<p>ಮೈಸೂರು: ‘ಆರೋಗ್ಯಕರ ಜೀವನ ಹಾಗೂ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಬೇಕಿದೆ’ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು.</p>.<p>ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಹಾಗೂ ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘ಸ್ವಸ್ಥ ಮೈಸೂರು’ ಆರೋಗ್ಯ ಜಾಗೃತಿ ಮತ್ತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ವಸ್ಥ ಮೈಸೂರು ಎಂಬ ಹೆಸರಿನ ಅರ್ಥವೇ ಮೈಸೂರು ನಗರವನ್ನು ಸಂಪೂರ್ಣವಾಗಿ ಆರೋಗ್ಯಕರ ಮತ್ತು ರೋಗ ಮುಕ್ತವಾಗಿಸುವುದಾಗಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಅಭಿಯಾನ. ವಿದ್ಯಾರ್ಥಿಗಳು ಹಾಗೂ ಯುವಜನರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು’ ಎಂದರು.</p>.<p>‘ಸ್ವಚ್ಛತೆ, ಉತ್ತಮ ಆಹಾರ ಪದ್ಧತಿ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬಹುದು’ ಎಂದರು.</p>.<p>ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಬಿ.ಎಂ.ಸುಬ್ರಾಯ, ಸ್ವಸ್ಥ ಮೈಸೂರು ರಾಯಭಾರಿ ಡಾ.ಭರತ್ ಶೆಟ್ಟಿ , ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ವೃದ್ಧಾರೋಗ್ಯ ವಿಭಾಗದ ಮುಖ್ಯಸ್ಥೆ ಡಾ.ಪ್ರತಿಭಾ ಪೆರೇರಾ, ಕಾಲೇಜಿನ ಪ್ರಾಂಶುಪಾಲ ಹನುಮಂತಾಚಾರ್ ಜೋಶಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-39-102489023</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಆರೋಗ್ಯಕರ ಜೀವನ ಹಾಗೂ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಬೇಕಿದೆ’ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದರು.</p>.<p>ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಹಾಗೂ ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ನಡೆದ ‘ಸ್ವಸ್ಥ ಮೈಸೂರು’ ಆರೋಗ್ಯ ಜಾಗೃತಿ ಮತ್ತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ವಸ್ಥ ಮೈಸೂರು ಎಂಬ ಹೆಸರಿನ ಅರ್ಥವೇ ಮೈಸೂರು ನಗರವನ್ನು ಸಂಪೂರ್ಣವಾಗಿ ಆರೋಗ್ಯಕರ ಮತ್ತು ರೋಗ ಮುಕ್ತವಾಗಿಸುವುದಾಗಿದೆ. ಈ ನಿಟ್ಟಿನಲ್ಲಿ ಇದೊಂದು ಮಹತ್ವದ ಅಭಿಯಾನ. ವಿದ್ಯಾರ್ಥಿಗಳು ಹಾಗೂ ಯುವಜನರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಪಾಲ್ಗೊಳ್ಳಬೇಕು’ ಎಂದರು.</p>.<p>‘ಸ್ವಚ್ಛತೆ, ಉತ್ತಮ ಆಹಾರ ಪದ್ಧತಿ ಹಾಗೂ ನಿಯಮಿತ ವ್ಯಾಯಾಮದ ಮೂಲಕ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬಹುದು’ ಎಂದರು.</p>.<p>ಶಾರದಾವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಬಿ.ಎಂ.ಸುಬ್ರಾಯ, ಸ್ವಸ್ಥ ಮೈಸೂರು ರಾಯಭಾರಿ ಡಾ.ಭರತ್ ಶೆಟ್ಟಿ , ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ವೃದ್ಧಾರೋಗ್ಯ ವಿಭಾಗದ ಮುಖ್ಯಸ್ಥೆ ಡಾ.ಪ್ರತಿಭಾ ಪೆರೇರಾ, ಕಾಲೇಜಿನ ಪ್ರಾಂಶುಪಾಲ ಹನುಮಂತಾಚಾರ್ ಜೋಶಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-39-102489023</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>