ಮೈಸೂರು: ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು.
'ಕೆರೆ ಅಭಿವೃದ್ಧಿ ಮಾಡುವುದು ಅಗತ್ಯವಾಗಿದೆ. ಕೆರೆಯ ಆವರಣದಲ್ಲಿರುವ ಜಾಗಿಂಗ್ ಟ್ರ್ಯಾಕ್ ಅಭಿವೃದ್ಧಿಪಡಿಸಬೇಕು. ಕಸ ತೆರವು, ರಕ್ಷಣಾ ಬಲೆ ಅಳವಡಿಕೆ ಹಾಗೂ ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡಬೇಕು. ದುರ್ವಾಸನೆ ಬರುತ್ತಿರುವ ಭಾಗದಲ್ಲಿ ಹೂಳೆತ್ತಬೇಕು. ಕೆರೆ ಸ್ವಚ್ಛಗೊಳಿಸಬೇಕು. ಬೋಟ್ ದುರಸ್ತಿ ಮಾಡಿಸಿ ವಿಹಾರಕ್ಕೆ ಚಾಲನೆ ಕೊಡಬೇಕು' ಎಂದು ಅಧಿಕಾರಿಗಳಿಗೆ ಸೂಚಿಸಿದರು.