‘ದಸರಾ ಆದ ಮೇಲೆ, ದಸರಾ ನಡೆಯುವಾಗ ಇಂತಹ ಮದ್ದು ಹಾಕುವ ಕೆಲಸ ಜೊತೆಯಲ್ಲಿ ಇದ್ದವರಿಂದಲೇ ನಡೆದಿದೆ. ಅದು ನನಗೆ ಗೊತ್ತಿದೆ. ಎಲ್ಲವನ್ನೂ ಮೀರಿ ದಸರಾ ಯಶಸ್ವಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 10 ದಿನವೂ ಎಲ್ಲ ಕಾರ್ಯಕ್ರಮಗಳಲ್ಲೂ ಭಾಗವಹಿಸಿದ್ದೇನೆ. ಮೈಸೂರಿನವರೇ ಜಿಲ್ಲಾ ಉಸ್ತುವಾರಿ ಸಚಿವರಿದ್ದಾಗಲೂ ಈ ರೀತಿ ಎಲ್ಲಾ ಕಾರ್ಯಕ್ರಮಗಳಿಗೆ ಹೋಗಿರಲಿಲ್ಲ. ನಾನು ಪ್ರಮಾಣಿಕವಾಗಿ, ಉತ್ಸವವು ಅಚ್ಚುಕಟ್ಟಾಗಿ ನಡೆಯುವಂತಾಗಲು ಶ್ರಮಿಸಿದ್ದೇನೆ. ಲೆಕ್ಕವನ್ನು ಶೀಘ್ರದಲ್ಲೇ ಕೊಡುತ್ತೇವೆ’ ಎಂದು ತಿಳಿಸಿದರು.