<p>ಮೈಸೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಕೆ.ಎಂ.ರವಿ ವಿರುದ್ಧ 7ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ರವಿ ಅವರು ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಸರ್ಕಲ್ನಲ್ಲಿ 2024ರ ಜುಲೈ 17ರಂದು ಕಟ್ಟೆ ಮಳಲವಾಡಿ ಕಡೆಯಿಂದ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಆಗ ಸೆನ್ ವಿಭಾಗದ ಎಸ್ಐ ರಘು ಅವರನ್ನು ವಿಚಾರಣೆ ನಡೆಸಿ, ಚೀಲದಲ್ಲಿದ್ದ ಗಾಂಜಾ ಸೊಪ್ಪು ವಶಕ್ಕೆ ಪಡೆದಿದ್ದರು.</p>.<p>ಲಮಣಿ ಸುಷ್ಮಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ರಮೇಶ್ ಎನ್ಡಿಪಿಎಸ್ ಕಾಯ್ದೆ ಅಡಿ ಗಾಂಜಾ ಸಾಗಣೆ ಅಪರಾಧಕ್ಕೆ 2 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರ ಎನ್. ಬಿ. ವಿಜಯಲಕ್ಷ್ಮಿ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-38-209689313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಕೆ.ಎಂ.ರವಿ ವಿರುದ್ಧ 7ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.</p>.<p>ರವಿ ಅವರು ಹುಣಸೂರು ತಾಲ್ಲೂಕಿನ ಕಲ್ಕುಣಿಕೆ ಸರ್ಕಲ್ನಲ್ಲಿ 2024ರ ಜುಲೈ 17ರಂದು ಕಟ್ಟೆ ಮಳಲವಾಡಿ ಕಡೆಯಿಂದ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಆಗ ಸೆನ್ ವಿಭಾಗದ ಎಸ್ಐ ರಘು ಅವರನ್ನು ವಿಚಾರಣೆ ನಡೆಸಿ, ಚೀಲದಲ್ಲಿದ್ದ ಗಾಂಜಾ ಸೊಪ್ಪು ವಶಕ್ಕೆ ಪಡೆದಿದ್ದರು.</p>.<p>ಲಮಣಿ ಸುಷ್ಮಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ರಮೇಶ್ ಎನ್ಡಿಪಿಎಸ್ ಕಾಯ್ದೆ ಅಡಿ ಗಾಂಜಾ ಸಾಗಣೆ ಅಪರಾಧಕ್ಕೆ 2 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹ 20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಸರ್ಕಾರದ ಪರ ಎನ್. ಬಿ. ವಿಜಯಲಕ್ಷ್ಮಿ ವಾದ ಮಂಡಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-38-209689313</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>