<p>ಮೈಸೂರು: ‘ತಾಲ್ಲೂಕಿನ ವರುಣ ಹೋಬಳಿಯ ಗುಡುಮಾದನಹಳ್ಳಿ ಬಳಿ ₹100 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಆಸ್ಪತ್ರೆಯು ಉದ್ದೇಶಿತ ಭೂಮಿಯಲ್ಲಿಯೇ ತ್ವರಿತವಾಗಿ ಪೂರ್ಣಗೊಂಡು, ಸಾರ್ವಜನಿಕರಿಗೆ ಸೇವೆ ಒದಗಿಸಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ಸದಸ್ಯ ಗೋವಿಂದರಾಜು ಒತ್ತಾಯಿಸಿದರು.</p>.<p>ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಮಾರು 20 ಎಕರೆ ಸರ್ಕಾರಿ ಭೂಮಿಯನ್ನು ಯೋಜನೆಗೆ ಬಳಸಲಾಗಿದೆ. ವಿಮಾನ ನಿಲ್ದಾಣ, ಹೊರವರ್ತುಲ ರಸ್ತೆಗೆ ಸಮೀಪದ ಈ ಜಾಗವು ಸ್ಥಳೀಯರಿಗೆ ಮಾತ್ರವಲ್ಲದೆ ತಮಿಳುನಾಡು, ಕೇರಳ ಭಾಗದ ರೋಗಿಗಳಿಗೂ ಅನುಕೂಲವಾಗಲಿದೆ. ಇಂಥ ಯೋಜನೆಯನ್ನು ಭೂವ್ಯಾಜ್ಯದೊಂದಿಗೆ ತಳುಕು ಹಾಕಲು ಕೆಲವರು ಪ್ರಯತ್ನಿಸುತ್ತಿರುವುದು ಖಂಡನೀಯ’ ಎಂದರು.</p>.<p>‘ಸ್ಪಷ್ಟವಾಗಿ ಸರ್ಕಾರಿ ಭೂಮಿಯಾಗಿದ್ದರೂ, ಕೆಲವರು ಯಾವುದೇ ದಾಖಲೆಗಳಿಲ್ಲದೇ ಈ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದು, ರೈತ ಮುಖಂಡರಿಗೂ ತಪ್ಪು ಮಾಹಿತಿ ನೀಡಿ ಹೋರಾಟ ಆಯೋಜಿಸುತ್ತಿದ್ದಾರೆ. ಯೋಜನೆಗೆ ಹಿನ್ನಡೆ ಮಾಡಲು ಮುಂದಾಗಿದ್ದಾರೆ. ನಿಜಕ್ಕೂ ನಷ್ಟ ಹೊಂದುವವರಿದ್ದರೆ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬೇಕು. ರೈತ ಮುಖಂಡರಿಗೂ ಸಂಘಟನೆಯಿಂದ ಈ ಬಗ್ಗೆ ಮನವರಿಕೆ ಮಾಡಲಾಗುವುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾದ ರಾಜಣ್ಣ ಇಟ್ನ, ಕೃಷ್ಣ ಕೊಳಘಟ್ಟ, ಸುರೇಶ್ ಯರಗನಹಳ್ಳಿ, ಜಿಲ್ಲಾ ಖಜಾಂಚಿ ಪುಟ್ಟಸ್ವಾಮಿ ದೇವರಸನಹಳ್ಳಿ, ಮುಖಂಡರಾದ ನಾಗರಾಜ ಬೆಲವತ್ತ, ಸೋಮು ಅಶೋಕಪುರಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-39-1771197774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ತಾಲ್ಲೂಕಿನ ವರುಣ ಹೋಬಳಿಯ ಗುಡುಮಾದನಹಳ್ಳಿ ಬಳಿ ₹100 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಆಸ್ಪತ್ರೆಯು ಉದ್ದೇಶಿತ ಭೂಮಿಯಲ್ಲಿಯೇ ತ್ವರಿತವಾಗಿ ಪೂರ್ಣಗೊಂಡು, ಸಾರ್ವಜನಿಕರಿಗೆ ಸೇವೆ ಒದಗಿಸಬೇಕು’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ಸದಸ್ಯ ಗೋವಿಂದರಾಜು ಒತ್ತಾಯಿಸಿದರು.</p>.<p>ಈಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಮಾರು 20 ಎಕರೆ ಸರ್ಕಾರಿ ಭೂಮಿಯನ್ನು ಯೋಜನೆಗೆ ಬಳಸಲಾಗಿದೆ. ವಿಮಾನ ನಿಲ್ದಾಣ, ಹೊರವರ್ತುಲ ರಸ್ತೆಗೆ ಸಮೀಪದ ಈ ಜಾಗವು ಸ್ಥಳೀಯರಿಗೆ ಮಾತ್ರವಲ್ಲದೆ ತಮಿಳುನಾಡು, ಕೇರಳ ಭಾಗದ ರೋಗಿಗಳಿಗೂ ಅನುಕೂಲವಾಗಲಿದೆ. ಇಂಥ ಯೋಜನೆಯನ್ನು ಭೂವ್ಯಾಜ್ಯದೊಂದಿಗೆ ತಳುಕು ಹಾಕಲು ಕೆಲವರು ಪ್ರಯತ್ನಿಸುತ್ತಿರುವುದು ಖಂಡನೀಯ’ ಎಂದರು.</p>.<p>‘ಸ್ಪಷ್ಟವಾಗಿ ಸರ್ಕಾರಿ ಭೂಮಿಯಾಗಿದ್ದರೂ, ಕೆಲವರು ಯಾವುದೇ ದಾಖಲೆಗಳಿಲ್ಲದೇ ಈ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದೇವೆ ಎಂದು ಹೇಳುತ್ತಿದ್ದು, ರೈತ ಮುಖಂಡರಿಗೂ ತಪ್ಪು ಮಾಹಿತಿ ನೀಡಿ ಹೋರಾಟ ಆಯೋಜಿಸುತ್ತಿದ್ದಾರೆ. ಯೋಜನೆಗೆ ಹಿನ್ನಡೆ ಮಾಡಲು ಮುಂದಾಗಿದ್ದಾರೆ. ನಿಜಕ್ಕೂ ನಷ್ಟ ಹೊಂದುವವರಿದ್ದರೆ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬೇಕು. ರೈತ ಮುಖಂಡರಿಗೂ ಸಂಘಟನೆಯಿಂದ ಈ ಬಗ್ಗೆ ಮನವರಿಕೆ ಮಾಡಲಾಗುವುದು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕರಾದ ರಾಜಣ್ಣ ಇಟ್ನ, ಕೃಷ್ಣ ಕೊಳಘಟ್ಟ, ಸುರೇಶ್ ಯರಗನಹಳ್ಳಿ, ಜಿಲ್ಲಾ ಖಜಾಂಚಿ ಪುಟ್ಟಸ್ವಾಮಿ ದೇವರಸನಹಳ್ಳಿ, ಮುಖಂಡರಾದ ನಾಗರಾಜ ಬೆಲವತ್ತ, ಸೋಮು ಅಶೋಕಪುರಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-39-1771197774</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>