<p><strong>ಮೈಸೂರು:</strong> ಅರಮನೆ ಅಂಗಳದ ಆನೆ ಬಿಡಾರದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳ ಮಾವುತ, ಕಾವಾಡಿ ಮತ್ತು ಕುಟುಂಬದ ಸದಸ್ಯರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಉಚಿತ ತಪಾಸಣೆ ನಡೆಸಲಾಯಿತು.</p>.<p>ಆಸ್ಪತ್ರೆ ನಿರ್ದೇಶಕ ಪ್ರಮೋದ್ ಕುಂದರ್ ಮಾತನಾಡಿ, ‘ಆನೆಗಳ ಯೋಗಕ್ಷೇಮ ನೋಡಿಕೊಳ್ಳುವವರ ಆರೋಗ್ಯ ಮುಖ್ಯ. ಕಾಡಿನಲ್ಲಿರುವವರು ನಗರಕ್ಕೆ ಬಂದಾಗ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಅವರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದನ್ನು ಮನಗಂಡು ಶಿಬಿರದ ಮೂಲಕ ತಪಾಸಣೆ ನಡೆಸಲಾಗಿದೆ’ ಎಂದರು. </p>.<p>ಡಿಸಿಎಫ್ ಪ್ರಭುಗೌಡ ಮಾತನಾಡಿ, ‘ಆನೆಗಳಿಗೆ ನೀಡುವ ಆರೈಕೆಯಷ್ಟೇ ಮಾವುತರು ಮತ್ತು ಅವರ ಕುಟುಂಬಗಳ ಆರೋಗ್ಯವೂ ಮುಖ್ಯ. ಅವರು ತಮ್ಮ ಆರೋಗ್ಯಕ್ಕಿಂತ ಹೆಚ್ಚಾಗಿ ಆನೆಗಳ ಯೋಗಕ್ಷೇಮದ ಬಗ್ಗೆ ಹೆಚ್ಚಾಗಿ ಯೋಚಿಸುತ್ತಾರೆ. ಇದರಿಂದ ಅವರ ಆರೋಗ್ಯ ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಶಿಬಿರ ಆಯೋಜಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅರಮನೆ ಅಂಗಳದ ಆನೆ ಬಿಡಾರದಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗಳ ಮಾವುತ, ಕಾವಾಡಿ ಮತ್ತು ಕುಟುಂಬದ ಸದಸ್ಯರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಉಚಿತ ತಪಾಸಣೆ ನಡೆಸಲಾಯಿತು.</p>.<p>ಆಸ್ಪತ್ರೆ ನಿರ್ದೇಶಕ ಪ್ರಮೋದ್ ಕುಂದರ್ ಮಾತನಾಡಿ, ‘ಆನೆಗಳ ಯೋಗಕ್ಷೇಮ ನೋಡಿಕೊಳ್ಳುವವರ ಆರೋಗ್ಯ ಮುಖ್ಯ. ಕಾಡಿನಲ್ಲಿರುವವರು ನಗರಕ್ಕೆ ಬಂದಾಗ ಇಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಅವರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದನ್ನು ಮನಗಂಡು ಶಿಬಿರದ ಮೂಲಕ ತಪಾಸಣೆ ನಡೆಸಲಾಗಿದೆ’ ಎಂದರು. </p>.<p>ಡಿಸಿಎಫ್ ಪ್ರಭುಗೌಡ ಮಾತನಾಡಿ, ‘ಆನೆಗಳಿಗೆ ನೀಡುವ ಆರೈಕೆಯಷ್ಟೇ ಮಾವುತರು ಮತ್ತು ಅವರ ಕುಟುಂಬಗಳ ಆರೋಗ್ಯವೂ ಮುಖ್ಯ. ಅವರು ತಮ್ಮ ಆರೋಗ್ಯಕ್ಕಿಂತ ಹೆಚ್ಚಾಗಿ ಆನೆಗಳ ಯೋಗಕ್ಷೇಮದ ಬಗ್ಗೆ ಹೆಚ್ಚಾಗಿ ಯೋಚಿಸುತ್ತಾರೆ. ಇದರಿಂದ ಅವರ ಆರೋಗ್ಯ ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಿಂದ ಶಿಬಿರ ಆಯೋಜಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>