<p>ಮೈಸೂರು: ‘ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಪ್ರಾಪ್ತಿಯಾಗಲಿ’ ಎಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗಾಂಧಿ ವೃತ್ತದ ಬಳಿ ಶನಿವಾರ ಸತ್ಯಾಗ್ರಹ ನಡೆಸಿದರು.</p>.<p>ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಕೆ.ಬಿ.ಭಾಗ್ಯರಾಜು ಮಾತನಾಡಿ, ‘ಡಿಕೆಶಿ ನಲವತ್ತು ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಜೀವನ, ಜೀವವನ್ನು ತ್ಯಾಗ ಮಾಡಿದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದರಿಂದ 2028ರ ಚುನಾವಣೆಗೂ ಸಹಾಯವಾಗಲಿದೆ’ ಎಂದರು.</p>.<p>‘ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯದಿದ್ದರೆ ಹೋರಾಟ ತೀವ್ರಗೊಳಿಸಲಿದ್ದೇವೆ. ಪಂಚ ರಾಜ್ಯ ಚುನಾವಣೆಯಲ್ಲೂ ಈ ಅಂಶ ಪರಿಣಾಮ ಬೀರಲಿದೆ. ಹೀಗಾಗಿ ಪಕ್ಷ ತಕ್ಷಣವೇ ಎಚ್ಚೆತ್ತುಕೊಂಡು, ಕಾರ್ಯಕರ್ತರ ಕೂಗಿಗೆ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-1796405816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಪ್ರಾಪ್ತಿಯಾಗಲಿ’ ಎಂದು ಆಗ್ರಹಿಸಿ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಗಾಂಧಿ ವೃತ್ತದ ಬಳಿ ಶನಿವಾರ ಸತ್ಯಾಗ್ರಹ ನಡೆಸಿದರು.</p>.<p>ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಕೆ.ಬಿ.ಭಾಗ್ಯರಾಜು ಮಾತನಾಡಿ, ‘ಡಿಕೆಶಿ ನಲವತ್ತು ವರ್ಷದಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಜೀವನ, ಜೀವವನ್ನು ತ್ಯಾಗ ಮಾಡಿದ್ದಾರೆ. ಇದನ್ನು ಗಮನಿಸಿ ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದರಿಂದ 2028ರ ಚುನಾವಣೆಗೂ ಸಹಾಯವಾಗಲಿದೆ’ ಎಂದರು.</p>.<p>‘ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ದೊರೆಯದಿದ್ದರೆ ಹೋರಾಟ ತೀವ್ರಗೊಳಿಸಲಿದ್ದೇವೆ. ಪಂಚ ರಾಜ್ಯ ಚುನಾವಣೆಯಲ್ಲೂ ಈ ಅಂಶ ಪರಿಣಾಮ ಬೀರಲಿದೆ. ಹೀಗಾಗಿ ಪಕ್ಷ ತಕ್ಷಣವೇ ಎಚ್ಚೆತ್ತುಕೊಂಡು, ಕಾರ್ಯಕರ್ತರ ಕೂಗಿಗೆ ಸ್ಪಂದಿಸಬೇಕು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-39-1796405816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>