<p><strong>ಮೈಸೂರು: ‘</strong>ನಗರದ ದೇವರಾಜ ಮಾರುಕಟ್ಟೆ ಸಂಪೂರ್ಣ ಪಾರಂಪರಿಕ ಕಟ್ಟಡವಲ್ಲ’ ಎಂದು ಮಾಜಿ ಮೇಯರ್ ಎಸ್. ಸಂದೇಶ್ ಸ್ವಾಮಿ ಪ್ರತಿಪಾದಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸುಮಾರು ಏಳು ಎಕರೆ ವಿಸ್ತೀರ್ಣ ಹೊಂದಿರುವ ಈ ಮಾರುಕಟ್ಟೆಯಲ್ಲಿ ಸುತ್ತಲೂ ಹದಿನೈದು ಅಡಿ ಅಳತೆಯಲ್ಲಿ ಚೌಕಕಾರವಾಗಿ ನಿರ್ಮಿಸಿ ರುವ ಕಟ್ಟಡ ಮಾತ್ರ ಪಾರಂಪರಿಕ ಸೌಧವಾಗಿದೆ. ಅದರ ಮಧ್ಯ ಭಾಗದ ಲ್ಲಿರುವ ಸುಮಾರು ಐದು ಎಕರೆ ವಿಸ್ತೀರ್ಣದ ಕಲ್ನಾರ್ ಶೀಟ್ ಕಟ್ಟಡವು ಸಾಮಾನ್ಯವಾದುದು’ ಎಂದು ತಿಳಿಸಿದ್ದಾರೆ.</p>.<p>‘ಈ ಜಾಗದಲ್ಲಿ, ನಾನು ಮೇಯರ್ ಹಾಗೂ ಕೆ.ಎಸ್. ರಾಯ್ಕರ್ ಆಯುಕ್ತರಾಗಿದ್ದಾಗ ತಲಾ ಎರಡಂತಸ್ತಿನ ವಾಹನ ನಿಲ್ದಾಣ ತಾಣ ಹಾಗೂ ಮಳಿಗೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ಅನುಮತಿ ಸಿಗಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಇಲ್ಲಿ ಅಧಿಕೃತವಾಗಿ 750–800 ವ್ಯಾಪಾರಿಗಳಿದ್ದಾರೆ. ಕೆಲವರು ಮಳಿಗೆಯನ್ನು ಪರಭಾರೆ ಮಾಡಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿವೆ’ ಎಂದು ಆರೋಪಿಸಿದ್ದಾರೆ.</p>.<p>‘ದುರಸ್ತಿಗೆ ಅನುದಾನ ಒದಗಿಸು ವಂತೆ ಸಂಸದ ಯದುವೀರ್ ಅವರು ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ. ಮೈಸೂರಿನವರೇ ಆದ ಸಿದ್ದರಾಮಯ್ಯ ಅವರು ಕಾಳಜಿ ವಹಿಸಿ ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-39-1947145545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ನಗರದ ದೇವರಾಜ ಮಾರುಕಟ್ಟೆ ಸಂಪೂರ್ಣ ಪಾರಂಪರಿಕ ಕಟ್ಟಡವಲ್ಲ’ ಎಂದು ಮಾಜಿ ಮೇಯರ್ ಎಸ್. ಸಂದೇಶ್ ಸ್ವಾಮಿ ಪ್ರತಿಪಾದಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸುಮಾರು ಏಳು ಎಕರೆ ವಿಸ್ತೀರ್ಣ ಹೊಂದಿರುವ ಈ ಮಾರುಕಟ್ಟೆಯಲ್ಲಿ ಸುತ್ತಲೂ ಹದಿನೈದು ಅಡಿ ಅಳತೆಯಲ್ಲಿ ಚೌಕಕಾರವಾಗಿ ನಿರ್ಮಿಸಿ ರುವ ಕಟ್ಟಡ ಮಾತ್ರ ಪಾರಂಪರಿಕ ಸೌಧವಾಗಿದೆ. ಅದರ ಮಧ್ಯ ಭಾಗದ ಲ್ಲಿರುವ ಸುಮಾರು ಐದು ಎಕರೆ ವಿಸ್ತೀರ್ಣದ ಕಲ್ನಾರ್ ಶೀಟ್ ಕಟ್ಟಡವು ಸಾಮಾನ್ಯವಾದುದು’ ಎಂದು ತಿಳಿಸಿದ್ದಾರೆ.</p>.<p>‘ಈ ಜಾಗದಲ್ಲಿ, ನಾನು ಮೇಯರ್ ಹಾಗೂ ಕೆ.ಎಸ್. ರಾಯ್ಕರ್ ಆಯುಕ್ತರಾಗಿದ್ದಾಗ ತಲಾ ಎರಡಂತಸ್ತಿನ ವಾಹನ ನಿಲ್ದಾಣ ತಾಣ ಹಾಗೂ ಮಳಿಗೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ಅನುಮತಿ ಸಿಗಲಿಲ್ಲ’ ಎಂದು ಹೇಳಿದ್ದಾರೆ.</p>.<p>‘ಇಲ್ಲಿ ಅಧಿಕೃತವಾಗಿ 750–800 ವ್ಯಾಪಾರಿಗಳಿದ್ದಾರೆ. ಕೆಲವರು ಮಳಿಗೆಯನ್ನು ಪರಭಾರೆ ಮಾಡಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿವೆ’ ಎಂದು ಆರೋಪಿಸಿದ್ದಾರೆ.</p>.<p>‘ದುರಸ್ತಿಗೆ ಅನುದಾನ ಒದಗಿಸು ವಂತೆ ಸಂಸದ ಯದುವೀರ್ ಅವರು ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ. ಮೈಸೂರಿನವರೇ ಆದ ಸಿದ್ದರಾಮಯ್ಯ ಅವರು ಕಾಳಜಿ ವಹಿಸಿ ನಗರದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-39-1947145545</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>