<p><strong>ಮೈಸೂರು:</strong> ಇಲ್ಲಿನ ಸರಸ್ವತಿಪುರಂನ ಕಾಂತರಾಜ ಅರಸು ರಸ್ತೆಯಲ್ಲಿರುವ ಶಿಥಿಲಗೊಂಡಿದ್ದ ಡಾ.ಎಸ್.ರಾಧಾಕೃಷ್ಣನ್ ಸ್ಮಾರಕ ಕಟ್ಟಡದ ದುರಸ್ತಿ ಕೈಗೊಳ್ಳಲು ಪರಿಶೀಲಿಸುವಂತೆ ಕೋರಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರಜಾವಾಣಿ’ಯು ಇದೇ ಮೇ ಮೊದಲ ವಾರದಲ್ಲಿ ಆರಂಭಿಸಿದ್ದ ‘ಅಪಾಯವಿದೆ ಎಚ್ಚರ’ ಸರಣಿಯಲ್ಲಿ ‘ಕುಸಿಯುತ್ತಿದೆ ರಾಧಾಕೃಷ್ಣನ್ ಸ್ಮಾರಕ’ ಎಂಬ ಶೀರ್ಷಿಕೆಯಲ್ಲಿ ಮೇ 5ರಂದು ವರದಿಯನ್ನು ಪ್ರಕಟಿಸಿತ್ತು. ಈ ಕಾರಣದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಇತಿಹಾಸ ತಜ್ಞ ಪ್ರೊ.ಎನ್.ಎಸ್.ರಂಗರಾಜು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಪರಿಶೀಲನೆ ನಡೆಸಿ, ದುರಸ್ತಿಗೆ ಸೂಚಿಸಿದ್ದರು.</p>.<p>‘ಕಾಮಗಾರಿ ಅತ್ಯವಶ್ಯವಾಗಿದ್ದು, ಕಟ್ಟಡವು ಪಾರಂಪರಿಕ ಆಗಿರುವುದರಿಂದ ಆಯುಕ್ತರು ಡಾ.ಎಸ್.ರಾಧಾಕೃಷ್ಣನ್ ತತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪರಿಗಣಿಸಿ, ಮುಂದಿನ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು’ ಎಂದು ಸವಿತಾ ಕೋರಿದ್ದಾರೆ.</p>.<p>2012ರಲ್ಲಿ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ನೀಡಿದ ₹ 78 ಲಕ್ಷ ವೆಚ್ಚದಲ್ಲಿ ಕಟ್ಟಡವು ಪುನಶ್ಚೇತನಗೊಂಡಿತ್ತು. ಇಲ್ಲಿ ಗ್ರಂಥಾಲಯ ಆರಂಭಿಸಿತ್ತು. ಶಿಥಿಲಗೊಂಡು ಚಾವಣಿ ಕುಸಿದುಬಿದ್ದ ವರದಿ ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರು ಭೇಟಿ ನೀಡಿದ್ದರು.</p>.<p>ದುರಸ್ತಿ ಕಾಮಗಾರಿ ಕಾರ್ಯ ಕೈಗೊಳ್ಳುವುದಾಗಿ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ತಿಳಿಸಿತ್ತು.</p>.<p>‘ಐದು ವರ್ಷಗಳ ನಿರ್ವಹಣೆ ನಿಯಮ ಅನುಸರಿಸಿ ದುರಸ್ತಿ ಕೈಗೊಳ್ಳಲು ಅಭ್ಯಂತರ ಇಲ್ಲ’ ಎಂದು ಕುಲಸಚಿವರು ಪಿಇಎಸ್ ಸಂಸ್ಥೆಗೂ ಪತ್ರ ಬರೆದಿದ್ದಾರೆ. ಮಳೆಗಾಲಕ್ಕೂ ಮೊದಲು ಕಟ್ಟಡದ ರಕ್ಷಣೆ ಆಗಬೇಕಿದೆ. ಪುರಾತತ್ವ ಇಲಾಖೆ ತ್ವರಿತವಾಗಿ ಸ್ಪಂದಿಸುವುದಷ್ಟೇ ಬಾಕಿ ಇದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-39-1089307971</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಸರಸ್ವತಿಪುರಂನ ಕಾಂತರಾಜ ಅರಸು ರಸ್ತೆಯಲ್ಲಿರುವ ಶಿಥಿಲಗೊಂಡಿದ್ದ ಡಾ.ಎಸ್.ರಾಧಾಕೃಷ್ಣನ್ ಸ್ಮಾರಕ ಕಟ್ಟಡದ ದುರಸ್ತಿ ಕೈಗೊಳ್ಳಲು ಪರಿಶೀಲಿಸುವಂತೆ ಕೋರಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎಂ.ಕೆ.ಸವಿತಾ ಅವರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ.</p>.<p>‘ಪ್ರಜಾವಾಣಿ’ಯು ಇದೇ ಮೇ ಮೊದಲ ವಾರದಲ್ಲಿ ಆರಂಭಿಸಿದ್ದ ‘ಅಪಾಯವಿದೆ ಎಚ್ಚರ’ ಸರಣಿಯಲ್ಲಿ ‘ಕುಸಿಯುತ್ತಿದೆ ರಾಧಾಕೃಷ್ಣನ್ ಸ್ಮಾರಕ’ ಎಂಬ ಶೀರ್ಷಿಕೆಯಲ್ಲಿ ಮೇ 5ರಂದು ವರದಿಯನ್ನು ಪ್ರಕಟಿಸಿತ್ತು. ಈ ಕಾರಣದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಇತಿಹಾಸ ತಜ್ಞ ಪ್ರೊ.ಎನ್.ಎಸ್.ರಂಗರಾಜು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಪರಿಶೀಲನೆ ನಡೆಸಿ, ದುರಸ್ತಿಗೆ ಸೂಚಿಸಿದ್ದರು.</p>.<p>‘ಕಾಮಗಾರಿ ಅತ್ಯವಶ್ಯವಾಗಿದ್ದು, ಕಟ್ಟಡವು ಪಾರಂಪರಿಕ ಆಗಿರುವುದರಿಂದ ಆಯುಕ್ತರು ಡಾ.ಎಸ್.ರಾಧಾಕೃಷ್ಣನ್ ತತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ದುರಸ್ತಿ ಕಾಮಗಾರಿಯನ್ನು ತ್ವರಿತವಾಗಿ ಪರಿಗಣಿಸಿ, ಮುಂದಿನ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು’ ಎಂದು ಸವಿತಾ ಕೋರಿದ್ದಾರೆ.</p>.<p>2012ರಲ್ಲಿ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ನೀಡಿದ ₹ 78 ಲಕ್ಷ ವೆಚ್ಚದಲ್ಲಿ ಕಟ್ಟಡವು ಪುನಶ್ಚೇತನಗೊಂಡಿತ್ತು. ಇಲ್ಲಿ ಗ್ರಂಥಾಲಯ ಆರಂಭಿಸಿತ್ತು. ಶಿಥಿಲಗೊಂಡು ಚಾವಣಿ ಕುಸಿದುಬಿದ್ದ ವರದಿ ಪತ್ರಿಕೆಯಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರು ಭೇಟಿ ನೀಡಿದ್ದರು.</p>.<p>ದುರಸ್ತಿ ಕಾಮಗಾರಿ ಕಾರ್ಯ ಕೈಗೊಳ್ಳುವುದಾಗಿ ಸಂಸ್ಥೆಯು ವಿಶ್ವವಿದ್ಯಾಲಯಕ್ಕೆ ತಿಳಿಸಿತ್ತು.</p>.<p>‘ಐದು ವರ್ಷಗಳ ನಿರ್ವಹಣೆ ನಿಯಮ ಅನುಸರಿಸಿ ದುರಸ್ತಿ ಕೈಗೊಳ್ಳಲು ಅಭ್ಯಂತರ ಇಲ್ಲ’ ಎಂದು ಕುಲಸಚಿವರು ಪಿಇಎಸ್ ಸಂಸ್ಥೆಗೂ ಪತ್ರ ಬರೆದಿದ್ದಾರೆ. ಮಳೆಗಾಲಕ್ಕೂ ಮೊದಲು ಕಟ್ಟಡದ ರಕ್ಷಣೆ ಆಗಬೇಕಿದೆ. ಪುರಾತತ್ವ ಇಲಾಖೆ ತ್ವರಿತವಾಗಿ ಸ್ಪಂದಿಸುವುದಷ್ಟೇ ಬಾಕಿ ಇದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-39-1089307971</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>