<p><strong>ಮೈಸೂರು</strong>: ಪ್ರತಿ ಮಕ್ಕಳ ಕೈಯಲ್ಲೂ ಇದ್ದ ಬಣ್ಣ ಬಣ್ಣದ ಪೆನ್ಸಿಲ್, ವಾಟರ್ ಕಲರ್, ಕ್ಯಾನ್ವಾಸ್ಗಳು ಪರಿಸರದ ಚಿತ್ರ ಮೂಡಿಸಿದವು. ‘ಪರಿಸರ ಉಳಿಸಿ, ‘ನೀರು ಉಳಿಸಿ ಬದುಕು ರಕ್ಷಿಸಿ’, ‘ಮಾಲಿನ್ಯ ನಿಯಂತ್ರಿಸಿ’, ‘ಸುತ್ತಲಿನ ಪರಿಸರ ಹಾಳುಗೆಡವದಿರಿ’ ಮೊದಲಾದ ಘೋಷಣೆಗಳು ಕ್ಯಾನ್ವಾಸ್ನಲ್ಲಿ ಮೂಡಿಬಂದವು.</p>.<p>ಪರಿಸರ ಉಳಿವಿನ ಘೋಷಣೆಗಳು, ಪ್ಲಾಸ್ಟಿಕ್ ಬಳಕೆಯ ಅಪಾಯಗಳು, ಪ್ಲಾಸ್ಟಿಕ್ ಬಿಡಿ ಬಟ್ಟೆ ಚೀಲಗಳನ್ನೇ ಬಳಸಿ ಎಂದು ಮಕ್ಕಳು ತಮ್ಮ ಚಿತ್ರದ ಮೂಲಕ ಪರಿಸರ ಉಳಿವಿನ ಕಳಕಳಿಯನ್ನು ಮುಂದಿಟ್ಟರು.</p>.<p>ಇವೆಲ್ಲವೂ ಸಾಧ್ಯವಾಗಿದ್ದು, ವಿಶ್ವ ಪರಿಸರ ದಿನದ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ‘ಮಡಿಲು’ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಂಟಿಯಾಗಿ ಮಂಗಳವಾರ ಕಲಾಮಂದಿರದ ಆವರಣದಲ್ಲಿ ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ.</p>.<p>ಚಿತ್ರಕಲೆ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಗಳು, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ 8ರಿಂದ 10ನೇ ತರಗತಿಯ 45 ಶಾಲೆಗಳ 550 ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಸ್ಪರ್ಧೆಯ ವಿಜೇತರಿಗೆ ಜೂನ್ 5ರಂದು ಬಹುಮಾನ ವಿತರಿಸಲಾಗುವುದು ಎಂದು ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-39-1943724860</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಪ್ರತಿ ಮಕ್ಕಳ ಕೈಯಲ್ಲೂ ಇದ್ದ ಬಣ್ಣ ಬಣ್ಣದ ಪೆನ್ಸಿಲ್, ವಾಟರ್ ಕಲರ್, ಕ್ಯಾನ್ವಾಸ್ಗಳು ಪರಿಸರದ ಚಿತ್ರ ಮೂಡಿಸಿದವು. ‘ಪರಿಸರ ಉಳಿಸಿ, ‘ನೀರು ಉಳಿಸಿ ಬದುಕು ರಕ್ಷಿಸಿ’, ‘ಮಾಲಿನ್ಯ ನಿಯಂತ್ರಿಸಿ’, ‘ಸುತ್ತಲಿನ ಪರಿಸರ ಹಾಳುಗೆಡವದಿರಿ’ ಮೊದಲಾದ ಘೋಷಣೆಗಳು ಕ್ಯಾನ್ವಾಸ್ನಲ್ಲಿ ಮೂಡಿಬಂದವು.</p>.<p>ಪರಿಸರ ಉಳಿವಿನ ಘೋಷಣೆಗಳು, ಪ್ಲಾಸ್ಟಿಕ್ ಬಳಕೆಯ ಅಪಾಯಗಳು, ಪ್ಲಾಸ್ಟಿಕ್ ಬಿಡಿ ಬಟ್ಟೆ ಚೀಲಗಳನ್ನೇ ಬಳಸಿ ಎಂದು ಮಕ್ಕಳು ತಮ್ಮ ಚಿತ್ರದ ಮೂಲಕ ಪರಿಸರ ಉಳಿವಿನ ಕಳಕಳಿಯನ್ನು ಮುಂದಿಟ್ಟರು.</p>.<p>ಇವೆಲ್ಲವೂ ಸಾಧ್ಯವಾಗಿದ್ದು, ವಿಶ್ವ ಪರಿಸರ ದಿನದ ಅಂಗವಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ‘ಮಡಿಲು’ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಂಟಿಯಾಗಿ ಮಂಗಳವಾರ ಕಲಾಮಂದಿರದ ಆವರಣದಲ್ಲಿ ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ.</p>.<p>ಚಿತ್ರಕಲೆ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 8ನೇ ತರಗತಿ ವಿದ್ಯಾರ್ಥಿಗಳು, 5ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ 8ರಿಂದ 10ನೇ ತರಗತಿಯ 45 ಶಾಲೆಗಳ 550 ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಸ್ಪರ್ಧೆಯ ವಿಜೇತರಿಗೆ ಜೂನ್ 5ರಂದು ಬಹುಮಾನ ವಿತರಿಸಲಾಗುವುದು ಎಂದು ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-39-1943724860</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>