<p>ಮೈಸೂರು: ‘ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಏಪ್ರಿಲ್ ಹಾಗೂ ಮೇನಲ್ಲಿ (ಈವರೆಗೆ) ಮಳೆಯ ಕೊರತೆ ಉಂಟಾಗಿದ್ದು, ಮುಂದೆಯೂ ಸರಿಯಾಗಿ ಬಾರದಿದ್ದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅದನ್ನು ಸಮರ್ಥವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಮಿತವಾಗಿ ಬಳಸಿ, ಪೋಲು ಮಾಡಬೇಡಿ: ‘ಅಣೆಕಟ್ಟಿನಲ್ಲಿ ಸದ್ಯ ಲಭ್ಯವಿರುವ ನೀರಿನ ಆಧಾರದ ಮೇಲೆ ಜುಲೈವರೆಗೆ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ. ಆದರೆ, ಈಗಿನಿಂದಲೇ ಮಿತವಾಗಿ ಬಳಸಬೇಕು, ಪೋಲಾಗದಂತೆ ಎಚ್ಚರ ವಹಿಸಬೇಕು’ ಎಂದರು.</p>.<p>‘ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ತೊಂದರೆ ಆಗುವ ಸ್ಥಳಗಳನ್ನು ಗುರುತಿಸಿ, ಸಮೀಪದಲ್ಲಿ ಲಭ್ಯವಿರುವ ಖಾಸಗಿ ಬೋರ್ವೆಲ್ಗಳ ಪಟ್ಟಿ ಮಾಡಿಕೊಳ್ಳಬೇಕು. ಅವಶ್ಯಕತೆ ಬಿದ್ದಾಗ ಅಲ್ಲಿಂದ ನೀರು ಪಡೆದು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಸಾರ್ವಜನಿಕರು ಕುಡಿಯುವ ನೀರಿನ ತೊಂದರೆಯ ಬಗ್ಗೆ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ಕರೆ ಮಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಬೇಕು. ತೊಂದರೆ ಇರುವ ಸ್ಥಳ ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ, ಸಮಸ್ಯೆ ಗಂಭೀರವಾಗುತ್ತದೆ. ಅದಕ್ಕೆ ಅವಕಾಶ ಕೊಡಬಾರದು’ ಎಂದು ತಾಕೀತು ಮಾಡಿದರು.</p>.<p>ಭೇಟಿ ನೀಡಬೇಕು: ‘ಬೋರ್ ವೆಲ್ಗಳ ಪುನಶ್ಚೇತನ, ಹೊಸದಾಗಿ ಕೊರೆಯುವುದು, ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪ್ಲೈನ್ ಜೋಡಣೆ ಮೊದಲಾದ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಮಸ್ಯೆ ಉಲ್ಭಣಗೊಳ್ಳುವ ಮೊದಲೇ ಪರಿಹರಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್, ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ, ಅಗ್ನಿಶಾಮಕ ಅಧಿಕಾರಿ ಗುರುರಾಜ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-38-1471642187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಜಿಲ್ಲೆಯಲ್ಲಿ ಏಪ್ರಿಲ್ ಹಾಗೂ ಮೇನಲ್ಲಿ (ಈವರೆಗೆ) ಮಳೆಯ ಕೊರತೆ ಉಂಟಾಗಿದ್ದು, ಮುಂದೆಯೂ ಸರಿಯಾಗಿ ಬಾರದಿದ್ದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ. ಅದನ್ನು ಸಮರ್ಥವಾಗಿ ನಿರ್ವಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಮಿತವಾಗಿ ಬಳಸಿ, ಪೋಲು ಮಾಡಬೇಡಿ: ‘ಅಣೆಕಟ್ಟಿನಲ್ಲಿ ಸದ್ಯ ಲಭ್ಯವಿರುವ ನೀರಿನ ಆಧಾರದ ಮೇಲೆ ಜುಲೈವರೆಗೆ ಕುಡಿಯುವ ನೀರಿಗೆ ತೊಂದರೆ ಆಗುವುದಿಲ್ಲ. ಆದರೆ, ಈಗಿನಿಂದಲೇ ಮಿತವಾಗಿ ಬಳಸಬೇಕು, ಪೋಲಾಗದಂತೆ ಎಚ್ಚರ ವಹಿಸಬೇಕು’ ಎಂದರು.</p>.<p>‘ಸ್ಥಳೀಯ ಸಂಸ್ಥೆಗಳು ಕುಡಿಯುವ ನೀರಿನ ತೊಂದರೆ ಆಗುವ ಸ್ಥಳಗಳನ್ನು ಗುರುತಿಸಿ, ಸಮೀಪದಲ್ಲಿ ಲಭ್ಯವಿರುವ ಖಾಸಗಿ ಬೋರ್ವೆಲ್ಗಳ ಪಟ್ಟಿ ಮಾಡಿಕೊಳ್ಳಬೇಕು. ಅವಶ್ಯಕತೆ ಬಿದ್ದಾಗ ಅಲ್ಲಿಂದ ನೀರು ಪಡೆದು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಸಾರ್ವಜನಿಕರು ಕುಡಿಯುವ ನೀರಿನ ತೊಂದರೆಯ ಬಗ್ಗೆ ಅಧಿಕಾರಿಗಳು ಅಥವಾ ಸಿಬ್ಬಂದಿಗೆ ಕರೆ ಮಾಡಿದಾಗ ಸಕಾರಾತ್ಮಕವಾಗಿ ಸ್ಪಂದಿಸಬೇಕು. ತೊಂದರೆ ಇರುವ ಸ್ಥಳ ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ, ಸಮಸ್ಯೆ ಗಂಭೀರವಾಗುತ್ತದೆ. ಅದಕ್ಕೆ ಅವಕಾಶ ಕೊಡಬಾರದು’ ಎಂದು ತಾಕೀತು ಮಾಡಿದರು.</p>.<p>ಭೇಟಿ ನೀಡಬೇಕು: ‘ಬೋರ್ ವೆಲ್ಗಳ ಪುನಶ್ಚೇತನ, ಹೊಸದಾಗಿ ಕೊರೆಯುವುದು, ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪ್ಲೈನ್ ಜೋಡಣೆ ಮೊದಲಾದ ಯೋಜನೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಕುಡಿಯುವ ನೀರಿನ ತೊಂದರೆ ಉಂಟಾಗಬಹುದಾದ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸಮಸ್ಯೆ ಉಲ್ಭಣಗೊಳ್ಳುವ ಮೊದಲೇ ಪರಿಹರಿಸಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ಕುಮಾರ್, ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ, ಅಗ್ನಿಶಾಮಕ ಅಧಿಕಾರಿ ಗುರುರಾಜ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-38-1471642187</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>