<p>ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಹೆಬ್ಬಾಳು 1ನೇ ಹಂತದ ನಿವಾಸಿ ಪ್ರಮೋದ್ ಕುಮಾರ್.ಎಚ್.ಟಿ (27)ಗೆ 5ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ಪ್ರಮೋದ್ ಕುಮಾರ್.ಎಚ್.ಟಿ ಹಾಗೂ ಪೂಜಾ ಮದುವೆ ಆದಾಗಿನಿಂದಲೂ ತಂದೆ ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಹಿಂಸೆ ನೀಡುತ್ತಿದ್ದ. ಮಾತಿನ ನಡುವೆ ಸಾಯುವಂತೆ ಪ್ರೇರಣೆ ನೀಡುತ್ತಿದ್ದ. 2014ರ ಸೆ.20ರ ಮಧ್ಯಾಹ್ನ 12.30ಕ್ಕೆ ಪೂಜಾ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಬಗ್ಗೆ ಪೂಜಾ ಕುಟುಂಬ ಪ್ರಮೋದ್ ವಿರುದ್ಧ ದೂರು ನೀಡಿದ್ದರು. ವಿಜಯನಗರ ಠಾಣೆಯ ಅಂದಿನ ಇನ್ಸ್ಪೆಕ್ಟರ್ ರವಿ.ಸಿ.ವಿ ತನಿಖೆ ಮಾಡಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.</p>.<p>ನ್ಯಾಯಾಧೀಶೆ ರೂಪಾ.ಕೆ.ಎನ್ ವಿಚಾರಣೆ ನಡೆಸಿ, ಪ್ರಮೋದ್ಗೆ ವರದಕ್ಷಿಣೆ ನಿಷೇಧ ಕಾಯ್ದೆ ಅಡಿಯ ಅಪರಾಧಗಳಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 2.35 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಬಿ.ಈ.ಯೋಗೇಶ್ವರ ಮತ್ತು ಎ.ಎನ್.ಮಧು ಸರ್ಕಾರದ ಪರ ವಾದ ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-36-1993058233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಸಾವಿಗೆ ಕಾರಣರಾದ ಪ್ರಕರಣದಲ್ಲಿ ಹೆಬ್ಬಾಳು 1ನೇ ಹಂತದ ನಿವಾಸಿ ಪ್ರಮೋದ್ ಕುಮಾರ್.ಎಚ್.ಟಿ (27)ಗೆ 5ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ಪ್ರಮೋದ್ ಕುಮಾರ್.ಎಚ್.ಟಿ ಹಾಗೂ ಪೂಜಾ ಮದುವೆ ಆದಾಗಿನಿಂದಲೂ ತಂದೆ ಮನೆಯಿಂದ ಹಣ ತೆಗೆದುಕೊಂಡು ಬರುವಂತೆ ಹಿಂಸೆ ನೀಡುತ್ತಿದ್ದ. ಮಾತಿನ ನಡುವೆ ಸಾಯುವಂತೆ ಪ್ರೇರಣೆ ನೀಡುತ್ತಿದ್ದ. 2014ರ ಸೆ.20ರ ಮಧ್ಯಾಹ್ನ 12.30ಕ್ಕೆ ಪೂಜಾ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಈ ಬಗ್ಗೆ ಪೂಜಾ ಕುಟುಂಬ ಪ್ರಮೋದ್ ವಿರುದ್ಧ ದೂರು ನೀಡಿದ್ದರು. ವಿಜಯನಗರ ಠಾಣೆಯ ಅಂದಿನ ಇನ್ಸ್ಪೆಕ್ಟರ್ ರವಿ.ಸಿ.ವಿ ತನಿಖೆ ಮಾಡಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.</p>.<p>ನ್ಯಾಯಾಧೀಶೆ ರೂಪಾ.ಕೆ.ಎನ್ ವಿಚಾರಣೆ ನಡೆಸಿ, ಪ್ರಮೋದ್ಗೆ ವರದಕ್ಷಿಣೆ ನಿಷೇಧ ಕಾಯ್ದೆ ಅಡಿಯ ಅಪರಾಧಗಳಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹ 2.35 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ. ಬಿ.ಈ.ಯೋಗೇಶ್ವರ ಮತ್ತು ಎ.ಎನ್.ಮಧು ಸರ್ಕಾರದ ಪರ ವಾದ ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-36-1993058233</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>