<p><strong>ಮೈಸೂರು: </strong>ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವ ಸಿದ್ಧತೆ ಪರಿಶೀಲಿಸಿದರು.</p>.<p>ವೇದಿಕೆ, ಆಸನಗಳು, ಭದ್ರತೆ ಮೊದಲಾದ ವ್ಯವಸ್ಥೆಯನ್ನು ವೀಕ್ಷಿಸಿದರು.</p>.<p>ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರಪತಿಯವರ ಕಚೇರಿಯ ಸೂಚನೆಗಳ ಪ್ರಕಾರವೇ ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೆ.26ರಂದು ನಾಡಹಬ್ಬದ ಉದ್ಘಾಟನೆಗೆ ಸಿದ್ಧತೆ ನಡೆದಿದೆ. ವೇದಿಕೆಯಲ್ಲಿ 13 ಮಂದಿಗೆ ಆಸನಗಳಿರಲಿವೆ. 1,100 ಮಂದಿಗೆ ಆಸನಗಳನ್ನು ಹಾಕಲಾಗಿದೆ’ ಎಂದರು.</p>.<p>‘ರಾಷ್ಟ್ರಪತಿಗಳು ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದಸರಾ ಉದ್ಘಾಟಿಸಲಿದ್ದಾರೆ. ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ. ಕೋಟೆ ತಾಲ್ಲೂಕಿನ ಆದಿವಾಸಿಗಳೊಂದಿಗೆ ಫೋಟೊ ಸೆಷನ್ಗೆ 10 ನಿಮಿಷ ಸಮಯ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>ಸಂಸದ ಪ್ರತಾಪ ಸಿಂಹ, ಮೇಯರ್ ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನದ ಹಿನ್ನೆಲೆಯಲ್ಲಿ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಪೂರ್ವ ಸಿದ್ಧತೆ ಪರಿಶೀಲಿಸಿದರು.</p>.<p>ವೇದಿಕೆ, ಆಸನಗಳು, ಭದ್ರತೆ ಮೊದಲಾದ ವ್ಯವಸ್ಥೆಯನ್ನು ವೀಕ್ಷಿಸಿದರು.</p>.<p>ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಷ್ಟ್ರಪತಿಯವರ ಕಚೇರಿಯ ಸೂಚನೆಗಳ ಪ್ರಕಾರವೇ ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೆ.26ರಂದು ನಾಡಹಬ್ಬದ ಉದ್ಘಾಟನೆಗೆ ಸಿದ್ಧತೆ ನಡೆದಿದೆ. ವೇದಿಕೆಯಲ್ಲಿ 13 ಮಂದಿಗೆ ಆಸನಗಳಿರಲಿವೆ. 1,100 ಮಂದಿಗೆ ಆಸನಗಳನ್ನು ಹಾಕಲಾಗಿದೆ’ ಎಂದರು.</p>.<p>‘ರಾಷ್ಟ್ರಪತಿಗಳು ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ದಸರಾ ಉದ್ಘಾಟಿಸಲಿದ್ದಾರೆ. ಹುಣಸೂರು, ಪಿರಿಯಾಪಟ್ಟಣ ಹಾಗೂ ಎಚ್.ಡಿ. ಕೋಟೆ ತಾಲ್ಲೂಕಿನ ಆದಿವಾಸಿಗಳೊಂದಿಗೆ ಫೋಟೊ ಸೆಷನ್ಗೆ 10 ನಿಮಿಷ ಸಮಯ ಕೊಟ್ಟಿದ್ದಾರೆ’ ಎಂದು ತಿಳಿಸಿದರು.</p>.<p>ಸಂಸದ ಪ್ರತಾಪ ಸಿಂಹ, ಮೇಯರ್ ಶಿವಕುಮಾರ್, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಮಂಜುನಾಥಸ್ವಾಮಿ, ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>