<p><strong>ಮೈಸೂರು:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳದಲ್ಲಿ ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಎಂ.ಎಸ್. ಅನಿತಾ ಮಂಗಲ ಅವರು ಕೃತಿಗಳನ್ನು ಬಿಡುಗಡೆ ಮಾಡಿದರು.</p>.<p>ಎಸ್. ಸುಂದರ್ ಕುಮಾರ್ ಅವರ ‘ಜನರೊಡಲ ಜಂಗಮ’, ವಸು ವತ್ಸಲೆ ಅವರ ‘ಮನಸೇ ಥ್ಯಾಂಕ್ಯೂ’ ಹಾಗೂ ಆರ್. ಸದಾಶಿವಯ್ಯ ಚರಗನಹಳ್ಳಿ ಅವರ ‘ಕಾವ್ಯಧಾರೆ’ ಮತ್ತು ದಿವಾಕರ ಆಜಾದ್ ಅವರ ‘ವಿಕರ್ಣ’ ಕೃತಿಗಳು ಬಿಡುಗಡೆಯಾದವು.</p>.<p>ಕಾರ್ಯಕ್ರಮದಲ್ಲಿ ಎಸ್. ಸುಂದರ ಕುಮಾರ್, ವಸು ವತ್ಸಲೆ, ಆರ್. ಸದಾಶಿವಯ್ಯ ಹಾಗೂ ದಿವಾಕರ ಆಜಾದ್ ಮಾತನಾಡಿದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅಧ್ಯಕ್ಷತೆ ವಹಿಸಿದ್ದರು. ಉಪಸಮಿತಿ ಸದಸ್ಯ ರಾಜಶೇಖರ ಕದಂಬ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಿರುವ ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳದಲ್ಲಿ ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.</p>.<p>ಎಂ.ಎಸ್. ಅನಿತಾ ಮಂಗಲ ಅವರು ಕೃತಿಗಳನ್ನು ಬಿಡುಗಡೆ ಮಾಡಿದರು.</p>.<p>ಎಸ್. ಸುಂದರ್ ಕುಮಾರ್ ಅವರ ‘ಜನರೊಡಲ ಜಂಗಮ’, ವಸು ವತ್ಸಲೆ ಅವರ ‘ಮನಸೇ ಥ್ಯಾಂಕ್ಯೂ’ ಹಾಗೂ ಆರ್. ಸದಾಶಿವಯ್ಯ ಚರಗನಹಳ್ಳಿ ಅವರ ‘ಕಾವ್ಯಧಾರೆ’ ಮತ್ತು ದಿವಾಕರ ಆಜಾದ್ ಅವರ ‘ವಿಕರ್ಣ’ ಕೃತಿಗಳು ಬಿಡುಗಡೆಯಾದವು.</p>.<p>ಕಾರ್ಯಕ್ರಮದಲ್ಲಿ ಎಸ್. ಸುಂದರ ಕುಮಾರ್, ವಸು ವತ್ಸಲೆ, ಆರ್. ಸದಾಶಿವಯ್ಯ ಹಾಗೂ ದಿವಾಕರ ಆಜಾದ್ ಮಾತನಾಡಿದರು.</p>.<p>ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಅಧ್ಯಕ್ಷತೆ ವಹಿಸಿದ್ದರು. ಉಪಸಮಿತಿ ಸದಸ್ಯ ರಾಜಶೇಖರ ಕದಂಬ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>