<p><strong>ಮೈಸೂರು:</strong> ‘ರಾಜ್ಯ ಸರ್ಕಾರವೇ ಜಿಲ್ಲಾ ಕೇಂದ್ರಗಳಲ್ಲಿ ಮಿನಿ ಚಿತ್ರಮಂದಿರಗಳನ್ನು ನಿರ್ಮಿಸಿ, ಕೇರಳದಂತೆ ಸಿನಿಮಾ ಸಂಸ್ಕೃತಿ ಬೆಳೆಸಬೇಕು’ ಎಂದು ಸಾಹಿತಿ ಬರಗೂರು ಇಲ್ಲಿ ಸಲಹೆ ನೀಡಿದರು. </p>.<p>ರಂಗಾಯಣದ ‘ಭೂಮಿಗೀತ’ ರಂಗಮಂದಿರದಲ್ಲಿ ಭಾನುವಾರ ‘ಬಹುರೂಪಿ ಬಾಬಾಸಾಹೇಬ್’ ರಾಷ್ಟ್ರೀಯ ನಾಟಕೋತ್ಸವ ನಿಮಿತ್ತ ಏರ್ಪಡಿಸಿರುವ ‘ಬಹುರೂಪಿ ಚಲನಚಿತ್ರೋತ್ಸವ’ ಉದ್ಘಾಟಿಸಿ ಮಾತನಾಡಿದರು.</p>.<p>‘ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿತ್ತು. ಬಜೆಟ್ನಲ್ಲಿ ಜಾರಿಗೊಳಿಸುವುದಾಗಿ ಮೂರು ಬಾರಿ ಹೇಳಿದ್ದರು. ಆದರೆ ಆಗಲಿಲ್ಲ’ ಎಂದರು.</p>.<p>‘ಏಕ ಪರದೆ ಚಿತ್ರಮಂದಿರಗಳಲ್ಲಿ ಜನರು ಸಿನಿಮಾವನ್ನು ಸಂಭ್ರಮಿಸುತ್ತಿದ್ದರು. ಮಲ್ಟಿಫ್ಲೆಕ್ಸ್ಗಳಲ್ಲಿ ಆ ಸಂಭ್ರಮ ಕಾಣುತ್ತಿಲ್ಲ. ಕಲಾತ್ಮಕ ಚಿತ್ರಗಳೂ ಸೇರಿ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗುತ್ತಿಲ್ಲ. 100 ಆಸನ ಸಾಮರ್ಥ್ಯದ ಚಿತ್ರಮಂದಿರಗಳನ್ನು ಸರ್ಕಾರವೇ ನಿರ್ಮಿಸಿದರೆ ಸಹಾಯವಾಗುತ್ತದೆ’ ಎಂದರು.</p>.<p>‘ಕೇರಳ ಸರ್ಕಾರ 100ಕ್ಕೂ ಹೆಚ್ಚು ಮಿನಿ ಚಿತ್ರಮಂದಿರಗಳನ್ನು ಸ್ಥಾಪಿಸಿ ನಡೆಸಲು ಸಾಧ್ಯವಿದ್ದರೆ ಇಲ್ಲೇಕೆ ಆಗುವುದಿಲ್ಲ? ಪ್ರಾಯೋಗಿಕವಾಗಿಯಾದರೂ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಚಿತ್ರೋದ್ಯಮ ಇಂದು ಸಾಮಾಜಿಕ ಸಂವೇದನೆಗಳಿಗೆ ಪ್ರತಿಸ್ಪಂದಿಸುವ ಮಾಧ್ಯಮವಾಗಿ ಉಳಿದಿಲ್ಲ. ರಾಜ್ಕುಮಾರ್ ಯುಗದ ಸಿನಿಮಾಗಳು ಅಭಿರುಚಿ ಬೆಳೆಸಿದ್ದವು. ಲಾಭವಷ್ಟೇ ಮುಖ್ಯವಾದಾಗ ಕಲಾತ್ಮಕತೆ ಮಾಯವಾಗುತ್ತದೆ. ಚಲನಚಿತ್ರವು ಮಾಧ್ಯಮವಾಗಬೇಕು. ಅದು ಸಂವೇದನೆ ಬೆಳೆಸುತ್ತದೆ’ ಎಂದು ಹೇಳಿದರು. </p>.<p><strong>ಉದ್ಘಾಟನೆ ಇಂದು</strong>: ‘ಬಹುರೂಪಿ’ ಬೆಳ್ಳಿಹಬ್ಬದ ಪ್ರಯುಕ್ತ ‘ಬಹುರೂಪಿ ಬಾಬಾ ಸಾಹೇಬ್– ಸಮತೆಯೆಡೆಗೆ ನಡಿಗೆ’ ಆಶಯದಲ್ಲಿ ರಂಗಾಯಣ ಏರ್ಪಡಿಸಿರುವ ನಾಟಕೋತ್ಸವದ ಉದ್ಘಾಟನೆಯನ್ನು ಜ.12ರಂದು ಸಂಜೆ 5.30ಕ್ಕೆ ಮಣಿಪುರದ ರಂಗಕರ್ಮಿ ಹೈಸ್ನಾಂ ಸಾವಿತ್ರಿದೇವಿ ನೆರವೇರಿಸಲಿದ್ದಾರೆ. 18ರವರೆಗೆ ಉತ್ಸವ ನಡೆಯಲಿದ್ದು, ಬಹುಭಾಷೆಯ 12 ನಾಟಕಗಳೂ ಸೇರಿದಂತೆ 24 ನಾಟಕಗಳು ಪ್ರದರ್ಶನಗೊಳ್ಳಲಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ರಾಜ್ಯ ಸರ್ಕಾರವೇ ಜಿಲ್ಲಾ ಕೇಂದ್ರಗಳಲ್ಲಿ ಮಿನಿ ಚಿತ್ರಮಂದಿರಗಳನ್ನು ನಿರ್ಮಿಸಿ, ಕೇರಳದಂತೆ ಸಿನಿಮಾ ಸಂಸ್ಕೃತಿ ಬೆಳೆಸಬೇಕು’ ಎಂದು ಸಾಹಿತಿ ಬರಗೂರು ಇಲ್ಲಿ ಸಲಹೆ ನೀಡಿದರು. </p>.<p>ರಂಗಾಯಣದ ‘ಭೂಮಿಗೀತ’ ರಂಗಮಂದಿರದಲ್ಲಿ ಭಾನುವಾರ ‘ಬಹುರೂಪಿ ಬಾಬಾಸಾಹೇಬ್’ ರಾಷ್ಟ್ರೀಯ ನಾಟಕೋತ್ಸವ ನಿಮಿತ್ತ ಏರ್ಪಡಿಸಿರುವ ‘ಬಹುರೂಪಿ ಚಲನಚಿತ್ರೋತ್ಸವ’ ಉದ್ಘಾಟಿಸಿ ಮಾತನಾಡಿದರು.</p>.<p>‘ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿತ್ತು. ಬಜೆಟ್ನಲ್ಲಿ ಜಾರಿಗೊಳಿಸುವುದಾಗಿ ಮೂರು ಬಾರಿ ಹೇಳಿದ್ದರು. ಆದರೆ ಆಗಲಿಲ್ಲ’ ಎಂದರು.</p>.<p>‘ಏಕ ಪರದೆ ಚಿತ್ರಮಂದಿರಗಳಲ್ಲಿ ಜನರು ಸಿನಿಮಾವನ್ನು ಸಂಭ್ರಮಿಸುತ್ತಿದ್ದರು. ಮಲ್ಟಿಫ್ಲೆಕ್ಸ್ಗಳಲ್ಲಿ ಆ ಸಂಭ್ರಮ ಕಾಣುತ್ತಿಲ್ಲ. ಕಲಾತ್ಮಕ ಚಿತ್ರಗಳೂ ಸೇರಿ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗುತ್ತಿಲ್ಲ. 100 ಆಸನ ಸಾಮರ್ಥ್ಯದ ಚಿತ್ರಮಂದಿರಗಳನ್ನು ಸರ್ಕಾರವೇ ನಿರ್ಮಿಸಿದರೆ ಸಹಾಯವಾಗುತ್ತದೆ’ ಎಂದರು.</p>.<p>‘ಕೇರಳ ಸರ್ಕಾರ 100ಕ್ಕೂ ಹೆಚ್ಚು ಮಿನಿ ಚಿತ್ರಮಂದಿರಗಳನ್ನು ಸ್ಥಾಪಿಸಿ ನಡೆಸಲು ಸಾಧ್ಯವಿದ್ದರೆ ಇಲ್ಲೇಕೆ ಆಗುವುದಿಲ್ಲ? ಪ್ರಾಯೋಗಿಕವಾಗಿಯಾದರೂ ಯೋಜನೆ ಅನುಷ್ಠಾನಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಚಿತ್ರೋದ್ಯಮ ಇಂದು ಸಾಮಾಜಿಕ ಸಂವೇದನೆಗಳಿಗೆ ಪ್ರತಿಸ್ಪಂದಿಸುವ ಮಾಧ್ಯಮವಾಗಿ ಉಳಿದಿಲ್ಲ. ರಾಜ್ಕುಮಾರ್ ಯುಗದ ಸಿನಿಮಾಗಳು ಅಭಿರುಚಿ ಬೆಳೆಸಿದ್ದವು. ಲಾಭವಷ್ಟೇ ಮುಖ್ಯವಾದಾಗ ಕಲಾತ್ಮಕತೆ ಮಾಯವಾಗುತ್ತದೆ. ಚಲನಚಿತ್ರವು ಮಾಧ್ಯಮವಾಗಬೇಕು. ಅದು ಸಂವೇದನೆ ಬೆಳೆಸುತ್ತದೆ’ ಎಂದು ಹೇಳಿದರು. </p>.<p><strong>ಉದ್ಘಾಟನೆ ಇಂದು</strong>: ‘ಬಹುರೂಪಿ’ ಬೆಳ್ಳಿಹಬ್ಬದ ಪ್ರಯುಕ್ತ ‘ಬಹುರೂಪಿ ಬಾಬಾ ಸಾಹೇಬ್– ಸಮತೆಯೆಡೆಗೆ ನಡಿಗೆ’ ಆಶಯದಲ್ಲಿ ರಂಗಾಯಣ ಏರ್ಪಡಿಸಿರುವ ನಾಟಕೋತ್ಸವದ ಉದ್ಘಾಟನೆಯನ್ನು ಜ.12ರಂದು ಸಂಜೆ 5.30ಕ್ಕೆ ಮಣಿಪುರದ ರಂಗಕರ್ಮಿ ಹೈಸ್ನಾಂ ಸಾವಿತ್ರಿದೇವಿ ನೆರವೇರಿಸಲಿದ್ದಾರೆ. 18ರವರೆಗೆ ಉತ್ಸವ ನಡೆಯಲಿದ್ದು, ಬಹುಭಾಷೆಯ 12 ನಾಟಕಗಳೂ ಸೇರಿದಂತೆ 24 ನಾಟಕಗಳು ಪ್ರದರ್ಶನಗೊಳ್ಳಲಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>