<p><strong>ಮೈಸೂರು</strong>: ಭೂಮಾಫಿಯಾ ಜೊತೆ ಶಾಮೀಲಾಗಿ ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಆರೋಪದ ಮೇಲೆ ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಎನ್. ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p>ಪೌರಾಡಳಿತ ನಿರ್ದೇಶನಾಲಯ ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದು, ಅವರನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಎಫ್ಡಿಎ ಹುದ್ದೆಗೆ ವರ್ಗಾಯಿಸಲಾಗಿದೆ.</p>.<p>ಮತ್ತೊಬ್ಬ ಆರೋಪಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಎಸ್.ಮಹೇಶ್, ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1 ಹುದ್ದೆಯಲ್ಲಿದ್ದು, ಅವರ ಮೇಲೆ ಕ್ರಮಕ್ಕಾಗಿ ನಗರಾಭಿವೃದ್ಧಿ ಇಲಾಖೆಗೆ ಶಿಫಾರಸು ಮಾಡಲಾಗಿದೆ.</p>.<p>ಸರ್ಕಾರಿ ಆಸ್ತಿಯಾದ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ. 259/5ರ ಮೂಲ ದಾಖಲೆಗಳನ್ನು ಪರಿಶೀಲಿಸದೆ, ಖಾಸಗಿಯವರಿಗೆ ಇ-ಆಸ್ತಿ ಸೃಜಿಸಲಾಗಿತ್ತು. ನಂತರ ಅಧಿಕಾರ ವ್ಯಾಪ್ತಿ ಮೀರಿ, ಏಕಾಏಕಿ ಆ ಖಾತೆಗಳನ್ನು ರದ್ದುಪಡಿಸಿ ತಹಶೀಲ್ದಾರರಿಗೆ ವರದಿ ನೀಡಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ.</p>.<p>ಸಾರ್ವಜನಿಕರ ದೂರುಗಳ ಕಾರಣಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಹಾನಗರಪಾಲಿಕೆಯ ಉಪ ಆಯುಕ್ತರ (ಕಂದಾಯ) ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ತನಿಖಾಧಿಕಾರಿ ಸೋಮಶೇಖರ್ ನೀಡಿದ ಪ್ರಾಥಮಿಕ ವರದಿಯಲ್ಲಿ ಭ್ರಷ್ಟಾಚಾರ ಮೇಲ್ನೋಟಕ್ಕೆ ದೃಢಪಟ್ಟಿತ್ತು. ವರದಿ ಆಧರಿಸಿ ಜಿಲ್ಲಾಧಿಕಾರಿಯು ಮೇ 21ರಂದು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-51-1343963159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಭೂಮಾಫಿಯಾ ಜೊತೆ ಶಾಮೀಲಾಗಿ ಸರ್ಕಾರಿ ಆಸ್ತಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಆರೋಪದ ಮೇಲೆ ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಎನ್. ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.</p>.<p>ಪೌರಾಡಳಿತ ನಿರ್ದೇಶನಾಲಯ ಸೋಮವಾರ ಈ ಕುರಿತು ಆದೇಶ ಹೊರಡಿಸಿದ್ದು, ಅವರನ್ನು ಹಾಸನ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಎಫ್ಡಿಎ ಹುದ್ದೆಗೆ ವರ್ಗಾಯಿಸಲಾಗಿದೆ.</p>.<p>ಮತ್ತೊಬ್ಬ ಆರೋಪಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಎಸ್.ಮಹೇಶ್, ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1 ಹುದ್ದೆಯಲ್ಲಿದ್ದು, ಅವರ ಮೇಲೆ ಕ್ರಮಕ್ಕಾಗಿ ನಗರಾಭಿವೃದ್ಧಿ ಇಲಾಖೆಗೆ ಶಿಫಾರಸು ಮಾಡಲಾಗಿದೆ.</p>.<p>ಸರ್ಕಾರಿ ಆಸ್ತಿಯಾದ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ. 259/5ರ ಮೂಲ ದಾಖಲೆಗಳನ್ನು ಪರಿಶೀಲಿಸದೆ, ಖಾಸಗಿಯವರಿಗೆ ಇ-ಆಸ್ತಿ ಸೃಜಿಸಲಾಗಿತ್ತು. ನಂತರ ಅಧಿಕಾರ ವ್ಯಾಪ್ತಿ ಮೀರಿ, ಏಕಾಏಕಿ ಆ ಖಾತೆಗಳನ್ನು ರದ್ದುಪಡಿಸಿ ತಹಶೀಲ್ದಾರರಿಗೆ ವರದಿ ನೀಡಿರುವುದು ತನಿಖೆಯಲ್ಲಿ ಬಹಿರಂಗಗೊಂಡಿದೆ.</p>.<p>ಸಾರ್ವಜನಿಕರ ದೂರುಗಳ ಕಾರಣಕ್ಕೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಹಾನಗರಪಾಲಿಕೆಯ ಉಪ ಆಯುಕ್ತರ (ಕಂದಾಯ) ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದರು. ತನಿಖಾಧಿಕಾರಿ ಸೋಮಶೇಖರ್ ನೀಡಿದ ಪ್ರಾಥಮಿಕ ವರದಿಯಲ್ಲಿ ಭ್ರಷ್ಟಾಚಾರ ಮೇಲ್ನೋಟಕ್ಕೆ ದೃಢಪಟ್ಟಿತ್ತು. ವರದಿ ಆಧರಿಸಿ ಜಿಲ್ಲಾಧಿಕಾರಿಯು ಮೇ 21ರಂದು ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-51-1343963159</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>