<p>ಮೈಸೂರು: ಹುಣಸೂರು ತಾಲ್ಲೂಕಿನಲ್ಲಿ ಪತ್ತೆಯಾಗಿರುವ ಡ್ರಗ್ಸ್ ದಾಸ್ತಾನು ಕೊಠಡಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದ ಅಗ್ರಹಾರ ವೃತ್ತದಲ್ಲಿ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು.</p>.<p>ಸಂಘಟನೆ ರಾಜ್ಯ ಕಾರ್ಯಕಾರಣಿ ಸದಸ್ಯೆ ಮೇಘನಾ ಕೋಡಬಾಳ ಮಾತನಾಡಿ, ‘ಹುಣಸೂರು ತಾಲ್ಲೂಕಿನ ದಾಸನಹಳ್ಳಿಯಲ್ಲಿ ಈಚೆಗೆ ಪತ್ತೆಯಾದ ಡ್ರಗ್ಸ್ ಸಂಗ್ರಹ ದಾಸ್ತಾನು ಸಮಸ್ಯೆಯ ಗಂಭೀರತೆ ತೆರೆದಿಟ್ಟಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ಅದರ ಜಾಲ ಪತ್ತೆಹಚ್ಚಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಮಾದಕ ವಸ್ತುಗಳ ಜಾಲ ವ್ಯಾಪಕವಾಗುತ್ತಿರುವುದು ಆಘಾತಕಾರಿ ಬೆಳವಣಿಗೆ. ಯುವಕರನ್ನು ಗುರಿಯಾಗಿಸಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸಮಾಜದ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರಿಗೂ ವಾಗ್ವಾದ ನಡೆಯಿತು. ಬಳಿಕ ಪ್ರತಿಭಟಕಾರರನ್ನು ಪೊಲೀಸರು ಮನವೊಲಿಸಿದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-317428615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಹುಣಸೂರು ತಾಲ್ಲೂಕಿನಲ್ಲಿ ಪತ್ತೆಯಾಗಿರುವ ಡ್ರಗ್ಸ್ ದಾಸ್ತಾನು ಕೊಠಡಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದ ಅಗ್ರಹಾರ ವೃತ್ತದಲ್ಲಿ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು.</p>.<p>ಸಂಘಟನೆ ರಾಜ್ಯ ಕಾರ್ಯಕಾರಣಿ ಸದಸ್ಯೆ ಮೇಘನಾ ಕೋಡಬಾಳ ಮಾತನಾಡಿ, ‘ಹುಣಸೂರು ತಾಲ್ಲೂಕಿನ ದಾಸನಹಳ್ಳಿಯಲ್ಲಿ ಈಚೆಗೆ ಪತ್ತೆಯಾದ ಡ್ರಗ್ಸ್ ಸಂಗ್ರಹ ದಾಸ್ತಾನು ಸಮಸ್ಯೆಯ ಗಂಭೀರತೆ ತೆರೆದಿಟ್ಟಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕು. ಅದರ ಜಾಲ ಪತ್ತೆಹಚ್ಚಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದರು.</p>.<p>‘ಗ್ರಾಮೀಣ ಪ್ರದೇಶದಲ್ಲಿ ಮಾದಕ ವಸ್ತುಗಳ ಜಾಲ ವ್ಯಾಪಕವಾಗುತ್ತಿರುವುದು ಆಘಾತಕಾರಿ ಬೆಳವಣಿಗೆ. ಯುವಕರನ್ನು ಗುರಿಯಾಗಿಸಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಸಮಾಜದ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆಯು ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರಿಗೂ ವಾಗ್ವಾದ ನಡೆಯಿತು. ಬಳಿಕ ಪ್ರತಿಭಟಕಾರರನ್ನು ಪೊಲೀಸರು ಮನವೊಲಿಸಿದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-38-317428615</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>