 5ಕ್ಕೆ ಆಯೋಜಿಸಲಾಗಿರುವ ‘ಯುವ ಸಂಭ್ರಮ’ ಮಂಗಳವಾರ ಸಂಜೆ ಗರಿಗೆದರಲಿದೆ.</p>.<p>ನಗರ, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ–ವಿದ್ಯಾರ್ಥಿನಿಯರ ತಂಡಗಳು ನೃತ್ಯ ಕಾರ್ಯಕ್ರಮ ನೀಡಲಿವೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಖ್ಯಾತ ಚಲನಚಿತ್ರ ನಟರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಉಪ ಸಮಿತಿ ತಿಳಿಸಿದೆ.</p>.<p>‘ಯುವ ಸಂಭ್ರಮ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 470 ಕಾಲೇಜುಗಳಿಂದ ಅರ್ಜಿಗಳು ಬಂದಿದ್ದವು. 370 ತಂಡಗಳಿಗಷ್ಟೆ ಭಾಗವಹಿಸಲು ಸಾಧ್ಯವಾಗುತ್ತಿತ್ತು. ಎಲ್ಲರಿಗೂ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಯುವ ಸಂಭ್ರಮವನ್ನು ಒಂದು ದಿನ ವಿಸ್ತರಿಸುವಂತೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದಸರಾ ಪೂರ್ವಭಾವಿಯಾಗಿ ಇಲ್ಲಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಸೆ.24ರಿಂದ 30ರವರೆಗೆ ನಿತ್ಯ ಸಂಜೆ 5ಕ್ಕೆ ಆಯೋಜಿಸಲಾಗಿರುವ ‘ಯುವ ಸಂಭ್ರಮ’ ಮಂಗಳವಾರ ಸಂಜೆ ಗರಿಗೆದರಲಿದೆ.</p>.<p>ನಗರ, ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿ–ವಿದ್ಯಾರ್ಥಿನಿಯರ ತಂಡಗಳು ನೃತ್ಯ ಕಾರ್ಯಕ್ರಮ ನೀಡಲಿವೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು. ಖ್ಯಾತ ಚಲನಚಿತ್ರ ನಟರಾದ ಶ್ರೀಮುರುಳಿ ಮತ್ತು ರುಕ್ಮಿಣಿ ವಸಂತ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ ಎಂದು ಉಪ ಸಮಿತಿ ತಿಳಿಸಿದೆ.</p>.<p>‘ಯುವ ಸಂಭ್ರಮ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 470 ಕಾಲೇಜುಗಳಿಂದ ಅರ್ಜಿಗಳು ಬಂದಿದ್ದವು. 370 ತಂಡಗಳಿಗಷ್ಟೆ ಭಾಗವಹಿಸಲು ಸಾಧ್ಯವಾಗುತ್ತಿತ್ತು. ಎಲ್ಲರಿಗೂ ಅವಕಾಶ ದೊರೆಯಬೇಕೆಂಬ ಉದ್ದೇಶದಿಂದ ಯುವ ಸಂಭ್ರಮವನ್ನು ಒಂದು ದಿನ ವಿಸ್ತರಿಸುವಂತೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>