<p><strong>ಮೈಸೂರು</strong>: ‘ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸಬೇಕು’ ಎಂದು ಎಎಸ್ಪಿ ಸಿ. ಮಲ್ಲಿಕ್ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಡ್ರಗ್ಸ್ ಬಳಕೆ ಅಪರಾಧ ಎಂಬ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಯಾರಾದರೂ ಮತ್ತಿನಲ್ಲಿ ಇರುವ ಬಗ್ಗೆ ಅನುಮಾನ ಬಂದಲ್ಲಿ ಪರೀಕ್ಷೆಗೆ ಒಳಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>‘ಅಬಕಾರಿ ಇಲಾಖೆಯವರು ನಿಯಮಿತವಾಗಿ ದಾಳಿ ನಡೆಸಬೇಕು. ಕೃಷಿ ಜಮೀನಿನಲ್ಲಿ, ಮನೆಯ ಹಿತ್ತಲಿನಲ್ಲಿ, ಇತರ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಇರುತ್ತದೆ. ನಿಯಮಿತವಾಗಿ ಕಾರ್ಯಾಚರಣೆ ನಡೆಸಿದರೆ, ಗಾಂಜಾ ಗಿಡ ಬೆಳೆಯುವುದನ್ನು ತಡೆಯಬಹುದಾಗಿದೆ’ ಎಂದು ತಿಳಿಸಿದರು.</p><p>‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಬೀಡಿ, ಸಿಗರೇಟು ಸೇದುವ ವ್ಯಕ್ತಿಯೊಂದಿಗೆ ಪಕ್ಕದಲ್ಲಿ ಇರುವವರ ಆರೋಗ್ಯವೂ ಹಾಳಾಗುತ್ತದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಕಂಡುಬಂದರೆ ದಂಡ ವಿಧಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಬೇಕು’ ಎಂದು ಸೂಚಿಸಿದರು.</p><p>‘ಮದ್ಯವ್ಯಸನಿಗಳನ್ನು ಅದರಿಂದ ಹೊರತರಲು ಪುನರ್ವಸತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹಲವರು ಇಂತಹ ಕೇಂದ್ರಗಳಿಗೆ ಸೇರಿ ವ್ಯಸನವನ್ನು ತ್ಯಜಿಸಿದ್ದಾರೆ’ ಎಂದರು.</p><p>‘ಹೋದ ತಿಂಗಳು 71 ಪ್ರಕರಣಗಳಲ್ಲಿ 80 ಜನರ ಮೇಲೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.</p><p>ಡಿಸಿಪಿ ಕೆ.ಎಸ್. ಸುಂದರ್ರಾಜ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸಬೇಕು’ ಎಂದು ಎಎಸ್ಪಿ ಸಿ. ಮಲ್ಲಿಕ್ ಸೂಚಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p><p>‘ಡ್ರಗ್ಸ್ ಬಳಕೆ ಅಪರಾಧ ಎಂಬ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಯಾರಾದರೂ ಮತ್ತಿನಲ್ಲಿ ಇರುವ ಬಗ್ಗೆ ಅನುಮಾನ ಬಂದಲ್ಲಿ ಪರೀಕ್ಷೆಗೆ ಒಳಪಡಿಸಬೇಕು’ ಎಂದು ನಿರ್ದೇಶನ ನೀಡಿದರು.</p><p>‘ಅಬಕಾರಿ ಇಲಾಖೆಯವರು ನಿಯಮಿತವಾಗಿ ದಾಳಿ ನಡೆಸಬೇಕು. ಕೃಷಿ ಜಮೀನಿನಲ್ಲಿ, ಮನೆಯ ಹಿತ್ತಲಿನಲ್ಲಿ, ಇತರ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಯುವ ಸಾಧ್ಯತೆ ಇರುತ್ತದೆ. ನಿಯಮಿತವಾಗಿ ಕಾರ್ಯಾಚರಣೆ ನಡೆಸಿದರೆ, ಗಾಂಜಾ ಗಿಡ ಬೆಳೆಯುವುದನ್ನು ತಡೆಯಬಹುದಾಗಿದೆ’ ಎಂದು ತಿಳಿಸಿದರು.</p><p>‘ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಬೀಡಿ, ಸಿಗರೇಟು ಸೇದುವ ವ್ಯಕ್ತಿಯೊಂದಿಗೆ ಪಕ್ಕದಲ್ಲಿ ಇರುವವರ ಆರೋಗ್ಯವೂ ಹಾಳಾಗುತ್ತದೆ. ಆದ್ದರಿಂದ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಕಂಡುಬಂದರೆ ದಂಡ ವಿಧಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಬೇಕು’ ಎಂದು ಸೂಚಿಸಿದರು.</p><p>‘ಮದ್ಯವ್ಯಸನಿಗಳನ್ನು ಅದರಿಂದ ಹೊರತರಲು ಪುನರ್ವಸತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಹಲವರು ಇಂತಹ ಕೇಂದ್ರಗಳಿಗೆ ಸೇರಿ ವ್ಯಸನವನ್ನು ತ್ಯಜಿಸಿದ್ದಾರೆ’ ಎಂದರು.</p><p>‘ಹೋದ ತಿಂಗಳು 71 ಪ್ರಕರಣಗಳಲ್ಲಿ 80 ಜನರ ಮೇಲೆ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ’ ಎಂದು ತಿಳಿಸಿದರು.</p><p>ಡಿಸಿಪಿ ಕೆ.ಎಸ್. ಸುಂದರ್ರಾಜ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>