<p><strong>ಮೈಸೂರು:</strong> ‘ನಾಡಹಬ್ಬ ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ದಸರಾ ಮಹೋತ್ಸವದ ದೀಪಾಲಂಕಾರ ಸಮಿತಿಯಿಂದ ಇಲ್ಲಿನ ವಿಜಯನಗರ 2ನೇ ಹಂತದ ಸೆಸ್ಕ್ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಇತರ ಪ್ರಾಯೋಜಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡಬೇಕು. ಈ ಬಾರಿಯ ದಸರಾ ಉತ್ಸವವನ್ನು ವಿಜೃಂಭಣೆಯಿಂದ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಉನ್ನತ ಮಟ್ಟದ ಸಭೆಯಲ್ಲಿ ಸೂಚಿಸಿದ್ದಾರೆ. ಹಾಗಾಗಿ, ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.</p>.<p>ಸೆಸ್ಕ್ ತಾಂತ್ರಿಕ ನಿರ್ದೇಶಕ ಮುನಿಗೋಪಾಲ್ ರಾಜು ಮಾತನಾಡಿ, ‘ದಸರೆ ದೀಪಾಲಂಕಾರ ಅತ್ಯಂತ ಆಕರ್ಷಣೀಯವಾಗಿರಲಿದೆ. ಹೀಗಾಗಿ 3-4 ವರ್ಷಗಳಿಂದ ವಿಶೇಷ ಮೆರಗು ನೀಡುವ ಮೂಲಕ ಅದರ ಆಕರ್ಷಣೆ ಹೆಚ್ಚುವಂತೆ ಮಾಡಲಾಗಿದೆ. ಈ ವರ್ಷವೂ ಇನ್ನಷ್ಟು ಆಕರ್ಷಕವಾಗಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಯಾವ ಪರಿಕಲ್ಪನೆ ಇದೆ ಎಂಬುದನ್ನು ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಿರುವ ಪ್ರಾಯೋಜಕರು ಮೊದಲೇ ತಿಳಿಸಬೇಕು’ ಎಂದು ಹೇಳಿದರು.</p>.<p>ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಇದರಿಂದಾಗಿ ಹೊಸ ಆಲೋಚನೆಗಳು ದೊರೆಯಲಿದ್ದು, ದಸರಾ ದೀಪಾಲಂಕಾರ ಆಕರ್ಷಕಗೊಳಿಸಲು ನೆರವಾಗಲಿದೆ’ ಎಂದರು.</p>.<p>ಆಕರ್ಷಣೆ ಹೆಚ್ಚಿಸುವ ಜತೆಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಚರ್ಚಿಸಲಾಯಿತು. ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಪ್ರಾಯೋಜಕರು, ವಿದ್ಯುತ್ ಗುತ್ತಿಗೆದಾರರು ಸಲಹೆಗಳನ್ನು ನೀಡಿದರು.</p>.<p>ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ರಮೇಶ್, ಸೆಸ್ಕ್ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಎಸ್ಇ ಸುನೀಲ್ ಕುಮಾರ್ ಪಾಲ್ಗೊಂಡಿದ್ದರು.</p>.<div><blockquote>ದಸರಾ ದೀಪಾಲಂಕಾರವನ್ನು ಅತ್ಯಂತ ಆಕರ್ಷಕವಾಗಿಸಲು ಪ್ರಯತ್ನಗಳು ನಡೆದಿವೆ. ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ ಇದು ಸಾಧ್ಯವಾಗಲಿದೆ.</blockquote><span class="attribution">-ಜಿ.ಶೀಲಾ, ವ್ಯವಸ್ಥಾಪಕ ನಿರ್ದೇಶಕರು ಸೆಸ್ಕ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾಡಹಬ್ಬ ದಸರಾ ದೀಪಾಲಂಕಾರಕ್ಕೆ ಹೊಸ ಮೆರುಗು ನೀಡಲು ಚಿಂತನೆ ನಡೆಸಲಾಗುತ್ತಿದೆ’ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ದಸರಾ ಮಹೋತ್ಸವದ ದೀಪಾಲಂಕಾರ ಸಮಿತಿಯಿಂದ ಇಲ್ಲಿನ ವಿಜಯನಗರ 2ನೇ ಹಂತದ ಸೆಸ್ಕ್ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು ಹಾಗೂ ಇತರ ಪ್ರಾಯೋಜಕರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಇನ್ನಷ್ಟು ಆಕರ್ಷಕವಾಗಿಸಲು ಪ್ರಾಯೋಜಕರು ಸೂಕ್ತ ಸಲಹೆ, ಸಹಕಾರ ನೀಡಬೇಕು. ಈ ಬಾರಿಯ ದಸರಾ ಉತ್ಸವವನ್ನು ವಿಜೃಂಭಣೆಯಿಂದ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಉನ್ನತ ಮಟ್ಟದ ಸಭೆಯಲ್ಲಿ ಸೂಚಿಸಿದ್ದಾರೆ. ಹಾಗಾಗಿ, ದೀಪಾಲಂಕಾರವನ್ನು ಆಕರ್ಷಣೀಯ ಹಾಗೂ ವಿನೂತನ ರೀತಿಯಲ್ಲಿ ಮಾಡಲು ಚಿಂತನೆ ನಡೆಸಲಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ ಎಂದರು.</p>.<p>ಸೆಸ್ಕ್ ತಾಂತ್ರಿಕ ನಿರ್ದೇಶಕ ಮುನಿಗೋಪಾಲ್ ರಾಜು ಮಾತನಾಡಿ, ‘ದಸರೆ ದೀಪಾಲಂಕಾರ ಅತ್ಯಂತ ಆಕರ್ಷಣೀಯವಾಗಿರಲಿದೆ. ಹೀಗಾಗಿ 3-4 ವರ್ಷಗಳಿಂದ ವಿಶೇಷ ಮೆರಗು ನೀಡುವ ಮೂಲಕ ಅದರ ಆಕರ್ಷಣೆ ಹೆಚ್ಚುವಂತೆ ಮಾಡಲಾಗಿದೆ. ಈ ವರ್ಷವೂ ಇನ್ನಷ್ಟು ಆಕರ್ಷಕವಾಗಿಸಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಯಾವ ಪರಿಕಲ್ಪನೆ ಇದೆ ಎಂಬುದನ್ನು ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರ ಮಾಡಲಿರುವ ಪ್ರಾಯೋಜಕರು ಮೊದಲೇ ತಿಳಿಸಬೇಕು’ ಎಂದು ಹೇಳಿದರು.</p>.<p>ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ‘ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು. ಇದರಿಂದಾಗಿ ಹೊಸ ಆಲೋಚನೆಗಳು ದೊರೆಯಲಿದ್ದು, ದಸರಾ ದೀಪಾಲಂಕಾರ ಆಕರ್ಷಕಗೊಳಿಸಲು ನೆರವಾಗಲಿದೆ’ ಎಂದರು.</p>.<p>ಆಕರ್ಷಣೆ ಹೆಚ್ಚಿಸುವ ಜತೆಗೆ ಜನರ ಸುರಕ್ಷತೆಗೂ ಆದ್ಯತೆ ನೀಡಬೇಕೆಂದು ಚರ್ಚಿಸಲಾಯಿತು. ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಪ್ರಾಯೋಜಕರು, ವಿದ್ಯುತ್ ಗುತ್ತಿಗೆದಾರರು ಸಲಹೆಗಳನ್ನು ನೀಡಿದರು.</p>.<p>ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ರಮೇಶ್, ಸೆಸ್ಕ್ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಎಸ್ಇ ಸುನೀಲ್ ಕುಮಾರ್ ಪಾಲ್ಗೊಂಡಿದ್ದರು.</p>.<div><blockquote>ದಸರಾ ದೀಪಾಲಂಕಾರವನ್ನು ಅತ್ಯಂತ ಆಕರ್ಷಕವಾಗಿಸಲು ಪ್ರಯತ್ನಗಳು ನಡೆದಿವೆ. ಪ್ರಾಯೋಜಕರು ಹೆಚ್ಚಿನ ಸಹಕಾರ ನೀಡಿದರೆ ಇದು ಸಾಧ್ಯವಾಗಲಿದೆ.</blockquote><span class="attribution">-ಜಿ.ಶೀಲಾ, ವ್ಯವಸ್ಥಾಪಕ ನಿರ್ದೇಶಕರು ಸೆಸ್ಕ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>