<p><strong>ಮೈಸೂರು:</strong> ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರವೂ ಡ್ರೋನ್ ಪ್ರದರ್ಶನವು ಸಾವಿರಾರು ಪ್ರೇಕ್ಷಕರನ್ನು ರಂಜಿಸಿತು.</p>.<p>3 ಸಾವಿರ ಡ್ರೋನ್ ಗಳು ಆಗಸದಲ್ಲಿ ಬಣ್ಣಬಣ್ಣದ ಕಲಾಕೃತಿಗಳ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಸಿದವು. ಸೌರಮಂಡಲ, ಹುಲಿ, ದಸರಾ ಆನೆ, ಅಂಬಾರಿ, ಸರ್ಕಾರದ ಗ್ಯಾರಂಟಿ ಯೋಜನೆಗಳು... ಹೀಗೆ ವಿವಿಧ ಕಲಾಕೃತಿಗಳನ್ನು ಡ್ರೋನ್ಗಳು ನೀಲಿಯಾಗಸದಲ್ಲಿ ಮೂಡಿಸಿದವು.</p>.<p><strong>ಸಂಗೀತ ಸಂಜೆ:</strong></p>.<p>ವಿವಿಧ ಕಲಾವಿದರು ನಡೆಸಿಕೊಟ್ಟ ಗಾಯನವು ಪ್ರೇಕ್ಷಕರನ್ನು ರಂಜಿಸಿತು.</p>.<p>‘ಐಗಿರಿ ನಂದಿನಿ’ ಗೀತೆಯೊಂದಿಗೆ ಸಂಗೀತ ಸಂಜೆಗೆ ಗಾಯಕಿ ದಿವ್ಯಾ ರಾಮಚಂದ್ರ ಅದ್ಭುತ ಆರಂಭ ನೀಡಿದರು. ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ, ಪಸಂದಾಗವ್ನೆ’ ಮೊದಲಾದ ಹಾಡುಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು. ಮೈಸೂರಿನ ಶ್ರೀಹರ್ಷ ಹಾಡಿದ ‘ಬೊಂಬೆ ಹೇಳುತೈತೆ’ ಗೀತೆಗೆ ಮೈದಾನದಲ್ಲಿ ಸೇರಿದ್ದ ಜನರೆಲ್ಲ ದನಿಗೂಡಿಸಿದರು.</p>.<p>‘ಅಪ್ಪ ಐ ಲವ್ ಯೂ’ ಹಾಡಿನೊಂದಿಗೆ ವೇದಿಕೆಗೆ ಬಂದ ಅನುರಾಧ ಭಟ್, ‘ಕಣ್ಣು ಹೊಡಿಯಾಕ್ಕ’ ಹಾಡಿ ಮನರಂಜಿಸಿದರು. ಇವರಿಗೆ ದನಿಯಾದ ಗಾಯಕ ಜಸ್ಕರಣ್ ಸಿಂಗ್, ‘ದ್ವಾಪರ ದಾಟುತ’ ಹಾಡಿನ ಮೂಲಕ ರಂಜಿಸಿದರು.</p>.<p>ಡ್ರೋನ್ ಪ್ರದರ್ಶನಕ್ಕೆ ಸಚಿವ ಕೆ. ವೆಂಕಟೇಶ್, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರವೂ ಡ್ರೋನ್ ಪ್ರದರ್ಶನವು ಸಾವಿರಾರು ಪ್ರೇಕ್ಷಕರನ್ನು ರಂಜಿಸಿತು.</p>.<p>3 ಸಾವಿರ ಡ್ರೋನ್ ಗಳು ಆಗಸದಲ್ಲಿ ಬಣ್ಣಬಣ್ಣದ ಕಲಾಕೃತಿಗಳ ಚಿತ್ತಾರಗಳನ್ನು ಬಿಡಿಸುವ ಮೂಲಕ ಎಲ್ಲರನ್ನು ರೋಮಾಂಚನಗೊಳಿಸಿದವು. ಸೌರಮಂಡಲ, ಹುಲಿ, ದಸರಾ ಆನೆ, ಅಂಬಾರಿ, ಸರ್ಕಾರದ ಗ್ಯಾರಂಟಿ ಯೋಜನೆಗಳು... ಹೀಗೆ ವಿವಿಧ ಕಲಾಕೃತಿಗಳನ್ನು ಡ್ರೋನ್ಗಳು ನೀಲಿಯಾಗಸದಲ್ಲಿ ಮೂಡಿಸಿದವು.</p>.<p><strong>ಸಂಗೀತ ಸಂಜೆ:</strong></p>.<p>ವಿವಿಧ ಕಲಾವಿದರು ನಡೆಸಿಕೊಟ್ಟ ಗಾಯನವು ಪ್ರೇಕ್ಷಕರನ್ನು ರಂಜಿಸಿತು.</p>.<p>‘ಐಗಿರಿ ನಂದಿನಿ’ ಗೀತೆಯೊಂದಿಗೆ ಸಂಗೀತ ಸಂಜೆಗೆ ಗಾಯಕಿ ದಿವ್ಯಾ ರಾಮಚಂದ್ರ ಅದ್ಭುತ ಆರಂಭ ನೀಡಿದರು. ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ, ಪಸಂದಾಗವ್ನೆ’ ಮೊದಲಾದ ಹಾಡುಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು. ಮೈಸೂರಿನ ಶ್ರೀಹರ್ಷ ಹಾಡಿದ ‘ಬೊಂಬೆ ಹೇಳುತೈತೆ’ ಗೀತೆಗೆ ಮೈದಾನದಲ್ಲಿ ಸೇರಿದ್ದ ಜನರೆಲ್ಲ ದನಿಗೂಡಿಸಿದರು.</p>.<p>‘ಅಪ್ಪ ಐ ಲವ್ ಯೂ’ ಹಾಡಿನೊಂದಿಗೆ ವೇದಿಕೆಗೆ ಬಂದ ಅನುರಾಧ ಭಟ್, ‘ಕಣ್ಣು ಹೊಡಿಯಾಕ್ಕ’ ಹಾಡಿ ಮನರಂಜಿಸಿದರು. ಇವರಿಗೆ ದನಿಯಾದ ಗಾಯಕ ಜಸ್ಕರಣ್ ಸಿಂಗ್, ‘ದ್ವಾಪರ ದಾಟುತ’ ಹಾಡಿನ ಮೂಲಕ ರಂಜಿಸಿದರು.</p>.<p>ಡ್ರೋನ್ ಪ್ರದರ್ಶನಕ್ಕೆ ಸಚಿವ ಕೆ. ವೆಂಕಟೇಶ್, ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>