<p><strong>ಮೈಸೂರು:</strong> ಬಿರುಮಳೆಯ ನಡುವೆಯೂ ರಾಜಠೀವಿಯಿಂದ ಹೆಜ್ಜೆ ಹಾಕಿದ ಅಂಬಾರಿ ಆನೆ ‘ಅಭಿಮನ್ಯು’ ನೇತೃತ್ವದ ಗಜಪಡೆಗೆ ಇಲ್ಲಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. </p>.<p>‘ಅಭಿಮನ್ಯು’ ಜೊತೆ ಭೀಮ, ಮಹೇಂದ್ರ, ಧನಂಜಯ, ಕಂಜನ್, ಪ್ರಶಾಂತ, ಏಕಲವ್ಯ, ಲಕ್ಷ್ಮಿ ಹಾಗೂ ಕಾವೇರಿ ಆನೆಗಳಿಗೆ ಸಂಜೆ 6.45ಕ್ಕೆ ಅರಮನೆ ಪುರೋಹಿತ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ಅರಮನೆ ಪೊಲೀಸ್ ಬ್ಯಾಂಡ್, ಮಂಗಳವಾದ್ಯದೊಂದಿಗೆ ಪೊಲೀಸ್ ಗೌರವವನ್ನೂ ನೀಡಲಾಯಿತು. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಆರತಿ ಬೆಳಗಿ ಬೂದುಗುಂಬಳ ಒಡೆದರು. </p>.<p>ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದ ಅರಮನೆ ಎದುರಿನ ಮಾರ್ಗದಲ್ಲಿ ಜಾನಪದ ಕಲಾತಂಡಗಳು, ಕಳಶ ಹೊತ್ತ ಮಹಿಳೆಯರು, ಅಶ್ವರೋಹಿ ಪಡೆಯ ಹಿಂದೆ ಆನೆಗಳು ಬಂದವು.</p>.<p>ಆ.4ರಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಿಂದ ಹೊರಟು ಸಾಂಸ್ಕೃತಿಕ ನಗರಿಗೆ ಪ್ರವೇಶ ಪಡೆದಿದ್ದ ಆನೆಗಳು ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದ್ದವು. ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯಾಹ್ನ ಪೂಜೆ ಸಲ್ಲಿಸಿ ಅರಮನೆಗೆ ಬೀಳ್ಕೊಟ್ಟಿದ್ದರು.</p>.<p>ಉತ್ಸವದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳಿಗೆ ಅರಮನೆ ಮಂಡಳಿಯಿಂದ ಸನ್ಮಾನಿಸಲಾಯಿತು. ಮಾವುತರು, ಕಾವಾಡಿಗಳಿಗೆ ಅಗತ್ಯ ವಸ್ತುಗಳನ್ನು ಒಳಗೊಂಡ ಕಿಟ್ಗಳನ್ನು ಸಚಿವ ಮಹದೇವಪ್ಪ ವಿತರಿಸಿದರು. ಅರಮನೆ ಆವರಣದಲ್ಲಿ ನಿರ್ಮಿಸಿರುವ ಬಿಡಾರಗಳಿಗೆ ಆನೆಗಳು ತೆರಳಿದವು. ಸೋಮವಾರ (ಆ.11)ರಂದು ಬೆಳಿಗ್ಗೆ 8ಕ್ಕೆ ಆನೆಗಳ ತೂಕ ಪರೀಕ್ಷೆ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬಿರುಮಳೆಯ ನಡುವೆಯೂ ರಾಜಠೀವಿಯಿಂದ ಹೆಜ್ಜೆ ಹಾಕಿದ ಅಂಬಾರಿ ಆನೆ ‘ಅಭಿಮನ್ಯು’ ನೇತೃತ್ವದ ಗಜಪಡೆಗೆ ಇಲ್ಲಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. </p>.<p>‘ಅಭಿಮನ್ಯು’ ಜೊತೆ ಭೀಮ, ಮಹೇಂದ್ರ, ಧನಂಜಯ, ಕಂಜನ್, ಪ್ರಶಾಂತ, ಏಕಲವ್ಯ, ಲಕ್ಷ್ಮಿ ಹಾಗೂ ಕಾವೇರಿ ಆನೆಗಳಿಗೆ ಸಂಜೆ 6.45ಕ್ಕೆ ಅರಮನೆ ಪುರೋಹಿತ ಪ್ರಹ್ಲಾದ್ ರಾವ್ ನೇತೃತ್ವದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಪೂಜೆ ಸಲ್ಲಿಸಿ ಬರಮಾಡಿಕೊಂಡರು.</p>.<p>ಅರಮನೆ ಪೊಲೀಸ್ ಬ್ಯಾಂಡ್, ಮಂಗಳವಾದ್ಯದೊಂದಿಗೆ ಪೊಲೀಸ್ ಗೌರವವನ್ನೂ ನೀಡಲಾಯಿತು. ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಆರತಿ ಬೆಳಗಿ ಬೂದುಗುಂಬಳ ಒಡೆದರು. </p>.<p>ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದ ಅರಮನೆ ಎದುರಿನ ಮಾರ್ಗದಲ್ಲಿ ಜಾನಪದ ಕಲಾತಂಡಗಳು, ಕಳಶ ಹೊತ್ತ ಮಹಿಳೆಯರು, ಅಶ್ವರೋಹಿ ಪಡೆಯ ಹಿಂದೆ ಆನೆಗಳು ಬಂದವು.</p>.<p>ಆ.4ರಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಹಳ್ಳಿಯಿಂದ ಹೊರಟು ಸಾಂಸ್ಕೃತಿಕ ನಗರಿಗೆ ಪ್ರವೇಶ ಪಡೆದಿದ್ದ ಆನೆಗಳು ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದ್ದವು. ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯಾಹ್ನ ಪೂಜೆ ಸಲ್ಲಿಸಿ ಅರಮನೆಗೆ ಬೀಳ್ಕೊಟ್ಟಿದ್ದರು.</p>.<p>ಉತ್ಸವದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿಗಳಿಗೆ ಅರಮನೆ ಮಂಡಳಿಯಿಂದ ಸನ್ಮಾನಿಸಲಾಯಿತು. ಮಾವುತರು, ಕಾವಾಡಿಗಳಿಗೆ ಅಗತ್ಯ ವಸ್ತುಗಳನ್ನು ಒಳಗೊಂಡ ಕಿಟ್ಗಳನ್ನು ಸಚಿವ ಮಹದೇವಪ್ಪ ವಿತರಿಸಿದರು. ಅರಮನೆ ಆವರಣದಲ್ಲಿ ನಿರ್ಮಿಸಿರುವ ಬಿಡಾರಗಳಿಗೆ ಆನೆಗಳು ತೆರಳಿದವು. ಸೋಮವಾರ (ಆ.11)ರಂದು ಬೆಳಿಗ್ಗೆ 8ಕ್ಕೆ ಆನೆಗಳ ತೂಕ ಪರೀಕ್ಷೆ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>